Homeಕರ್ನಾಟಕಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

- Advertisement -
- Advertisement -

ವನಸಿರಿ ನಾಡು ಎಂದೇ ಖ್ಯಾತವಾಗಿರುವ ಎಚ್.ಡಿ.ಕೋಟೆ ತಾಲ್ಲೂಕು ರಾಜಕೀಯವಾಗಿಯೂ ಗಮನ ಸೆಳೆಯುತ್ತದೆ. ನದಿ, ತೊರೆ, ಡ್ಯಾಮ್‌, ಕಾಡು, ಆದಿವಾಸಿಗಳು, ಕಾಡಂಚಿನ ಜನರು ವೈವಿಧ್ಯಮಯವಾಗಿ ಗಮನ ಸೆಳೆಯುವ ಎಚ್‌.ಡಿ.ಕೋಟೆ- ಸರಗೂರು ತಾಲ್ಲೂಕುಗಳನ್ನು ಒಳಗೊಂಡ ಎಚ್‌.ಡಿ.ಕೋಟೆ ವಿಧಾನಸಭಾ ಕ್ಷೇತ್ರವು ಮೊದಲಿನಿಂದಲೂ ಜನತಾ ಪರಿವಾರ ಮತ್ತು ಕಾಂಗ್ರೆಸ್‌ನ ಭದ್ರಕೋಟೆ. ಈಗ ಬಿಜೆಪಿಯೂ ಇಲ್ಲಿ ನೆಲೆ ಕಾಣಲು ಯತ್ನಿಸುತ್ತಿದೆ. ಜೆಡಿಎಸ್‌ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಂ.ಕೃಷ್ಣನಾಯಕ ಬಿಜೆಪಿ ಸೇರಿದ ಮೇಲೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಹಾಲಿ ಶಾಸಕರಾಗಿರುವ ಅನಿಲ್‌ ಚಿಕ್ಕಮಾದು (ಸಿ.ಅನಿಲ್‌ಕುಮಾರ್‌) ಅವರು ಮಾಜಿ ಶಾಸಕ ಚಿಕ್ಕಮಾದು ಅವರ ಪುತ್ರ. ಜೆಡಿಎಸ್‌ನಲ್ಲಿ ಇದ್ದು ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಶಾಸಕರನ್ನಾಗಿ ಮಾಡುವಲ್ಲಿ ದಿವಂಗತ ಆರ್‌.ಧ್ರುವನಾರಾಯಣ್ ಅಂತಹ ನಾಯಕರ ಪಾತ್ರ ಮಹತ್ವದ್ದಾಗಿದೆ. ಈಗ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಎರಡನೇ ಅವಧಿಗೆ ಆಯ್ಕೆಯಾಗಲು ಸ್ಪರ್ಧಿಸಿದ್ದಾರೆ. ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್‌ ಅವರಿಗೆ ಜೆಡಿಎಸ್‌ ಟಿಕೆಟ್‌ ಸಿಕ್ಕಿದೆ. ಹೀಗಾಗಿ ಇಬ್ಬರು ಮಾಜಿ ಶಾಸಕರ ಪುತ್ರರ ಜೊತೆಗೆ ಕೃಷ್ಣ ನಾಯಕ ಅವರು ಪ್ರಮುಖ ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ.

