Homeಕರ್ನಾಟಕಕೆಪಿಎಸ್‌ಸಿ ಸಂದರ್ಶನ ಅಂಕಗಳ ಕಡಿತಕ್ಕೆ ಎಚ್‌.ಡಿ.ದೇವೇಗೌಡ ವಿರೋಧ

ಕೆಪಿಎಸ್‌ಸಿ ಸಂದರ್ಶನ ಅಂಕಗಳ ಕಡಿತಕ್ಕೆ ಎಚ್‌.ಡಿ.ದೇವೇಗೌಡ ವಿರೋಧ

- Advertisement -
- Advertisement -

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ.ದೇವೇಗೌಡ ವಿರೋಧಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ದೇವೇಗೌಡರು, “ಸಾಂವಿಧಾನಿಕ ಸಂಸ್ಥೆಯಾಗಿರುವ ಕೆಪಿಎಸ್‌ಸಿಯಲ್ಲಿ ಕಾಲಕಾಲಕ್ಕೆ ಬದಲಾವಣೆ ಅಗತ್ಯ. ಆದರೆ, ಅಂತಹ ಬದಲಾವಣೆಗಳು ಎಲ್ಲ ಕಾಲಕ್ಕೂ ಹೊಂದಿಕೆಯಾಗಬೇಕು ಮತ್ತು ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯಲ್ಲೇ ಇರಬೇಕು” ಎಂದು ಹೇಳಿದ್ದಾರೆ.

ಆಯೋಗವು ಇತ್ತೀಚಿನ ದಿನಗಳಲ್ಲಿ ಬದಲಾವಣೆಯ ನೆಪದಲ್ಲಿ ಸರ್ವಸಮ್ಮತವಾದ ಮತ್ತು ಬಹುಕಾಲದಿಂದ ಅನುಸರಿಸುತ್ತಿರುವ ಪ್ರಮಾಣಿತ ಕಾರ್ಯವಿಧಾನಗಳಿಗೆ ವಿರುದ್ಧವಾದ ದಿಕ್ಕಿನಲ್ಲಿ ಸಾಗುವಂತೆ ಭಾಸವಾಗುತ್ತಿದೆ. ಇಂತಹ ದೂರದೃಷ್ಟಿಯಿಲ್ಲದ ಬದಲಾವಣೆಗಳಿಂದ ಭವಿಷ್ಯದಲ್ಲಿ ಉತ್ತಮ ಮತ್ತು ಕಾರ್ಯದಕ್ಷತೆಯುಳ್ಳ ಅಧಿಕಾರಿಗಳನ್ನು ಆಯ್ಕೆಮಾಡಲು ಕಷ್ಟವಾಗಬಹುದು ಎಂದಿದ್ದಾರೆ.

ಆಯೋಗದಲ್ಲಿ ದೀರ್ಘಕಾಲದಿಂದ ಜಾರಿಯಲ್ಲಿದ್ದ ಪ್ರಮಾಣಿತ ಕಾರ್ಯವಿಧಾನವನ್ನು 2020ರ ಜೂನ್‌ 4ರಂದು ಬದಲಾವಣೆ ಮಾಡಲಾಗಿತ್ತು. ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು 150ರಿಂದ 50ಕ್ಕೆ ಇಳಿಕೆ ಮಾಡಲಾಗಿತ್ತು. ಈಗ ಅದನ್ನು 25ಕ್ಕೆ ಇಳಿಸುವ ತೀರ್ಮಾನ ಮಾಡಲಾಗಿದೆ. ಇಂತಹ ತೀರ್ಮಾನದಿಂದ ಗ್ರಾಮೀಣ ಪ್ರದೇಶದ ಸ್ಪರ್ಧಾ ಆಕಾಂಕ್ಷಿಗಳಿಗೆ ತೊಂದರೆಯಾಗುತ್ತದೆ ಎಂದು ದೇವೇಗೌಡ ಹೇಳಿದ್ದಾರೆ.

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಕೆಪಿಎಸ್‌ಸಿ ಕುರಿತು ಸಾರ್ವಜನಿಕರಲ್ಲಿ ಗೌರವ ಕಡಿಮೆಯಾಗುವುದರಲ್ಲಿ ಸಂಶಯವಿಲ್ಲ. ಈ ಎಲ್ಲ ಋಣಾತ್ಮಕ ತೀರ್ಮಾನಗಳನ್ನು ಕೈಬಿಡಬೇಕು. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲೇ ಮುಖ್ಯ ಪರೀಕ್ಷೆಯ ಅಂಕಗಳು ಮತ್ತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿರಿ: ಏಪ್ರಿಲ್ 10ರಿಂದ ಮೇ 15ವರೆಗೆ ಶಾಲೆಗಳಿಗೆ ಬೇಸಿಗೆ ರಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇವೆಗೌಡರೆ, ನಿಮ್ಮಂತಹ ರಾಜಕೀಯ ವ್ಯಕ್ತಿಗಳ ಕೃಪಾ ಕಟಾಕ್ಷದಿಂದ KPSC ಎಂಬ ಸ್ವತಂತ್ರ ಸಂಸ್ಥೆ ಭ್ರಷ್ಟಾಚಾರಿಗಳ ಕೂಪವಾಗಿದೆ. ನಿಮಗೆ ಮಾನ ಮರ್ಯಾದೆ ಎನಾದರೂ ಇದ್ದರೆ ತೆಪ್ಪಗೆ ಬಾಯಿ ಮುಚ್ಚಿಕೊಂಡು ಇರಿ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೇ ದಿಕ್ಕರಿಸಿ 2011 ರ ನೇಮಕಾತಿ ಸಿಂಧು ಗೊಳಿಸಲು ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಾಗಲೇ ನಿಮ್ಮ ಯೋಗ್ಯತೆ ಎನು ಎಂದು ರಾಜ್ಯದ ಜನ ಕಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....