Homeಮುಖಪುಟಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

- Advertisement -
- Advertisement -

ತಮ್ಮನ್ನು ಲಕ್ಕಿಡಿಪ್ ಸಿಎಂ ಎಂದು ಕರೆದ, ಅವರ ಕುಟುಂಬ ರಾಜಕಾರಣದ ಕುರಿತ ಆರೋಪ ಮಾಡಿದ ಬಿಜೆಪಿ ಎಂದ ಬಿಜೆಪಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ತಿರುಗೇಟು ನೀಡಿದ್ದಾರೆ.

ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಬಿಜೆಪಿಯ ಬಿಜೆಪಿಯ ಅಪರೇಶನ್ ಕಮಲದ ರಾಜಕಾರಣವನ್ನು ಎಚ್‌.ಡಿ.ಕೆ ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದಾರೆ. ಅವರ ವಂಶವಾಹಿ ರಾಜಕಾರಣದ ಪಟ್ಟಿಯನ್ನು ಈ ಹಿಂದೆ ಕೊಟ್ಟಿದೆ. ಮತ್ತೊಮ್ಮೆ ಕೊಡುತ್ತಿದ್ದೇನೆ ನೋಡಿ ಎಂದು ಧೀರ್ಘ ಪಟ್ಟಿ ಹಾಕಿದ್ದಾರೆ.
1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಕಡಿಮೆಯೇನಿಲ್ಲ

2009 ರಲ್ಲಿ ಶೇ. 30 ರಷ್ಟು ವಂಶಪಾರಂಪರ್ಯದ ಸದಸ್ಯರು ಲೋಕಸಭೆಗೆ ಆಯ್ಕೆಯಾದರೆ 2014 ರಲ್ಲಿ ಶೇ. 22ಕ್ಕೆ ಇಳಿದಿತ್ತು. ಈ ಕುಟುಂಬ ರಾಜಕಾರಣ ಎಂಬುದು ನಿಜಕ್ಕೂ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಮಾರಕ ಅಂಶವಾಗಿದೆ. ಆದರೆ ಕೇವಲ ಕಾಂಗ್ರೆಸ್‌ನಲ್ಲಿ, ಅಥವಾ ಪ್ರಾದೇಶಿಕ ಪಕ್ಷಗಳಲ್ಲಿ ಮಾತ್ರ ವಂಶಾಡಳಿತ ಇದೆ ಎಂದರೆ ತಪ್ಪಾಗುತ್ತದೆ. ಏಕೆಂದರೆ 2014ರಲ್ಲಿ ಬಿಜೆಪಿಯಿಂದ ಶೇ. 44 ರಷ್ಟು ಕುಟುಂಬ ರಾಜಕಾರಣದ ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು ಎಂದು ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯದ ವಿದ್ವಾಂಶ ರೋಮೈನ್ ಕಾರ್ಲೆವಾನ್ ಎಂಬುವವರ ಅಧ್ಯಯನ ತೆರೆದಿಟ್ಟಿದೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿತ್ತು!. ಹಾಗಾಗಿ ಎಲ್ಲಾ ಪಕ್ಷದ ಮತ್ತು ಎಲ್ಲಾ ರೀತಿಯ ಕುಟುಂಬ ರಾಜಕಾರಣವೂ ಸಹ ಖಂಡಿಸಬೇಕು.

ಒಂದೆಡೆ ಮೋದಿಯವರು ಮತ್ತು ಬಿಜೆಪಿ ವಂಶಾಡಳಿತ ರಾಜಕಾರಣವನ್ನು ವಿರೋಧಿಸುತ್ತಾರೆ. ಅದು ಪ್ರಜಾಪ್ರಭುತ್ವಕ್ಕೆ ಮಾರಕ ಎನ್ನುತ್ತಾರೆ. ಆದರೆ ಅವರ ಪಕ್ಷದಲ್ಲಿಯೇ ವಂಶವಾಹಿನಿ ರಾಜಕಾರಣ ಡಾಳಾಗಿ ಎದ್ದು ಕಾಣುತ್ತದೆ. ಅದರ ಬಗ್ಗೆ ಮಾತ್ರ ಅವರು ಮೌನ ವಹಿಸುತ್ತಾರೆ. ಇದು ಅವರ ಇಬ್ಬಂದಿತನವನ್ನು ತೋರಿಸುತ್ತದೆ.

