Homeಕರ್ನಾಟಕಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಅನಂತ್ ಕುಮಾರ್ ಹೆಗ್ಡೆ‌ ಮತ್ತು ಕೆ.ಎಸ್‌ ಈಶ್ವರಪ್ಪ ಅವರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಳಸುವ ಭಾಷೆಯ ಮೇಲೆ ಎಚ್ಚರಿಕೆ ಇರಲಿ ಎಂದು ಮೌಖಿಕ ಸೂಚನೆ ಕೊಟ್ಟಿದೆ.

ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಗೌರವ ಕೊಡಬೇಕು

“ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್‌ ಹೆಗ್ಡೆ‌ ಬಳಕೆ ಮಾಡಿರುವುದು ಕೀಳು ಮಟ್ಟದ ಭಾಷೆ, ಇದು ಶೋಭೆ ತರುವಂಥದ್ದಲ್ಲ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ತಿಳಿಸಿದೆ.

ರಾಮ ಮಂದಿರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಂತಕುಮಾರ್‌ ಹೆಗ್ಡೆ, ತಮ್ಮ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ನ್ಯಾ. ದೀಕ್ಷಿತ್‌ ಅವರು, “ಅನಂತ್‌ ಕುಮಾರ್ ಹೆಗ್ಡೆ ಉತ್ತಮ ವಾಗ್ಮಿಯಾಗಿರಬಹುದು. ಹಾಗಂತ ಅವರು, ಮುಖ್ಯಮಂತ್ರಿಗೆ ಗೌರವ ಕೊಡಲ್ಲ ಎಂದರೆ ಹೇಗೆ? ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿ, ಪ್ರಧಾನಿ ಮಂತ್ರಿಗೆ ಗೌರವ ಕೊಡುವುದು ಜವಾಬ್ದಾರಿ. ಮುಖ್ಯಮಂತ್ರಿಗಳ ಕಾರ್ಯ ನೀತಿ ನಿಮಗೆ ಇಷ್ಟವಾಗದಿದ್ದರೆ, ಅದಕ್ಕೆ ಸರಿಯಾದ ರೀತಿಯಲ್ಲಿ ಟೀಕೆ ವ್ಯಕ್ತಪಡಿಸಬಹುದು. ಆದರೆ, ಕೀಳು ಭಾಷೆಯ ಪದ ಬಳಕೆ ಬಗ್ಗೆ ಎಚ್ಚರವಿರಲಿ ಎಂದು ಖಾರವಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

“ನೀ ಬರಲಿ, ಬಿಡು ರಾಮ ಜನ್ಮಭೂಮಿ ನಿನ್ನದಲ್ಲ ಮಗನೇ” ಎಂದು ಬಿಜೆಪಿ ಸಂಸದ ಅನಂತಕುಮಾರ್‌ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು.

“ಅವರಿಗೆ ನಾವು ಮತ ಹಾಕುತ್ತೇವೋ, ಇಲ್ಲವೋ ಅವರು ನಮ್ಮ ಮುಖ್ಯಮಂತ್ರಿ. ಏಕವಚನದಲ್ಲಿ ಮಾತನಾಡುವುದು ಶೋಭೆ ತರುವಂಥದಲ್ಲ. ಅವರಾಗಲಿ, ನೀವಾಗಲಿ ಹೀಗೆ ಮಾತನಾಡುವಂತಿಲ್ಲ. ಮುಖ್ಯಮಂತ್ರಿಗಳ ನೀತಿಯನ್ನು ನಾವು ಇಷ್ಟ ಪಡುತ್ತೇವೋ ಇಲ್ಲವೋ, ಅವರು ನಮ್ಮ ಮುಖ್ಯಮಂತ್ರಿ. ಅವರನ್ನು ಬಿಟ್ಟು ನಮಗೆ ಬೇರೆ ಮಖ್ಯಮಂತ್ರಿ ಇದ್ದಾರೆಯೇ? ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿಯನ್ನು, ನಾವು ಒಪ್ಪಲಿ ಬಿಡಲಿ.. ಅವರು ನಮ್ಮ ರಾಜ್ಯದವರು. ಚುನಾವಣೆಯಲ್ಲಿ ಸೋಲಿಸಿ, ಅದು ಬೇರೆ ಮಾತು” ಎಂದು ನ್ಯಾಯಮೂರ್ತಿ ಹೇಳಿದ್ದಾಗಿ ವರದಿಯಾಗಿದೆ.

