Homeಕರ್ನಾಟಕಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

- Advertisement -
- Advertisement -

ವನಸಿರಿ ನಾಡು ಎಂದೇ ಖ್ಯಾತವಾಗಿರುವ ಎಚ್.ಡಿ.ಕೋಟೆ ತಾಲ್ಲೂಕು ರಾಜಕೀಯವಾಗಿಯೂ ಗಮನ ಸೆಳೆಯುತ್ತದೆ. ನದಿ, ತೊರೆ, ಡ್ಯಾಮ್‌, ಕಾಡು, ಆದಿವಾಸಿಗಳು, ಕಾಡಂಚಿನ ಜನರು ವೈವಿಧ್ಯಮಯವಾಗಿ ಗಮನ ಸೆಳೆಯುವ ಎಚ್‌.ಡಿ.ಕೋಟೆ- ಸರಗೂರು ತಾಲ್ಲೂಕುಗಳನ್ನು ಒಳಗೊಂಡ ಎಚ್‌.ಡಿ.ಕೋಟೆ ವಿಧಾನಸಭಾ ಕ್ಷೇತ್ರವು ಮೊದಲಿನಿಂದಲೂ ಜನತಾ ಪರಿವಾರ ಮತ್ತು ಕಾಂಗ್ರೆಸ್‌ನ ಭದ್ರಕೋಟೆ. ಈಗ ಬಿಜೆಪಿಯೂ ಇಲ್ಲಿ ನೆಲೆ ಕಾಣಲು ಯತ್ನಿಸುತ್ತಿದೆ. ಜೆಡಿಎಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಂ.ಕೃಷ್ಣನಾಯಕ ಬಿಜೆಪಿ ಸೇರಿದ ಮೇಲೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಹಾಲಿ ಶಾಸಕರಾಗಿರುವ ಅನಿಲ್‌ ಚಿಕ್ಕಮಾದು (ಸಿ.ಅನಿಲ್‌ಕುಮಾರ್‌) ಅವರು ಮಾಜಿ ಶಾಸಕ ಚಿಕ್ಕಮಾದು ಅವರ ಪುತ್ರ. ಜೆಡಿಎಸ್‌ನಲ್ಲಿ ಇದ್ದು ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಶಾಸಕರನ್ನಾಗಿ ಮಾಡುವಲ್ಲಿ ದಿವಂಗತ ಆರ್‌.ಧ್ರುವನಾರಾಯಣ್ ಅಂತಹ ನಾಯಕರ ಪಾತ್ರ ಮಹತ್ವದ್ದಾಗಿದೆ. ಈಗ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಎರಡನೇ ಅವಧಿಗೆ ಆಯ್ಕೆಯಾಗಲು ಸ್ಪರ್ಧಿಸಿದ್ದಾರೆ. ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್‌ ಅವರಿಗೆ ಜೆಡಿಎಸ್‌ ಟಿಕೆಟ್‌ ಸಿಕ್ಕಿದೆ. ಹೀಗಾಗಿ ಇಬ್ಬರು ಮಾಜಿ ಶಾಸಕರ ಪುತ್ರರ ಜೊತೆಗೆ ಕೃಷ್ಣ ನಾಯಕ ಅವರು ಪ್ರಮುಖ ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ.