2019ರಲ್ಲಿ ಬಿಜೆಪಿಯು ಲೋಕಸಭೆಯಲ್ಲಿ 303 ಸಂಸದರು ಮತ್ತು ರಾಜ್ಯಸಭೆಯಲ್ಲಿ 85 ಸದಸ್ಯರನ್ನು ಹೊಂದಿತ್ತು. ಎರಡೂ ಸೇರಿ ಒಟ್ಟು 388 ಸಂಸದರಲ್ಲಿ 45 ಸಂಸದರು ವಂಶಾಡಳಿತ ರಾಜಕಾರಣದಿಂದಲೇ ಬಂದಿದ್ದರು. ಅಂದರೆ ಸುಮಾರು ಶೇ. 11 ರಷ್ಟು ಎಂದು ದಿ ಪ್ರಿಂಟ್ ವರದಿ ಮಾಡಿತ್ತು.

ಬಿಜೆಪಿಯ ವಂಶಾಡಳಿತ ರಾಜಕಾರಣದ ಪಟ್ಟಿ ಇಲ್ಲಿದೆ

ಜೆ.ಪಿ ನಡ್ಡಾ

ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಬಸವರಾಜ ಬೊಮ್ಮಾಯಿ

ಕರ್ನಾಟಕದ ಬಿಜೆಪಿ ಆಡಳಿತದಲ್ಲಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ. ಅವರ ತಂದೆ ಸಹ ಹಿಂದೆ ಕರ್ನಾಟಕದಲ್ಲಿ ಸಿಎಂ ಹುದ್ದೆ ಅಲಂಕರಿಸಿದ್ದರು.

ಪೆಮಾ ಖಂಡು

ಹಾಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿರುವ ಇವರ ರಾಜ್ಯದ ಮಾಜಿ ಸಿಎಂ ದೋರ್ಜಿ ಖಂಡುರವರ ಪುತ್ರರಾಗಿದ್ದಾರೆ.

ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ರವರ ತಂದೆ ಗಂಗಾಧರ ಪಂತ್ ಫಡ್ನವೀಸ್‌ರವರು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. ದೇವೇಂದ್ರ ಫಡ್ನವೀಸ್‌ರವರ ಚಿಕ್ಕಮ್ಮ ಶೋಭಾ ಫಡ್ನವಿಸ್ ರಾಜ್ಯ ಸಚಿವರಾಗಿದ್ದರು.

ಸುವೇಂಧು ಅಧಿಕಾರಿ

ಪಶ್ಚಿಮ ಬಂಗಾಳದ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿಯವರ ಆಪ್ತನಾಗಿದ್ದ ಸುವೇಂಧು ಅಧಿಕಾರಿಯನ್ನು ಬಿಜೆಪಿ ಸೆಳೆದುಕೊಂಡಿತು. ಅವರ ತಂದೆ ಶಿಶಿರ್ ಅಧಿಕಾರಿ ಕೇಂದ್ರ ಸಚಿವರಾಗಿದ್ದವರು. ಈಗ ಸುವೇಂಧು ಬಂಗಾಳದ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಮೋದಿ ಕ್ಯಾಬಿನೆಟ್‌ನಲ್ಲಿರುವ ವಂಶಾಡಳಿತದಿಂದ ಬಂದ ಮಂತ್ರಿಗಳು

ಜ್ಯೋತಿರಾಧಿತ್ಯ ಸಿಂಧಿಯಾ

ಈಗ ವಿಮಾನಯಾನ ಸಚಿವರಾಗಿದ್ದಾರೆ. ಅವರ ತಂದೆ ಮಾಧವರಾವ್‌ ಸಿಂಧಿಯಾ ಹಿಂದೆ ಕೇಂದ್ರ ಸಚಿವರಾಗಿದ್ದರು.

ಅನುರಾಗ್ ಠಾಕೂರ್

ಈಗ ಕ್ರೀಡೆ ಮತ್ತು ಯುವಜನರ ಸಬಲೀಕರಣ ಸಚಿವರಾಗಿದ್ದಾರೆ. ಅವರ ತಂದೆ ಪ್ರೇಮ್ ಕುಮಾರ್ ಧುಮಾಲ್ ಹಿಂದೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಪಿಯೂಷ್ ಗೋಯಲ್

ಈಗ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವರು. ಅವರು ಮಾಜಿ ಬಿಜೆಪಿ ರಾಷ್ಟ್ರೀಯ ಖಜಾಂಚಿ ಮತ್ತು ಕೇಂದ್ರ ಸಚಿವ ದಿವಂಗತ ವೇದ್ ಪ್ರಕಾಶ್ ಗೋಯಲ್ ಅವರ ಪುತ್ರ.