ಕೇರಳದ ಗಡಿಗೆ ಹೊಂದಿಕೊಂಡ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಜಲಾಶಯ (ಕಬಿನಿ, ನುಗು, ತಾರಕ) ಇದ್ದರೂ ಅನೇಕ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ಇಲ್ಲ, ರಸ್ತೆಗಳು ಹಾಳಾಗಿವೆ, ಹಾಡಿಗಳು ಅಭಿವೃದ್ಧಿಯಾಗಿಲ್ಲ, ಆದಿವಾಸಿಗಳಿಗೆ ಸರಿಯಾದ ಪುನರ್‌ ವಸತಿ ಸಿಕ್ಕಿಲ್ಲ. ರೈತರಿಗೆ ಸಾಗುವಳಿ ಪತ್ರ ವಿತರಿಸುವಾಗ ಭ್ರಷ್ಟಚಾರ ಮಿತಿಮೀರಿದೆ- ಎಂಬಂತಹ ಗಂಭೀರ ಸಮಸ್ಯೆಗಳು ಕ್ಷೇತ್ರದಲ್ಲಿವೆ. ಹೀಗಾಗಿ ಹಾಲಿ ಶಾಸಕ ಅನಿಲ್ ಅವರಿಗೆ ಸವಾಲು ಎದರಾಗಿದೆ. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ಜೊತೆಗಿದ್ದಾರೆ. ಜಾತಿವಾರು ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‌ ಜೊತೆಗಿವೆ. ಬಂಡಾಯವೆದ್ದವರು ಬೇರೆ ಪಕ್ಷಗಳಿಗೆ ಹೋಗಿ ಸೇರಿಕೊಂಡಿದ್ದಾರೆ. ಹೀಗಾಗಿ ಒಳೇಟು ಕೂಡ ಅನಿಲ್ ಅವರಿಗೆ ಇಲ್ಲವಾಗಿದೆ.

ಹಾಲಿ ಶಾಸಕ ಅನಿಲ್ ಚಿಕ್ಕಮಾದು

ಗಮನಾರ್ಹವಲ್ಲದಿದ್ದರೂ ಒಂದಿಷ್ಟು ಕೆಲಸಗಳನ್ನು ಅನಿಲ್ ಮಾಡಿದ್ದಾರೆಂಬ ಶ್ಲಾಘನೆಯೂ ಇದೆ. ಆದರೆ ಇವರಿಗೆ ಎದುರಾಗಿ ನಿಂತಿರುವ ಬಿಜೆಪಿ ಅಭ್ಯರ್ಥಿಯೂ ಗಮನಾರ್ಹ ಬೆಂಬಲಿಗರನ್ನು ಹೊಂದಿದ್ದಾರೆ ಎಂಬುದು ಕ್ಷೇತ್ರದ ಜನತೆಯ ಮಾತು.

2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದ ಬಳಿಕ ಎಚ್‌.ಡಿ.ಕೋಟೆಯು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲು ಕ್ಷೇತ್ರವಾಯಿತು. ಅದಕ್ಕೂ ಮುಂಚೆ ಹೆಚ್ಚು ಕಾಲ ಈ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಕ್ಷೇತ್ರದ ಒಳಗಿನವರಿಗೆ ಮತ್ತು ಹೊರಗಿನಿಂದ ಬಂದವರಿಗೂ ಇಲ್ಲಿನ ಜನತೆ ಮಣೆ ಹಾಕಿದ್ದಾರೆ. ಇಲ್ಲಿಯವರೆಗೆ ಬಿಜೆಪಿ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಕ್ಷೇತ್ರದ ರಾಜಕಾರಣದ ಏಳುಬೀಳು

ಉದ್ಯೋಗ ಅರಸಿ ಎಚ್.ಡಿ.ಕೋಟೆಗೆ ಬಂದಿದ್ದ ಕುಟುಂಬದ ಹಿನ್ನೆಲೆಯ ಪೀರಣ್ಣ ಮೂರು ಅವಧಿ ಶಾಸಕರಾಗಿ ಹ್ಯಾಟ್ರಿಕ್‌ ಭಾರಿಸಿದ್ದರು. ನಂತರ ಅವರ ಪುತ್ರ ಎಂ.ಪಿ.ವೆಂಕಟೇಶ್ ಎರಡು ಬಾರಿ ಗೆದ್ದಿದ್ದು ಇಲ್ಲಿನ ವಿಶೇಷ. ಹುಣಸೂರು ಕ್ಷೇತ್ರದವರಾದ ಚಿಕ್ಕಮಾದು ಇಲ್ಲಿಗೆ ವಲಸೆ ಬಂದು ಗೆದ್ದಿದ್ದರು. ಆನಂತರ ಅವರ ಪುತ್ರ  ಚಿಕ್ಕಮಾದು ಈಗ ಶಾಸಕರಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನವರೇ ಆದ ಎಂ.ಶಿವಣ್ಣ ಎರಡು ಬಾರಿ ಗೆದ್ದಿದ್ದರು. ಜೊತೆಗೆ ಎಸ್.ಎಂ.ಕೃಷ್ಣ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ಬಿಜೆಪಿ ಸೇರಿಕೊಂಡಿದ್ದರೂ ಕ್ಷೇತ್ರದ ಮೇಲೆ ಅವರ ಪ್ರಭಾವ ಕಡಿಮೆಯಾಗಿದೆ. ಬಿಜೆಪಿಯಲ್ಲಿದ್ದರೂ ಮತದಾರರನ್ನು ಪ್ರಭಾವಿಸುವಷ್ಟು ಅವರೀಗ ಸಕ್ರಿಯವಾಗಿಲ್ಲ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಟಿ.ನರಸೀಪುರ: ಹಳೆ ಹುಲಿ ಮಹದೇವಪ್ಪ ಮತ್ತೆ ಪುಟಿದೇಳುವರೇ?

