Homeಕರ್ನಾಟಕಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

ಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

- Advertisement -
- Advertisement -

’ಪಕ್ಷದಲ್ಲಿ ಬೆಳೆದು ಪಕ್ಷ ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಜೆಡಿಎಸ್ ಸಂಘಟನಾ ಕಾರ್ಯಾಗಾರ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ’ಕೆಲ ಶಾಸಕರು ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರೇ ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಯಾಕೆ..? ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು’ ಎಂದಿದ್ದಾರೆ.

’ಯಾರೇ ಶಾಸಕರು ಬಂದರು ಮುಕ್ತವಾಗಿ ನಾನು ಯಾವಾಗಲೂ ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಆದರೆ, 3-4 ಜನ ಪಕ್ಷ ತೊರೆಯುವ ಮಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಯ ಹೆಂಡತಿ, ಮಕ್ಕಳ ಆತ್ಮಹತ್ಯೆ: ಕೊಲೆಗಡುಕ ಸರ್ಕಾರ ಎಂದ ಎಚ್‌.ಡಿ.ಕುಮಾರಸ್ವಾಮಿ

’ಯಾರನ್ನೂ ಪಕ್ಷ ಬಿಟ್ಟು ಹೋಗಿ ಅಂತ ನಾನು ಹೇಳಿಲ್ಲ. ಆದರೆ, ಪಕ್ಷ ತ್ಯಜಿಸಿ ಹೋದ ಮೇಲೆ ನಾನೇನು ಮಾಡಲು ಆಗುವುದಿಲ್ಲ. ನಿನ್ನೆಯೂ ಒಬ್ಬ ಶಾಸಕರು ನಾಯಕರೇ ಗೊಂದಲ ಸೃಷ್ಟಿ ಮಾಡ್ತಿರೋದು ಅಂದಿದ್ದಾರೆ. ನಾವ್ಯಾಕೆ ಗೊಂದಲ ಸೃಷ್ಟಿ ಮಾಡೋಣ. ಒಳಗೊಳಗೇ ಸಂಚು ರೂಪಿಸಿಕೊಂಡು ನನ್ನ ಮೇಲೆ ಗೂಬೆ ಕೂರಿಸುತ್ತಾರೆ. ಅಧಿಕಾರದ ರುಚಿ ಕಂಡು ನಡುನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗ್ತಾರೆ. ನಾಯಕರಿಂದ ಪಕ್ಷ ಅಲ್ಲ, ಕಾರ್ಯಕರ್ತರಿಂದ ಪಕ್ಷ. ಕೆಲವರು ಪಕ್ಷದ ಕುತ್ತಿಗೆ ಕುಯ್ದು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ. ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...