Homeಕರ್ನಾಟಕಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

ಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

- Advertisement -
- Advertisement -

’ಪಕ್ಷದಲ್ಲಿ ಬೆಳೆದು ಪಕ್ಷ ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಜೆಡಿಎಸ್ ಸಂಘಟನಾ ಕಾರ್ಯಾಗಾರ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ’ಕೆಲ ಶಾಸಕರು ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರೇ ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಯಾಕೆ..? ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು’ ಎಂದಿದ್ದಾರೆ.

’ಯಾರೇ ಶಾಸಕರು ಬಂದರು ಮುಕ್ತವಾಗಿ ನಾನು ಯಾವಾಗಲೂ ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಆದರೆ, 3-4 ಜನ ಪಕ್ಷ ತೊರೆಯುವ ಮಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಯ ಹೆಂಡತಿ, ಮಕ್ಕಳ ಆತ್ಮಹತ್ಯೆ: ಕೊಲೆಗಡುಕ ಸರ್ಕಾರ ಎಂದ ಎಚ್‌.ಡಿ.ಕುಮಾರಸ್ವಾಮಿ

’ಯಾರನ್ನೂ ಪಕ್ಷ ಬಿಟ್ಟು ಹೋಗಿ ಅಂತ ನಾನು ಹೇಳಿಲ್ಲ. ಆದರೆ, ಪಕ್ಷ ತ್ಯಜಿಸಿ ಹೋದ ಮೇಲೆ ನಾನೇನು ಮಾಡಲು ಆಗುವುದಿಲ್ಲ. ನಿನ್ನೆಯೂ ಒಬ್ಬ ಶಾಸಕರು ನಾಯಕರೇ ಗೊಂದಲ ಸೃಷ್ಟಿ ಮಾಡ್ತಿರೋದು ಅಂದಿದ್ದಾರೆ. ನಾವ್ಯಾಕೆ ಗೊಂದಲ ಸೃಷ್ಟಿ ಮಾಡೋಣ. ಒಳಗೊಳಗೇ ಸಂಚು ರೂಪಿಸಿಕೊಂಡು ನನ್ನ ಮೇಲೆ ಗೂಬೆ ಕೂರಿಸುತ್ತಾರೆ. ಅಧಿಕಾರದ ರುಚಿ ಕಂಡು ನಡುನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗ್ತಾರೆ. ನಾಯಕರಿಂದ ಪಕ್ಷ ಅಲ್ಲ, ಕಾರ್ಯಕರ್ತರಿಂದ ಪಕ್ಷ. ಕೆಲವರು ಪಕ್ಷದ ಕುತ್ತಿಗೆ ಕುಯ್ದು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ. ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...