Homeಕರ್ನಾಟಕಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಅನಂತ್ ಕುಮಾರ್ ಹೆಗ್ಡೆ‌ ಮತ್ತು ಕೆ.ಎಸ್‌ ಈಶ್ವರಪ್ಪ ಅವರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಳಸುವ ಭಾಷೆಯ ಮೇಲೆ ಎಚ್ಚರಿಕೆ ಇರಲಿ ಎಂದು ಮೌಖಿಕ ಸೂಚನೆ ಕೊಟ್ಟಿದೆ.

ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಗೌರವ ಕೊಡಬೇಕು

“ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್‌ ಹೆಗ್ಡೆ‌ ಬಳಕೆ ಮಾಡಿರುವುದು ಕೀಳು ಮಟ್ಟದ ಭಾಷೆ, ಇದು ಶೋಭೆ ತರುವಂಥದ್ದಲ್ಲ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ತಿಳಿಸಿದೆ.

ರಾಮ ಮಂದಿರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಂತಕುಮಾರ್‌ ಹೆಗ್ಡೆ, ತಮ್ಮ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ನ್ಯಾ. ದೀಕ್ಷಿತ್‌ ಅವರು, “ಅನಂತ್‌ ಕುಮಾರ್ ಹೆಗ್ಡೆ ಉತ್ತಮ ವಾಗ್ಮಿಯಾಗಿರಬಹುದು. ಹಾಗಂತ ಅವರು, ಮುಖ್ಯಮಂತ್ರಿಗೆ ಗೌರವ ಕೊಡಲ್ಲ ಎಂದರೆ ಹೇಗೆ? ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿ, ಪ್ರಧಾನಿ ಮಂತ್ರಿಗೆ ಗೌರವ ಕೊಡುವುದು ಜವಾಬ್ದಾರಿ. ಮುಖ್ಯಮಂತ್ರಿಗಳ ಕಾರ್ಯ ನೀತಿ ನಿಮಗೆ ಇಷ್ಟವಾಗದಿದ್ದರೆ, ಅದಕ್ಕೆ ಸರಿಯಾದ ರೀತಿಯಲ್ಲಿ ಟೀಕೆ ವ್ಯಕ್ತಪಡಿಸಬಹುದು. ಆದರೆ, ಕೀಳು ಭಾಷೆಯ ಪದ ಬಳಕೆ ಬಗ್ಗೆ ಎಚ್ಚರವಿರಲಿ ಎಂದು ಖಾರವಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

“ನೀ ಬರಲಿ, ಬಿಡು ರಾಮ ಜನ್ಮಭೂಮಿ ನಿನ್ನದಲ್ಲ ಮಗನೇ” ಎಂದು ಬಿಜೆಪಿ ಸಂಸದ ಅನಂತಕುಮಾರ್‌ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು.

“ಅವರಿಗೆ ನಾವು ಮತ ಹಾಕುತ್ತೇವೋ, ಇಲ್ಲವೋ ಅವರು ನಮ್ಮ ಮುಖ್ಯಮಂತ್ರಿ. ಏಕವಚನದಲ್ಲಿ ಮಾತನಾಡುವುದು ಶೋಭೆ ತರುವಂಥದಲ್ಲ. ಅವರಾಗಲಿ, ನೀವಾಗಲಿ ಹೀಗೆ ಮಾತನಾಡುವಂತಿಲ್ಲ. ಮುಖ್ಯಮಂತ್ರಿಗಳ ನೀತಿಯನ್ನು ನಾವು ಇಷ್ಟ ಪಡುತ್ತೇವೋ ಇಲ್ಲವೋ, ಅವರು ನಮ್ಮ ಮುಖ್ಯಮಂತ್ರಿ. ಅವರನ್ನು ಬಿಟ್ಟು ನಮಗೆ ಬೇರೆ ಮಖ್ಯಮಂತ್ರಿ ಇದ್ದಾರೆಯೇ? ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿಯನ್ನು, ನಾವು ಒಪ್ಪಲಿ ಬಿಡಲಿ.. ಅವರು ನಮ್ಮ ರಾಜ್ಯದವರು. ಚುನಾವಣೆಯಲ್ಲಿ ಸೋಲಿಸಿ, ಅದು ಬೇರೆ ಮಾತು” ಎಂದು ನ್ಯಾಯಮೂರ್ತಿ ಹೇಳಿದ್ದಾಗಿ ವರದಿಯಾಗಿದೆ.

