Homeಕರ್ನಾಟಕಕೆಪಿಎಸ್‌ಸಿ ಸಂದರ್ಶನ ಅಂಕಗಳ ಕಡಿತಕ್ಕೆ ಎಚ್‌.ಡಿ.ದೇವೇಗೌಡ ವಿರೋಧ

ಕೆಪಿಎಸ್‌ಸಿ ಸಂದರ್ಶನ ಅಂಕಗಳ ಕಡಿತಕ್ಕೆ ಎಚ್‌.ಡಿ.ದೇವೇಗೌಡ ವಿರೋಧ

- Advertisement -
- Advertisement -

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ.ದೇವೇಗೌಡ ವಿರೋಧಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ದೇವೇಗೌಡರು, “ಸಾಂವಿಧಾನಿಕ ಸಂಸ್ಥೆಯಾಗಿರುವ ಕೆಪಿಎಸ್‌ಸಿಯಲ್ಲಿ ಕಾಲಕಾಲಕ್ಕೆ ಬದಲಾವಣೆ ಅಗತ್ಯ. ಆದರೆ, ಅಂತಹ ಬದಲಾವಣೆಗಳು ಎಲ್ಲ ಕಾಲಕ್ಕೂ ಹೊಂದಿಕೆಯಾಗಬೇಕು ಮತ್ತು ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯಲ್ಲೇ ಇರಬೇಕು” ಎಂದು ಹೇಳಿದ್ದಾರೆ.

ಆಯೋಗವು ಇತ್ತೀಚಿನ ದಿನಗಳಲ್ಲಿ ಬದಲಾವಣೆಯ ನೆಪದಲ್ಲಿ ಸರ್ವಸಮ್ಮತವಾದ ಮತ್ತು ಬಹುಕಾಲದಿಂದ ಅನುಸರಿಸುತ್ತಿರುವ ಪ್ರಮಾಣಿತ ಕಾರ್ಯವಿಧಾನಗಳಿಗೆ ವಿರುದ್ಧವಾದ ದಿಕ್ಕಿನಲ್ಲಿ ಸಾಗುವಂತೆ ಭಾಸವಾಗುತ್ತಿದೆ. ಇಂತಹ ದೂರದೃಷ್ಟಿಯಿಲ್ಲದ ಬದಲಾವಣೆಗಳಿಂದ ಭವಿಷ್ಯದಲ್ಲಿ ಉತ್ತಮ ಮತ್ತು ಕಾರ್ಯದಕ್ಷತೆಯುಳ್ಳ ಅಧಿಕಾರಿಗಳನ್ನು ಆಯ್ಕೆಮಾಡಲು ಕಷ್ಟವಾಗಬಹುದು ಎಂದಿದ್ದಾರೆ.

ಆಯೋಗದಲ್ಲಿ ದೀರ್ಘಕಾಲದಿಂದ ಜಾರಿಯಲ್ಲಿದ್ದ ಪ್ರಮಾಣಿತ ಕಾರ್ಯವಿಧಾನವನ್ನು 2020ರ ಜೂನ್‌ 4ರಂದು ಬದಲಾವಣೆ ಮಾಡಲಾಗಿತ್ತು. ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು 150ರಿಂದ 50ಕ್ಕೆ ಇಳಿಕೆ ಮಾಡಲಾಗಿತ್ತು. ಈಗ ಅದನ್ನು 25ಕ್ಕೆ ಇಳಿಸುವ ತೀರ್ಮಾನ ಮಾಡಲಾಗಿದೆ. ಇಂತಹ ತೀರ್ಮಾನದಿಂದ ಗ್ರಾಮೀಣ ಪ್ರದೇಶದ ಸ್ಪರ್ಧಾ ಆಕಾಂಕ್ಷಿಗಳಿಗೆ ತೊಂದರೆಯಾಗುತ್ತದೆ ಎಂದು ದೇವೇಗೌಡ ಹೇಳಿದ್ದಾರೆ.

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಕೆಪಿಎಸ್‌ಸಿ ಕುರಿತು ಸಾರ್ವಜನಿಕರಲ್ಲಿ ಗೌರವ ಕಡಿಮೆಯಾಗುವುದರಲ್ಲಿ ಸಂಶಯವಿಲ್ಲ. ಈ ಎಲ್ಲ ಋಣಾತ್ಮಕ ತೀರ್ಮಾನಗಳನ್ನು ಕೈಬಿಡಬೇಕು. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲೇ ಮುಖ್ಯ ಪರೀಕ್ಷೆಯ ಅಂಕಗಳು ಮತ್ತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿರಿ: ಏಪ್ರಿಲ್ 10ರಿಂದ ಮೇ 15ವರೆಗೆ ಶಾಲೆಗಳಿಗೆ ಬೇಸಿಗೆ ರಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇವೆಗೌಡರೆ, ನಿಮ್ಮಂತಹ ರಾಜಕೀಯ ವ್ಯಕ್ತಿಗಳ ಕೃಪಾ ಕಟಾಕ್ಷದಿಂದ KPSC ಎಂಬ ಸ್ವತಂತ್ರ ಸಂಸ್ಥೆ ಭ್ರಷ್ಟಾಚಾರಿಗಳ ಕೂಪವಾಗಿದೆ. ನಿಮಗೆ ಮಾನ ಮರ್ಯಾದೆ ಎನಾದರೂ ಇದ್ದರೆ ತೆಪ್ಪಗೆ ಬಾಯಿ ಮುಚ್ಚಿಕೊಂಡು ಇರಿ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೇ ದಿಕ್ಕರಿಸಿ 2011 ರ ನೇಮಕಾತಿ ಸಿಂಧು ಗೊಳಿಸಲು ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಾಗಲೇ ನಿಮ್ಮ ಯೋಗ್ಯತೆ ಎನು ಎಂದು ರಾಜ್ಯದ ಜನ ಕಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...