ಅಂತಿಮವಾಗಿ ಪೀಠವು ಅರ್ಜಿದಾರರ ವಿರುದ್ಧ ಮುಂದಿನ ವಿಚಾರಣೆಯವರೆಗೆ ಯಾವುದೇ ದುರುದ್ದೇಶಪೂರಿತ ಕ್ರಮಕೈಗೊಳ್ಳದಂತೆ ಸರ್ಕಾರಕ್ಕೆ ಆದೇಶಿಸಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರವಾಗಿ ವಕೀಲ ಪವನ್‌ ಚಂದ್ರ ಶೆಟ್ಟಿ ಹೆಚ್, ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಗದೀಶ್‌ ಅವರು ವಾದ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ಸಂಬಂಧಿಸಿದಂತೆ ಅನಂತಕುಮಾರ್‌ ಹೆಗ್ಡೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಠಾಣೆಯಲ್ಲಿಐಪಿಸಿ ಸೆಕ್ಷನ್‌ಗಳಾದ 153,153ಎ, 505(2) ಅಡಿ ಪ್ರಕರಣ ದಾಖಲಿಸಲಾಗಿದೆ. ಇದರ ವಜಾ ಕೋರಿ ಹೆಗ್ಡೆ ಹೈಕೋರ್ಟ್‌ ಕದ ತಟ್ಟಿದ್ದಾರೆ.

ಈಶ್ವರಪ್ಪಗೂ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

“ನಮ್ಮದು ಬಹುಭಾಷೆ, ಬಹು ಧರ್ಮ ಮತ್ತು ಬಹು ಸಂಸ್ಕೃತಿಗಳ ರಾಷ್ಟ್ರ. ಎಷ್ಟೋ ಕಡೆ ಸ್ವಲ್ಪ ಏನೋ ಮಾತನಾಡಿದರೆ ಬೆಂಕಿ ಹತ್ತುವ ಪರಿಸ್ಥಿತಿ ಇದೆ. ಹಾಗಾಗಿ, ಭಾಷಾ ಪ್ರಯೋಗ ಜವಾಬ್ದಾರಿಯುತವಾಗಿರಬೇಕು. ಸಂಸ್ಕೃತಿ ಬಿಂಬಿತವಾಗುವಂತೆ ಮಾತನಾಡಬೇಕು ಎಂದು ಹೈಕೋರ್ಟ್‌ ಶುಕ್ರವಾರ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಅವರಿಗೆ ಮೌಖಿಕವಾಗಿ ಸೂಚಿಸಿದೆ ಎಂದು

“ದೇಶವನ್ನು ಛಿದ್ರ ಮಾಡುತ್ತೇವೆ ಎಂದು ಹೋರಾಡುತ್ತಿರುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ” ಎಂಬ ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ದಾವಣಗೆರೆ ಎಕ್ಷ್‌ಟೆನ್ಷನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ಪೀಠವು “ನಮ್ಮ ರಾಜಕೀಯ ನಾಯಕರೆಲ್ಲಾ ಭಾಷೆಯ ಮೇಲೆ ಎಷ್ಟೊಂದು ದೌರ್ಜನ್ಯ ಎಸಗುತ್ತಾರೆ!? ನಮ್ಮ ನಾಯಕರು ಎಂದು ಶಾಲೆಯ ಮಕ್ಕಳೆಲ್ಲಾ ನೋಡುತ್ತಿರುತ್ತಾರೆ. ಎಲ್ಲರೂ ಬಹುಮುಖ್ಯವಾಗಿ ನಮ್ಮ ಧುರೀಣರು ಒಳ್ಳೆಯ ಭಾಷೆಯನ್ನು ಏಕೆ ಬಳಸುವುದಿಲ್ಲ? ಮಾತನಾಡುವಾಗ ಸಂಸ್ಕೃತಿ ಕಾಣುವ ರೀತಿಯಲ್ಲಿ ಏಕೆ ಮಾತನಾಡಬಾರದು. ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು ಯಾರೇ ಇರಬಹುದು. ಅವರೆಲ್ಲಾ ನಮ್ಮ ಪರವಾಗಿ ಕೆಲಸ ಮಾಡುತ್ತಾರೆ. ನಾವು ಏನೋ ಒಂದು ಮಾತನಾಡಬಾರದು. ಸಂಯಮದಿಂದ ಭಾಷಾ ಪ್ರಯೋಗ ಮಾಡಬೇಕು ಎಂಬುದು ನನ್ನ ಪ್ರಾರ್ಥನೆ” ಎಂದು ಹೇಳಿದೆ.

ಈಶ್ವರಪ್ಪ ವಿರುದ್ಧದ ಎಫ್‌ಐಆರ್‌ ಮತ್ತು ಮುಂದಿನ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ವಿಧಿಸಿ, ಪ್ರತಿವಾದಿಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಗದೀಶ್‌ ಅವರು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ, ಅವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...