ಅಂತಿಮವಾಗಿ ಪೀಠವು ಅರ್ಜಿದಾರರ ವಿರುದ್ಧ ಮುಂದಿನ ವಿಚಾರಣೆಯವರೆಗೆ ಯಾವುದೇ ದುರುದ್ದೇಶಪೂರಿತ ಕ್ರಮಕೈಗೊಳ್ಳದಂತೆ ಸರ್ಕಾರಕ್ಕೆ ಆದೇಶಿಸಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರವಾಗಿ ವಕೀಲ ಪವನ್‌ ಚಂದ್ರ ಶೆಟ್ಟಿ ಹೆಚ್, ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಗದೀಶ್‌ ಅವರು ವಾದ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ಸಂಬಂಧಿಸಿದಂತೆ ಅನಂತಕುಮಾರ್‌ ಹೆಗ್ಡೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಠಾಣೆಯಲ್ಲಿಐಪಿಸಿ ಸೆಕ್ಷನ್‌ಗಳಾದ 153,153ಎ, 505(2) ಅಡಿ ಪ್ರಕರಣ ದಾಖಲಿಸಲಾಗಿದೆ. ಇದರ ವಜಾ ಕೋರಿ ಹೆಗ್ಡೆ ಹೈಕೋರ್ಟ್‌ ಕದ ತಟ್ಟಿದ್ದಾರೆ.

ಈಶ್ವರಪ್ಪಗೂ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

“ನಮ್ಮದು ಬಹುಭಾಷೆ, ಬಹು ಧರ್ಮ ಮತ್ತು ಬಹು ಸಂಸ್ಕೃತಿಗಳ ರಾಷ್ಟ್ರ. ಎಷ್ಟೋ ಕಡೆ ಸ್ವಲ್ಪ ಏನೋ ಮಾತನಾಡಿದರೆ ಬೆಂಕಿ ಹತ್ತುವ ಪರಿಸ್ಥಿತಿ ಇದೆ. ಹಾಗಾಗಿ, ಭಾಷಾ ಪ್ರಯೋಗ ಜವಾಬ್ದಾರಿಯುತವಾಗಿರಬೇಕು. ಸಂಸ್ಕೃತಿ ಬಿಂಬಿತವಾಗುವಂತೆ ಮಾತನಾಡಬೇಕು ಎಂದು ಹೈಕೋರ್ಟ್‌ ಶುಕ್ರವಾರ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಅವರಿಗೆ ಮೌಖಿಕವಾಗಿ ಸೂಚಿಸಿದೆ ಎಂದು

“ದೇಶವನ್ನು ಛಿದ್ರ ಮಾಡುತ್ತೇವೆ ಎಂದು ಹೋರಾಡುತ್ತಿರುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ” ಎಂಬ ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ದಾವಣಗೆರೆ ಎಕ್ಷ್‌ಟೆನ್ಷನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ಪೀಠವು “ನಮ್ಮ ರಾಜಕೀಯ ನಾಯಕರೆಲ್ಲಾ ಭಾಷೆಯ ಮೇಲೆ ಎಷ್ಟೊಂದು ದೌರ್ಜನ್ಯ ಎಸಗುತ್ತಾರೆ!? ನಮ್ಮ ನಾಯಕರು ಎಂದು ಶಾಲೆಯ ಮಕ್ಕಳೆಲ್ಲಾ ನೋಡುತ್ತಿರುತ್ತಾರೆ. ಎಲ್ಲರೂ ಬಹುಮುಖ್ಯವಾಗಿ ನಮ್ಮ ಧುರೀಣರು ಒಳ್ಳೆಯ ಭಾಷೆಯನ್ನು ಏಕೆ ಬಳಸುವುದಿಲ್ಲ? ಮಾತನಾಡುವಾಗ ಸಂಸ್ಕೃತಿ ಕಾಣುವ ರೀತಿಯಲ್ಲಿ ಏಕೆ ಮಾತನಾಡಬಾರದು. ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು ಯಾರೇ ಇರಬಹುದು. ಅವರೆಲ್ಲಾ ನಮ್ಮ ಪರವಾಗಿ ಕೆಲಸ ಮಾಡುತ್ತಾರೆ. ನಾವು ಏನೋ ಒಂದು ಮಾತನಾಡಬಾರದು. ಸಂಯಮದಿಂದ ಭಾಷಾ ಪ್ರಯೋಗ ಮಾಡಬೇಕು ಎಂಬುದು ನನ್ನ ಪ್ರಾರ್ಥನೆ” ಎಂದು ಹೇಳಿದೆ.

ಈಶ್ವರಪ್ಪ ವಿರುದ್ಧದ ಎಫ್‌ಐಆರ್‌ ಮತ್ತು ಮುಂದಿನ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ವಿಧಿಸಿ, ಪ್ರತಿವಾದಿಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಗದೀಶ್‌ ಅವರು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ, ಅವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...