Homeಕರ್ನಾಟಕಕೆಪಿಎಸ್‌ಸಿ ಸಂದರ್ಶನ ಅಂಕಗಳ ಕಡಿತಕ್ಕೆ ಎಚ್‌.ಡಿ.ದೇವೇಗೌಡ ವಿರೋಧ

ಕೆಪಿಎಸ್‌ಸಿ ಸಂದರ್ಶನ ಅಂಕಗಳ ಕಡಿತಕ್ಕೆ ಎಚ್‌.ಡಿ.ದೇವೇಗೌಡ ವಿರೋಧ

- Advertisement -
- Advertisement -

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯಸಭೆಯ ಜೆಡಿಎಸ್‌ ಸದಸ್ಯ ಎಚ್‌.ಡಿ.ದೇವೇಗೌಡ ವಿರೋಧಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ದೇವೇಗೌಡರು, “ಸಾಂವಿಧಾನಿಕ ಸಂಸ್ಥೆಯಾಗಿರುವ ಕೆಪಿಎಸ್‌ಸಿಯಲ್ಲಿ ಕಾಲಕಾಲಕ್ಕೆ ಬದಲಾವಣೆ ಅಗತ್ಯ. ಆದರೆ, ಅಂತಹ ಬದಲಾವಣೆಗಳು ಎಲ್ಲ ಕಾಲಕ್ಕೂ ಹೊಂದಿಕೆಯಾಗಬೇಕು ಮತ್ತು ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯಲ್ಲೇ ಇರಬೇಕು” ಎಂದು ಹೇಳಿದ್ದಾರೆ.

ಆಯೋಗವು ಇತ್ತೀಚಿನ ದಿನಗಳಲ್ಲಿ ಬದಲಾವಣೆಯ ನೆಪದಲ್ಲಿ ಸರ್ವಸಮ್ಮತವಾದ ಮತ್ತು ಬಹುಕಾಲದಿಂದ ಅನುಸರಿಸುತ್ತಿರುವ ಪ್ರಮಾಣಿತ ಕಾರ್ಯವಿಧಾನಗಳಿಗೆ ವಿರುದ್ಧವಾದ ದಿಕ್ಕಿನಲ್ಲಿ ಸಾಗುವಂತೆ ಭಾಸವಾಗುತ್ತಿದೆ. ಇಂತಹ ದೂರದೃಷ್ಟಿಯಿಲ್ಲದ ಬದಲಾವಣೆಗಳಿಂದ ಭವಿಷ್ಯದಲ್ಲಿ ಉತ್ತಮ ಮತ್ತು ಕಾರ್ಯದಕ್ಷತೆಯುಳ್ಳ ಅಧಿಕಾರಿಗಳನ್ನು ಆಯ್ಕೆಮಾಡಲು ಕಷ್ಟವಾಗಬಹುದು ಎಂದಿದ್ದಾರೆ.

ಆಯೋಗದಲ್ಲಿ ದೀರ್ಘಕಾಲದಿಂದ ಜಾರಿಯಲ್ಲಿದ್ದ ಪ್ರಮಾಣಿತ ಕಾರ್ಯವಿಧಾನವನ್ನು 2020ರ ಜೂನ್‌ 4ರಂದು ಬದಲಾವಣೆ ಮಾಡಲಾಗಿತ್ತು. ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು 150ರಿಂದ 50ಕ್ಕೆ ಇಳಿಕೆ ಮಾಡಲಾಗಿತ್ತು. ಈಗ ಅದನ್ನು 25ಕ್ಕೆ ಇಳಿಸುವ ತೀರ್ಮಾನ ಮಾಡಲಾಗಿದೆ. ಇಂತಹ ತೀರ್ಮಾನದಿಂದ ಗ್ರಾಮೀಣ ಪ್ರದೇಶದ ಸ್ಪರ್ಧಾ ಆಕಾಂಕ್ಷಿಗಳಿಗೆ ತೊಂದರೆಯಾಗುತ್ತದೆ ಎಂದು ದೇವೇಗೌಡ ಹೇಳಿದ್ದಾರೆ.

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಕೆಪಿಎಸ್‌ಸಿ ಕುರಿತು ಸಾರ್ವಜನಿಕರಲ್ಲಿ ಗೌರವ ಕಡಿಮೆಯಾಗುವುದರಲ್ಲಿ ಸಂಶಯವಿಲ್ಲ. ಈ ಎಲ್ಲ ಋಣಾತ್ಮಕ ತೀರ್ಮಾನಗಳನ್ನು ಕೈಬಿಡಬೇಕು. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲೇ ಮುಖ್ಯ ಪರೀಕ್ಷೆಯ ಅಂಕಗಳು ಮತ್ತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿರಿ: ಏಪ್ರಿಲ್ 10ರಿಂದ ಮೇ 15ವರೆಗೆ ಶಾಲೆಗಳಿಗೆ ಬೇಸಿಗೆ ರಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇವೆಗೌಡರೆ, ನಿಮ್ಮಂತಹ ರಾಜಕೀಯ ವ್ಯಕ್ತಿಗಳ ಕೃಪಾ ಕಟಾಕ್ಷದಿಂದ KPSC ಎಂಬ ಸ್ವತಂತ್ರ ಸಂಸ್ಥೆ ಭ್ರಷ್ಟಾಚಾರಿಗಳ ಕೂಪವಾಗಿದೆ. ನಿಮಗೆ ಮಾನ ಮರ್ಯಾದೆ ಎನಾದರೂ ಇದ್ದರೆ ತೆಪ್ಪಗೆ ಬಾಯಿ ಮುಚ್ಚಿಕೊಂಡು ಇರಿ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೇ ದಿಕ್ಕರಿಸಿ 2011 ರ ನೇಮಕಾತಿ ಸಿಂಧು ಗೊಳಿಸಲು ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಾಗಲೇ ನಿಮ್ಮ ಯೋಗ್ಯತೆ ಎನು ಎಂದು ರಾಜ್ಯದ ಜನ ಕಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...