ಧರ್ಮೇಂದ್ರ ಪ್ರಧಾನ್

ಸದ್ಯ ಕೇಂದ್ರ ಶಿಕ್ಷಣ ಸಚಿವ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾಗಿರುವ ಪ್ರಧಾನ್ ಅವರು ಬಿಜೆಪಿ ನಾಯಕ ದೇಬೇಂದ್ರ ಪ್ರಧಾನ್ ಅವರ ಪುತ್ರರಾಗಿದ್ದಾರೆ. ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದರು.

ಕಿರಣ್ ರಿಜಿಜು

ಇತ್ತೀಚೆಗೆ ಕಾನೂನು ಮತ್ತು ನ್ಯಾಯ ಸಚಿವರಾಗಿರುವ ಇವರು ಅರುಣಾಚಲ ಪ್ರದೇಶದ ಮೊದಲ ಹಂಗಾಮಿ ಸ್ಪೀಕರ್ ಆಗಿದ್ದ ರಿಂಚಿನ್ ಖರು ಅವರ ಪುತ್ರರಾಗಿದ್ದಾರೆ.

ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಮಂತ್ರಿಯಾಗಿರುವ ಇವರ ತಂದೆ ಆಂಧ್ರಪ್ರದೇಶದಲ್ಲಿ ಸಚಿವರಾಗಿದ್ದರು. ಇವರ ಅತ್ತೆ ಶಾಸಕಿಯಾಗಿದ್ದರು. ಪತಿ ಪರಕಾಲ ಪ್ರಭಾಕರ್ ಅವರು ಕಾಂಗ್ರೆಸ್‌ನಲ್ಲಿದ್ದರು ಮತ್ತು ಆಂಧ್ರಪ್ರದೇಶದ ನರಸಾಪುರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಫಲರಾದರು.

ಸುಷ್ಮಾ ಸ್ವರಾಜ್

ದೆಹಲಿಯ ಮಾಜಿ ಸಿಎಂ ಆಗಿರುವ ಸುಷ್ಮಾ ಸ್ವರಾಜ್‌ರವರ ಪತಿ ಮಿಜೋರಾಂನ ರಾಜ್ಯಪಾಲರಾಗಿದ್ದರು.

ಬಿಜೆಪಿಯ ವಂಶಾಡಳಿತ ಮುಂದುವರೆಸಿರುವ ಸಂಸತ್ ಸದಸ್ಯರು 

ರವಿಶಂಕರ್ ಪ್ರಸಾದ್ ಮಾಜಿ ಸಚಿವರಾಗಿರುವ ಇವರು, ಕಾಂಗ್ರೆಸ್ ಸಂಸದರಾಗಿದ್ದ ರಾಜೀವ್ ಶುಕ್ಲಾರವರ ಭಾಮೈದ.

ದುಷ್ಯಂತ್ ಸಿಂಗ್ ಸಂಸದರಾಗಿರುವ ಇವರು ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇರವರ ಪುತ್ರ.

ಬಿ.ವೈ. ರಾಘವೇಂದ್ರ: ಸಂಸದರಾಗಿರುವ ಇವರು ಕರ್ನಾಟಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮಗ.

ಮಂಗಳಾ ಅಂಗಡಿ: ಇವರ ಪತಿ ಸುರೇಶ್ ಅಂಗಡಿ ಬೆಳಗಾವಿ ಸಂಸದರಾಗಿದ್ದರು. ಅವರು ಮೃತಪಟ್ಟ ನಂತರ ಸಂಸದರಾಗಿದ್ದಾರೆ.

ರಾಜ್‌ಬೀರ್ ಸಿಂಗ್: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್‌ರವರ ಪುತ್ರ.

ಪ್ರವೇಶ್ ವರ್ಮಾ: ದೆಹಲಿಯ ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ.

ಪೂನಂ ಮಹಾಜನ್: ಮಾಜಿ ಕೇಂದ್ರ ಸಚಿವ ಪ್ರಮೋದ್ ಮಹಾಜನ್ ಅವರ ಪುತ್ರಿ.

ಜಯ್ ಶಾ

ಗೃಹ ಸಚಿವ ಅಮಿತ್ ಶಾರವರ ಮಗ ಜಯ್‌ ಶಾ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ.


ಇದನ್ನೂ ಓದಿ: ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...