Homeಕರ್ನಾಟಕಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಅನಂತ್ ಕುಮಾರ್ ಹೆಗ್ಡೆ‌ ಮತ್ತು ಕೆ.ಎಸ್‌ ಈಶ್ವರಪ್ಪ ಅವರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಳಸುವ ಭಾಷೆಯ ಮೇಲೆ ಎಚ್ಚರಿಕೆ ಇರಲಿ ಎಂದು ಮೌಖಿಕ ಸೂಚನೆ ಕೊಟ್ಟಿದೆ.

ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಗೌರವ ಕೊಡಬೇಕು

“ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್‌ ಹೆಗ್ಡೆ‌ ಬಳಕೆ ಮಾಡಿರುವುದು ಕೀಳು ಮಟ್ಟದ ಭಾಷೆ, ಇದು ಶೋಭೆ ತರುವಂಥದ್ದಲ್ಲ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ತಿಳಿಸಿದೆ.

ರಾಮ ಮಂದಿರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಂತಕುಮಾರ್‌ ಹೆಗ್ಡೆ, ತಮ್ಮ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ನ್ಯಾ. ದೀಕ್ಷಿತ್‌ ಅವರು, “ಅನಂತ್‌ ಕುಮಾರ್ ಹೆಗ್ಡೆ ಉತ್ತಮ ವಾಗ್ಮಿಯಾಗಿರಬಹುದು. ಹಾಗಂತ ಅವರು, ಮುಖ್ಯಮಂತ್ರಿಗೆ ಗೌರವ ಕೊಡಲ್ಲ ಎಂದರೆ ಹೇಗೆ? ಸಾಂವಿಧಾನಿಕ ಹುದ್ದೆಯಲ್ಲಿರುವ ಮುಖ್ಯಮಂತ್ರಿ, ಪ್ರಧಾನಿ ಮಂತ್ರಿಗೆ ಗೌರವ ಕೊಡುವುದು ಜವಾಬ್ದಾರಿ. ಮುಖ್ಯಮಂತ್ರಿಗಳ ಕಾರ್ಯ ನೀತಿ ನಿಮಗೆ ಇಷ್ಟವಾಗದಿದ್ದರೆ, ಅದಕ್ಕೆ ಸರಿಯಾದ ರೀತಿಯಲ್ಲಿ ಟೀಕೆ ವ್ಯಕ್ತಪಡಿಸಬಹುದು. ಆದರೆ, ಕೀಳು ಭಾಷೆಯ ಪದ ಬಳಕೆ ಬಗ್ಗೆ ಎಚ್ಚರವಿರಲಿ ಎಂದು ಖಾರವಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

“ನೀ ಬರಲಿ, ಬಿಡು ರಾಮ ಜನ್ಮಭೂಮಿ ನಿನ್ನದಲ್ಲ ಮಗನೇ” ಎಂದು ಬಿಜೆಪಿ ಸಂಸದ ಅನಂತಕುಮಾರ್‌ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು.

“ಅವರಿಗೆ ನಾವು ಮತ ಹಾಕುತ್ತೇವೋ, ಇಲ್ಲವೋ ಅವರು ನಮ್ಮ ಮುಖ್ಯಮಂತ್ರಿ. ಏಕವಚನದಲ್ಲಿ ಮಾತನಾಡುವುದು ಶೋಭೆ ತರುವಂಥದಲ್ಲ. ಅವರಾಗಲಿ, ನೀವಾಗಲಿ ಹೀಗೆ ಮಾತನಾಡುವಂತಿಲ್ಲ. ಮುಖ್ಯಮಂತ್ರಿಗಳ ನೀತಿಯನ್ನು ನಾವು ಇಷ್ಟ ಪಡುತ್ತೇವೋ ಇಲ್ಲವೋ, ಅವರು ನಮ್ಮ ಮುಖ್ಯಮಂತ್ರಿ. ಅವರನ್ನು ಬಿಟ್ಟು ನಮಗೆ ಬೇರೆ ಮಖ್ಯಮಂತ್ರಿ ಇದ್ದಾರೆಯೇ? ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿಯನ್ನು, ನಾವು ಒಪ್ಪಲಿ ಬಿಡಲಿ.. ಅವರು ನಮ್ಮ ರಾಜ್ಯದವರು. ಚುನಾವಣೆಯಲ್ಲಿ ಸೋಲಿಸಿ, ಅದು ಬೇರೆ ಮಾತು” ಎಂದು ನ್ಯಾಯಮೂರ್ತಿ ಹೇಳಿದ್ದಾಗಿ ವರದಿಯಾಗಿದೆ.