1952ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಎಚ್‌.ಡಿ.ಕೋಟೆಯು ಗುಂಡ್ಲುಪೇಟೆ ದ್ವಿಸದಸ್ಯ ಕ್ಷೇತ್ರವಾಗಿತ್ತು. 1957ರಲ್ಲಿ ನಡೆದ 2ನೇ ಚುನಾವಣೆಯಲ್ಲಿ ಹುಣಸೂರು ದ್ವಿಸದಸ್ಯ ಕ್ಷೇತ್ರವಾಯಿತು. 1962ರಲ್ಲಿ ಸ್ವತಂತ್ರ ಕ್ಷೇತ್ರವಾಗಿ ಮಾರ್ಪಟ್ಟು ಪರಿಶಿಷ್ಟ ಜಾತಿಗೆ ಮೀಸಲಾಯಿತು. 1962ರಲ್ಲಿ ಸ್ವತಂತ್ರ ಪಾರ್ಟಿಯ ಆರ್‌.ಪೀರಣ್ಣ ಕಾಂಗ್ರೆಸ್‌ನ ಎನ್.ರಾಚಯ್ಯ ವಿರುದ್ಧ ಜಯಭೇರಿ ಭಾರಿಸಿದರು. 1967ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆರ್.ಪೀರಣ್ಣ ಪುನರಾಯ್ಕೆಯಾದರು. 1972ರಲ್ಲಿ ಅವರು ಸಂಸ್ಥಾ ಕಾಂಗ್ರೆಸ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿ ‘ಹ್ಯಾಟ್ರಿಕ್‌ ಗೆಲುವು’ ಪಡೆದರು. 1983ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಎಚ್‌.ಬಿ.ಚಲುವಯ್ಯ, 1985ರಲ್ಲಿ ಕಾಂಗ್ರೆಸ್‌ನ ಎಂ.ಶಿವಣ್ಣ, 1989ರಲ್ಲಿ ಸಮಾಜವಾದಿ ಜನತಾ ಪಕ್ಷದ ಎಂ.ಪಿ.ವೆಂಕಟೇಶ್, 1994ರಲ್ಲಿ ಜನತಾದಳದ ಎನ್.ನಾಗರಾಜು, 1999ರಲ್ಲಿ ಮತ್ತೆ ಎಂ.ಶಿವಣ್ಣ, 2004ರ ಚುನಾವಣೆಯಲ್ಲಿ ಜೆಡಿಎಸ್‌ನ ಎಂ.ಪಿ.ವೆಂಕಟೇಶ್ ಶಾಸಕರಾಗಿ ಆಯ್ಕೆಯಾಗಿದ್ದರು.