ಕೇರಳದ ಗಡಿಗೆ ಹೊಂದಿಕೊಂಡ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಜಲಾಶಯ (ಕಬಿನಿ, ನುಗು, ತಾರಕ) ಇದ್ದರೂ ಅನೇಕ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ಇಲ್ಲ, ರಸ್ತೆಗಳು ಹಾಳಾಗಿವೆ, ಹಾಡಿಗಳು ಅಭಿವೃದ್ಧಿಯಾಗಿಲ್ಲ, ಆದಿವಾಸಿಗಳಿಗೆ ಸರಿಯಾದ ಪುನರ್‌ ವಸತಿ ಸಿಕ್ಕಿಲ್ಲ. ರೈತರಿಗೆ ಸಾಗುವಳಿ ಪತ್ರ ವಿತರಿಸುವಾಗ ಭ್ರಷ್ಟಚಾರ ಮಿತಿಮೀರಿದೆ- ಎಂಬಂತಹ ಗಂಭೀರ ಸಮಸ್ಯೆಗಳು ಕ್ಷೇತ್ರದಲ್ಲಿವೆ. ಹೀಗಾಗಿ ಹಾಲಿ ಶಾಸಕ ಅನಿಲ್ ಅವರಿಗೆ ಸವಾಲು ಎದರಾಗಿದೆ. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ಜೊತೆಗಿದ್ದಾರೆ. ಜಾತಿವಾರು ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‌ ಜೊತೆಗಿವೆ. ಬಂಡಾಯವೆದ್ದವರು ಬೇರೆ ಪಕ್ಷಗಳಿಗೆ ಹೋಗಿ ಸೇರಿಕೊಂಡಿದ್ದಾರೆ. ಹೀಗಾಗಿ ಒಳೇಟು ಕೂಡ ಅನಿಲ್ ಅವರಿಗೆ ಇಲ್ಲವಾಗಿದೆ.

ಹಾಲಿ ಶಾಸಕ ಅನಿಲ್ ಚಿಕ್ಕಮಾದು

ಗಮನಾರ್ಹವಲ್ಲದಿದ್ದರೂ ಒಂದಿಷ್ಟು ಕೆಲಸಗಳನ್ನು ಅನಿಲ್ ಮಾಡಿದ್ದಾರೆಂಬ ಶ್ಲಾಘನೆಯೂ ಇದೆ. ಆದರೆ ಇವರಿಗೆ ಎದುರಾಗಿ ನಿಂತಿರುವ ಬಿಜೆಪಿ ಅಭ್ಯರ್ಥಿಯೂ ಗಮನಾರ್ಹ ಬೆಂಬಲಿಗರನ್ನು ಹೊಂದಿದ್ದಾರೆ ಎಂಬುದು ಕ್ಷೇತ್ರದ ಜನತೆಯ ಮಾತು.

2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದ ಬಳಿಕ ಎಚ್‌.ಡಿ.ಕೋಟೆಯು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲು ಕ್ಷೇತ್ರವಾಯಿತು. ಅದಕ್ಕೂ ಮುಂಚೆ ಹೆಚ್ಚು ಕಾಲ ಈ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಕ್ಷೇತ್ರದ ಒಳಗಿನವರಿಗೆ ಮತ್ತು ಹೊರಗಿನಿಂದ ಬಂದವರಿಗೂ ಇಲ್ಲಿನ ಜನತೆ ಮಣೆ ಹಾಕಿದ್ದಾರೆ. ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಕ್ಷೇತ್ರದ ರಾಜಕಾರಣದ ಏಳುಬೀಳು

ಉದ್ಯೋಗ ಅರಸಿ ಎಚ್.ಡಿ.ಕೋಟೆಗೆ ಬಂದಿದ್ದ ಕುಟುಂಬದ ಹಿನ್ನೆಲೆಯ ಪೀರಣ್ಣ ಮೂರು ಅವಧಿ ಶಾಸಕರಾಗಿ ಹ್ಯಾಟ್ರಿಕ್‌ ಭಾರಿಸಿದ್ದರು. ನಂತರ ಅವರ ಪುತ್ರ ಎಂ.ಪಿ.ವೆಂಕಟೇಶ್ ಎರಡು ಬಾರಿ ಗೆದ್ದಿದ್ದು ಇಲ್ಲಿನ ವಿಶೇಷ. ಹುಣಸೂರು ಕ್ಷೇತ್ರದವರಾದ ಚಿಕ್ಕಮಾದು ಇಲ್ಲಿಗೆ ವಲಸೆ ಬಂದು ಗೆದ್ದಿದ್ದರು. ಆನಂತರ ಅವರ ಪುತ್ರ  ಚಿಕ್ಕಮಾದು ಈಗ ಶಾಸಕರಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನವರೇ ಆದ ಎಂ.ಶಿವಣ್ಣ ಎರಡು ಬಾರಿ ಗೆದ್ದಿದ್ದರು. ಜೊತೆಗೆ ಎಸ್.ಎಂ.ಕೃಷ್ಣ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ಬಿಜೆಪಿ ಸೇರಿಕೊಂಡಿದ್ದರೂ ಕ್ಷೇತ್ರದ ಮೇಲೆ ಅವರ ಪ್ರಭಾವ ಕಡಿಮೆಯಾಗಿದೆ. ಬಿಜೆಪಿಯಲ್ಲಿದ್ದರೂ ಮತದಾರರನ್ನು ಪ್ರಭಾವಿಸುವಷ್ಟು ಅವರೀಗ ಸಕ್ರಿಯವಾಗಿಲ್ಲ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಟಿ.ನರಸೀಪುರ: ಹಳೆ ಹುಲಿ ಮಹದೇವಪ್ಪ ಮತ್ತೆ ಪುಟಿದೇಳುವರೇ?