ಅಂತಿಮವಾಗಿ ಪೀಠವು ಅರ್ಜಿದಾರರ ವಿರುದ್ಧ ಮುಂದಿನ ವಿಚಾರಣೆಯವರೆಗೆ ಯಾವುದೇ ದುರುದ್ದೇಶಪೂರಿತ ಕ್ರಮಕೈಗೊಳ್ಳದಂತೆ ಸರ್ಕಾರಕ್ಕೆ ಆದೇಶಿಸಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರವಾಗಿ ವಕೀಲ ಪವನ್‌ ಚಂದ್ರ ಶೆಟ್ಟಿ ಹೆಚ್, ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಗದೀಶ್‌ ಅವರು ವಾದ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ಸಂಬಂಧಿಸಿದಂತೆ ಅನಂತಕುಮಾರ್‌ ಹೆಗ್ಡೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಠಾಣೆಯಲ್ಲಿಐಪಿಸಿ ಸೆಕ್ಷನ್‌ಗಳಾದ 153,153ಎ, 505(2) ಅಡಿ ಪ್ರಕರಣ ದಾಖಲಿಸಲಾಗಿದೆ. ಇದರ ವಜಾ ಕೋರಿ ಹೆಗ್ಡೆ ಹೈಕೋರ್ಟ್‌ ಕದ ತಟ್ಟಿದ್ದಾರೆ.

ಈಶ್ವರಪ್ಪಗೂ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

“ನಮ್ಮದು ಬಹುಭಾಷೆ, ಬಹು ಧರ್ಮ ಮತ್ತು ಬಹು ಸಂಸ್ಕೃತಿಗಳ ರಾಷ್ಟ್ರ. ಎಷ್ಟೋ ಕಡೆ ಸ್ವಲ್ಪ ಏನೋ ಮಾತನಾಡಿದರೆ ಬೆಂಕಿ ಹತ್ತುವ ಪರಿಸ್ಥಿತಿ ಇದೆ. ಹಾಗಾಗಿ, ಭಾಷಾ ಪ್ರಯೋಗ ಜವಾಬ್ದಾರಿಯುತವಾಗಿರಬೇಕು. ಸಂಸ್ಕೃತಿ ಬಿಂಬಿತವಾಗುವಂತೆ ಮಾತನಾಡಬೇಕು ಎಂದು ಹೈಕೋರ್ಟ್‌ ಶುಕ್ರವಾರ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಅವರಿಗೆ ಮೌಖಿಕವಾಗಿ ಸೂಚಿಸಿದೆ ಎಂದು

“ದೇಶವನ್ನು ಛಿದ್ರ ಮಾಡುತ್ತೇವೆ ಎಂದು ಹೋರಾಡುತ್ತಿರುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ” ಎಂಬ ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ದಾವಣಗೆರೆ ಎಕ್ಷ್‌ಟೆನ್ಷನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆಯ ವೇಳೆ ಪೀಠವು “ನಮ್ಮ ರಾಜಕೀಯ ನಾಯಕರೆಲ್ಲಾ ಭಾಷೆಯ ಮೇಲೆ ಎಷ್ಟೊಂದು ದೌರ್ಜನ್ಯ ಎಸಗುತ್ತಾರೆ!? ನಮ್ಮ ನಾಯಕರು ಎಂದು ಶಾಲೆಯ ಮಕ್ಕಳೆಲ್ಲಾ ನೋಡುತ್ತಿರುತ್ತಾರೆ. ಎಲ್ಲರೂ ಬಹುಮುಖ್ಯವಾಗಿ ನಮ್ಮ ಧುರೀಣರು ಒಳ್ಳೆಯ ಭಾಷೆಯನ್ನು ಏಕೆ ಬಳಸುವುದಿಲ್ಲ? ಮಾತನಾಡುವಾಗ ಸಂಸ್ಕೃತಿ ಕಾಣುವ ರೀತಿಯಲ್ಲಿ ಏಕೆ ಮಾತನಾಡಬಾರದು. ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು ಯಾರೇ ಇರಬಹುದು. ಅವರೆಲ್ಲಾ ನಮ್ಮ ಪರವಾಗಿ ಕೆಲಸ ಮಾಡುತ್ತಾರೆ. ನಾವು ಏನೋ ಒಂದು ಮಾತನಾಡಬಾರದು. ಸಂಯಮದಿಂದ ಭಾಷಾ ಪ್ರಯೋಗ ಮಾಡಬೇಕು ಎಂಬುದು ನನ್ನ ಪ್ರಾರ್ಥನೆ” ಎಂದು ಹೇಳಿದೆ.

ಈಶ್ವರಪ್ಪ ವಿರುದ್ಧದ ಎಫ್‌ಐಆರ್‌ ಮತ್ತು ಮುಂದಿನ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ವಿಧಿಸಿ, ಪ್ರತಿವಾದಿಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಗದೀಶ್‌ ಅವರು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ, ಅವರಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...