2008ರಲ್ಲಿ ಎಸ್‌ಟಿ ಮೀಸಲು ಕ್ಷೇತ್ರವಾದಾಗ, ಕಾಂಗ್ರೆಸ್‌ನ ಚಿಕ್ಕಣ್ಣ ಗೆಲುವು ಸಾಧಿಸಿದರು. 2013ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಎಸ್.ಚಿಕ್ಕಮಾದು ಕಾಂಗ್ರೆಸ್‌ನ ಚಿಕ್ಕಣ್ಣ ಅವರನ್ನು ಮಣಿಸಿದರು. ಈ ನಡುವೆ ಚಿಕ್ಕಮಾದು ಅವರು ಸಾವನ್ನಪ್ಪಿದರು. 2018ರಲ್ಲಿ ಚಿಕ್ಕಮಾದು ಅವರ ಪುತ್ರ ಅನಿಲ್ ಅವರನ್ನು ಕಾಂಗ್ರೆಸ್‌ನತ್ತ ಕರೆತರಲಾಯಿತು. ಅನಿಲ್ ಚಿಕ್ಕಮಾದು 76,652 ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದರು.

ಈವರೆಗಿನ ಚುನಾವಣೆಯ ಫಲಿತಾಂಶ ವಿವರ

ಕೃಷ್ಣ ನಾಯಕರ ಪ್ರಭಾವ

ಕಾಂಗ್ರೆಸ್, ಜೆಡಿಎಸ್, ಬಿಜೆಪಿ- ಈ ಮೂರು ಪಕ್ಷಗಳ ಅಭ್ಯರ್ಥಿಗಳು ಹಣಬಲವನ್ನು ಹೊಂದಿದ್ದಾರೆ. ಸದ್ಯಕ್ಕೆ ಕೃಷ್ಣ ನಾಯಕ ಅವರು ಕಮಲವನ್ನು ಅರಳಿಸಬಲ್ಲರೇ ಎಂಬ ಕುತೂಹಲ ಹೆಚ್ಚಿದೆ. ಕಳೆದ ಎಂಟು ವರ್ಷಗಳಿಂದ ಕ್ಷೇತ್ರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಕೃಷ್ಣ ಅವರು ಜೆಡಿಎಸ್‌ನ ಕೈತಪ್ಪಿ ಬಿಜೆಪಿಗೆ ಬಂದಿದ್ದು, ರಾಜಕೀಯ ಪಲ್ಲಟಗಳಿಗೂ ಕಾರಣವಾಗಿದೆ. ಕೃಷ್ಣ ನಾಯಕ ಅವರು ಎಚ್‌.ಡಿ.ದೇವೇಗೌಡರ ಅಪ್ಪಟ ಅಭಿಮಾನಿಯಾಗಿ, ಸರಗೂರು ಮತ್ತು ಎಚ್.ಡಿ.ಕೋಟೆಯಲ್ಲಿ ಅಪ್ಪಾಜಿ ಕ್ಯಾಂಟೀನ್‌ ತೆರೆದು ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡಿದವರು. ಕೋವಿಡ್ ಸಂದರ್ಭದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದರು. ಜೆಡಿಎಸ್‌ ಟಿಕೆಟ್ ಸಿಗುತ್ತದೆ ಎಂದೇ ಭಾವಿಸಿದ್ದರು. ಆದರೆ ಕೊನೆಗಳಿಗೆಯಲ್ಲಿ ಕೈತಪ್ಪಿತು.

ಕೃಷ್ಣಾ ನಾಯಕ್ ಅವರು ಜೆಡಿಎಸ್‌ನಲ್ಲಿ ಇದ್ದಾಗಿನಿಂದಲೂ ಒಂದಿಷ್ಟು ಬೆಂಬಲಿಗರನ್ನು ಹೊಂದಿದ್ದರು. ಅವರೆಲ್ಲರೂ ಈಗ ಬಿಜೆಪಿಗೆ ಬಂದಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಬಿಜೆಪಿಗೆ ಸೇರಿದ ಬಳಿಕ ತಮ್ಮ ಮೂಲ ಬೆಂಬಲಿಗರಿಗೆ ಹೆಚ್ಚಿನ ಆದ್ಯತೆಯನ್ನು ಕೃಷ್ಣ ನೀಡುತ್ತಿದ್ದಾರೆಂಬ ಆಕ್ಷೇಪ ಇದೆ. ಜೆಡಿಎಸ್‌ನ ಸಾಂಪ್ರದಾಯಿಕ ಮತಗಳು ಇದ್ದೇ ಇವೆ.

ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯಕ

ಮಾಜಿ ಶಾಸಕ ಚಿಕ್ಕಣ್ಣ ಅವರ ಪುತ್ರ ಜಯಪ್ರಕಾಶ್ ಅವರಿಗೆ ಸ್ಥಳೀಯ ಜೆಡಿಎಸ್ ಮುಖಂಡರು ಮತ್ತು ಪಕ್ಷದ ವರಿಷ್ಠರು ಒಲವು ತೋರಿದ್ದರಿಂದ ಟಿಕೆಟ್ ದೊರಕಿತು. ಕ್ಷೇತ್ರದಲ್ಲಿ ಜೆಡಿಎಸ್‌ನದ್ದೇ ಆದ ಮತಗಳು ಇದ್ದೇ ಇವೆ.  ಹೀಗಾಗಿ ಈ ಬಾರಿ ಅನಿಲ್‌ ಚಿಕ್ಕಮಾದು ಅವರಿಗೆ ಸವಾಲು ಎದುರಾಗಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಜಾತಿ ಲೆಕ್ಕಾಚಾರವನ್ನು ನೋಡುವುದಾದರೆ ಒಂದೊಂದು ಪಕ್ಷಕ್ಕೆ ಒಂದೊಂದು ಜಾತಿ ಮತಗಳು ಚದುರಿ ಹೋಗುತ್ತವೆ. ಪರಿಶಿಷ್ಟ ಜಾತಿಯ ಮತಗಳು (58,000) ಕ್ಷೇತ್ರದಲ್ಲಿ ಹೆಚ್ಚಿವೆ. ಪರಿಶಿಷ್ಟ ಪಂಗಡ (ನಾಯಕರು ಮತ್ತು ಆದಿವಾಸಿಗಳು ಸೇರಿ)- 41,000, ಲಿಂಗಾಯತರು- 33,000, ಒಕ್ಕಲಿಗರು- 23,000, ಕುರುಬರು- 12,000 ಮತದಾರರು ಇದ್ದಾರೆಂದು ಅಂದಾಜಿಸಲಾಗಿದೆ.

ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್

ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದ ಸಮಾಜ ಸೇವಕ ಬಾಬು ನಾಯಕ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಅವರು ಕಾಂಗ್ರೆಸ್ ಮತಗಳನ್ನು ಕಸಿಯುತ್ತಾರೆಂಬ ಭಯವೇನೂ ಅನಿಲ್ ಅವರಿಗೆ ಇಲ್ಲ. ಆದರೆ ಧ್ರುವನಾರಾಯಣ ಅವರ ಅನುಪಸ್ಥಿತಿ ಅನಿಲ್ ಅವರನ್ನು ಕಾಡಲಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿರುವ ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಧ್ರುವ ಅವರು ಪ್ರಭಾವ ಹೊಂದಿದ್ದರು. ಸಂಸದರಾಗಿ ಅವರು ಮಾಡಿದ ಕೆಲಸಗಳನ್ನು ಕ್ಷೇತ್ರದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ. ಧ್ರುವ ಅವರಿಂದಾಗಿಯೇ ಅನಿಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತು ಮೊದಲ ಸಲ ಗೆದಿದ್ದರು. ಆದರೆ ಧ್ರುವ ಅವರ ನಿಧನದ ಅನುಕಂಪ ಎಷ್ಟರ ಮಟ್ಟಿಗೆ ಅನಿಲ್ ಅವರಿಗೆ ವರದಾನವಾಗುತ್ತದೆ ಎಂಬುದು ಅಂದಾಜು ಸಿಗುತ್ತಿಲ್ಲ. ಅಂತಿಮವಾಗಿ ತ್ರಿಕೋನ ಸ್ಪರ್ಧೆಯಂತೂ ಕ್ಷೇತ್ರದಲ್ಲಿ ಏರ್ಪಡುವುದು ಖಚಿತ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಹಾಸನ: ಒಕ್ಕಲಿಗರ ಮೇಲಾಟದ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಫೈಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...