1952ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಎಚ್‌.ಡಿ.ಕೋಟೆಯು ಗುಂಡ್ಲುಪೇಟೆ ದ್ವಿಸದಸ್ಯ ಕ್ಷೇತ್ರವಾಗಿತ್ತು. 1957ರಲ್ಲಿ ನಡೆದ 2ನೇ ಚುನಾವಣೆಯಲ್ಲಿ ಹುಣಸೂರು ದ್ವಿಸದಸ್ಯ ಕ್ಷೇತ್ರವಾಯಿತು. 1962ರಲ್ಲಿ ಸ್ವತಂತ್ರ ಕ್ಷೇತ್ರವಾಗಿ ಮಾರ್ಪಟ್ಟು ಪರಿಶಿಷ್ಟ ಜಾತಿಗೆ ಮೀಸಲಾಯಿತು. 1962ರಲ್ಲಿ ಸ್ವತಂತ್ರ ಪಾರ್ಟಿಯ ಆರ್‌.ಪೀರಣ್ಣ ಕಾಂಗ್ರೆಸ್‌ನ ಎನ್.ರಾಚಯ್ಯ ವಿರುದ್ಧ ಜಯಭೇರಿ ಭಾರಿಸಿದರು. 1967ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆರ್.ಪೀರಣ್ಣ ಪುನರಾಯ್ಕೆಯಾದರು. 1972ರಲ್ಲಿ ಅವರು ಸಂಸ್ಥಾ ಕಾಂಗ್ರೆಸ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿ ‘ಹ್ಯಾಟ್ರಿಕ್‌ ಗೆಲುವು’ ಪಡೆದರು. 1983ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಎಚ್‌.ಬಿ.ಚಲುವಯ್ಯ, 1985ರಲ್ಲಿ ಕಾಂಗ್ರೆಸ್‌ನ ಎಂ.ಶಿವಣ್ಣ, 1989ರಲ್ಲಿ ಸಮಾಜವಾದಿ ಜನತಾ ಪಕ್ಷದ ಎಂ.ಪಿ.ವೆಂಕಟೇಶ್, 1994ರಲ್ಲಿ ಜನತಾದಳದ ಎನ್.ನಾಗರಾಜು, 1999ರಲ್ಲಿ ಮತ್ತೆ ಎಂ.ಶಿವಣ್ಣ, 2004ರ ಚುನಾವಣೆಯಲ್ಲಿ ಜೆಡಿಎಸ್‌ನ ಎಂ.ಪಿ.ವೆಂಕಟೇಶ್ ಶಾಸಕರಾಗಿ ಆಯ್ಕೆಯಾಗಿದ್ದರು.

2008ರಲ್ಲಿ ಎಸ್‌ಟಿ ಮೀಸಲು ಕ್ಷೇತ್ರವಾದಾಗ, ಕಾಂಗ್ರೆಸ್‌ನ ಚಿಕ್ಕಣ್ಣ ಗೆಲುವು ಸಾಧಿಸಿದರು. 2013ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಎಸ್.ಚಿಕ್ಕಮಾದು ಕಾಂಗ್ರೆಸ್‌ನ ಚಿಕ್ಕಣ್ಣ ಅವರನ್ನು ಮಣಿಸಿದರು. ಈ ನಡುವೆ ಚಿಕ್ಕಮಾದು ಅವರು ಸಾವನ್ನಪ್ಪಿದರು. 2018ರಲ್ಲಿ ಚಿಕ್ಕಮಾದು ಅವರ ಪುತ್ರ ಅನಿಲ್ ಅವರನ್ನು ಕಾಂಗ್ರೆಸ್‌ನತ್ತ ಕರೆತರಲಾಯಿತು. ಅನಿಲ್ ಚಿಕ್ಕಮಾದು 76,652 ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದರು.

ಈವರೆಗಿನ ಚುನಾವಣೆಯ ಫಲಿತಾಂಶ ವಿವರ

ಕೃಷ್ಣ ನಾಯಕರ ಪ್ರಭಾವ

ಕಾಂಗ್ರೆಸ್, ಜೆಡಿಎಸ್, ಬಿಜೆಪಿ- ಈ ಮೂರು ಪಕ್ಷಗಳ ಅಭ್ಯರ್ಥಿಗಳು ಹಣಬಲವನ್ನು ಹೊಂದಿದ್ದಾರೆ. ಸದ್ಯಕ್ಕೆ ಕೃಷ್ಣ ನಾಯಕ ಅವರು ಕಮಲವನ್ನು ಅರಳಿಸಬಲ್ಲರೇ ಎಂಬ ಕುತೂಹಲ ಹೆಚ್ಚಿದೆ. ಕಳೆದ ಎಂಟು ವರ್ಷಗಳಿಂದ ಕ್ಷೇತ್ರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಕೃಷ್ಣ ಅವರು ಜೆಡಿಎಸ್‌ನ ಕೈತಪ್ಪಿ ಬಿಜೆಪಿಗೆ ಬಂದಿದ್ದು, ರಾಜಕೀಯ ಪಲ್ಲಟಗಳಿಗೂ ಕಾರಣವಾಗಿದೆ. ಕೃಷ್ಣ ನಾಯಕ ಅವರು ಎಚ್‌.ಡಿ.ದೇವೇಗೌಡರ ಅಪ್ಪಟ ಅಭಿಮಾನಿಯಾಗಿ, ಸರಗೂರು ಮತ್ತು ಎಚ್.ಡಿ.ಕೋಟೆಯಲ್ಲಿ ಅಪ್ಪಾಜಿ ಕ್ಯಾಂಟೀನ್‌ ತೆರೆದು ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡಿದವರು. ಕೋವಿಡ್ ಸಂದರ್ಭದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದರು. ಜೆಡಿಎಸ್‌ ಟಿಕೆಟ್ ಸಿಗುತ್ತದೆ ಎಂದೇ ಭಾವಿಸಿದ್ದರು. ಆದರೆ ಕೊನೆಗಳಿಗೆಯಲ್ಲಿ ಕೈತಪ್ಪಿತು.

ಕೃಷ್ಣಾ ನಾಯಕ್ ಅವರು ಜೆಡಿಎಸ್‌ನಲ್ಲಿ ಇದ್ದಾಗಿನಿಂದಲೂ ಒಂದಿಷ್ಟು ಬೆಂಬಲಿಗರನ್ನು ಹೊಂದಿದ್ದರು. ಅವರೆಲ್ಲರೂ ಈಗ ಬಿಜೆಪಿಗೆ ಬಂದಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಬಿಜೆಪಿಗೆ ಸೇರಿದ ಬಳಿಕ ತಮ್ಮ ಮೂಲ ಬೆಂಬಲಿಗರಿಗೆ ಹೆಚ್ಚಿನ ಆದ್ಯತೆಯನ್ನು ಕೃಷ್ಣ ನೀಡುತ್ತಿದ್ದಾರೆಂಬ ಆಕ್ಷೇಪ ಇದೆ. ಜೆಡಿಎಸ್‌ನ ಸಾಂಪ್ರದಾಯಿಕ ಮತಗಳು ಇದ್ದೇ ಇವೆ.

ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯಕ

ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್ ಅವರಿಗೆ ಸ್ಥಳೀಯ ಜೆಡಿಎಸ್ ಮುಖಂಡರು ಮತ್ತು ಪಕ್ಷದ ವರಿಷ್ಠರು ಒಲವು ತೋರಿದ್ದರಿಂದ ಟಿಕೆಟ್ ದೊರಕಿತು. ಕ್ಷೇತ್ರದಲ್ಲಿ ಜೆಡಿಎಸ್‌ನದ್ದೇ ಆದ ಮತಗಳು ಇದ್ದೇ ಇವೆ.  ಹೀಗಾಗಿ ಈ ಬಾರಿ ಅನಿಲ್‌ ಚಿಕ್ಕಮಾದು ಅವರಿಗೆ ಸವಾಲು ಎದುರಾಗಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಜಾತಿ ಲೆಕ್ಕಾಚಾರವನ್ನು ನೋಡುವುದಾದರೆ ಒಂದೊಂದು ಪಕ್ಷಕ್ಕೆ ಒಂದೊಂದು ಜಾತಿ ಮತಗಳು ಚದುರಿ ಹೋಗುತ್ತವೆ. ಪರಿಶಿಷ್ಟ ಜಾತಿಯ ಮತಗಳು (58,000) ಕ್ಷೇತ್ರದಲ್ಲಿ ಹೆಚ್ಚಿವೆ. ಪರಿಶಿಷ್ಟ ಪಂಗಡ (ನಾಯಕರು ಮತ್ತು ಆದಿವಾಸಿಗಳು ಸೇರಿ)- 41,000, ಲಿಂಗಾಯತರು- 33,000, ಒಕ್ಕಲಿಗರು- 23,000, ಕುರುಬರು- 12,000 ಮತದಾರರು ಇದ್ದಾರೆಂದು ಅಂದಾಜಿಸಲಾಗಿದೆ.

ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್

ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದ ಸಮಾಜ ಸೇವಕ ಬಾಬು ನಾಯಕ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಅವರು ಕಾಂಗ್ರೆಸ್ ಮತಗಳನ್ನು ಕಸಿಯುತ್ತಾರೆಂಬ ಭಯವೇನೂ ಅನಿಲ್ ಅವರಿಗೆ ಇಲ್ಲ. ಆದರೆ ಧ್ರುವನಾರಾಯಣ ಅವರ ಅನುಪಸ್ಥಿತಿ ಅನಿಲ್ ಅವರನ್ನು ಕಾಡಲಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿರುವ ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಧ್ರುವ ಅವರು ಪ್ರಭಾವ ಹೊಂದಿದ್ದರು. ಸಂಸದರಾಗಿ ಅವರು ಮಾಡಿದ ಕೆಲಸಗಳನ್ನು ಕ್ಷೇತ್ರದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ. ಧ್ರುವ ಅವರಿಂದಾಗಿಯೇ ಅನಿಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತು ಮೊದಲ ಸಲ ಗೆದಿದ್ದರು. ಆದರೆ ಧ್ರುವ ಅವರ ನಿಧನದ ಅನುಕಂಪ ಎಷ್ಟರ ಮಟ್ಟಿಗೆ ಅನಿಲ್ ಅವರಿಗೆ ವರದಾನವಾಗುತ್ತದೆ ಎಂಬುದು ಅಂದಾಜು ಸಿಗುತ್ತಿಲ್ಲ. ಅಂತಿಮವಾಗಿ ತ್ರಿಕೋನ ಸ್ಪರ್ಧೆಯಂತೂ ಕ್ಷೇತ್ರದಲ್ಲಿ ಏರ್ಪಡುವುದು ಖಚಿತ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಹಾಸನ: ಒಕ್ಕಲಿಗರ ಮೇಲಾಟದ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಫೈಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...