Homeಮುಖಪುಟಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

- Advertisement -
- Advertisement -

ತಮ್ಮನ್ನು ಲಕ್ಕಿಡಿಪ್ ಸಿಎಂ ಎಂದು ಕರೆದ, ಅವರ ಕುಟುಂಬ ರಾಜಕಾರಣದ ಕುರಿತ ಆರೋಪ ಮಾಡಿದ ಬಿಜೆಪಿ ಎಂದ ಬಿಜೆಪಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ತಿರುಗೇಟು ನೀಡಿದ್ದಾರೆ.

ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಬಿಜೆಪಿಯ ಬಿಜೆಪಿಯ ಅಪರೇಶನ್ ಕಮಲದ ರಾಜಕಾರಣವನ್ನು ಎಚ್‌.ಡಿ.ಕೆ ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದಾರೆ. ಅವರ ವಂಶವಾಹಿ ರಾಜಕಾರಣದ ಪಟ್ಟಿಯನ್ನು ಈ ಹಿಂದೆ ಕೊಟ್ಟಿದೆ. ಮತ್ತೊಮ್ಮೆ ಕೊಡುತ್ತಿದ್ದೇನೆ ನೋಡಿ ಎಂದು ಧೀರ್ಘ ಪಟ್ಟಿ ಹಾಕಿದ್ದಾರೆ.
1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಕಡಿಮೆಯೇನಿಲ್ಲ

2009 ರಲ್ಲಿ ಶೇ. 30 ರಷ್ಟು ವಂಶಪಾರಂಪರ್ಯದ ಸದಸ್ಯರು ಲೋಕಸಭೆಗೆ ಆಯ್ಕೆಯಾದರೆ 2014 ರಲ್ಲಿ ಶೇ. 22ಕ್ಕೆ ಇಳಿದಿತ್ತು. ಈ ಕುಟುಂಬ ರಾಜಕಾರಣ ಎಂಬುದು ನಿಜಕ್ಕೂ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಮಾರಕ ಅಂಶವಾಗಿದೆ. ಆದರೆ ಕೇವಲ ಕಾಂಗ್ರೆಸ್‌ನಲ್ಲಿ, ಅಥವಾ ಪ್ರಾದೇಶಿಕ ಪಕ್ಷಗಳಲ್ಲಿ ಮಾತ್ರ ವಂಶಾಡಳಿತ ಇದೆ ಎಂದರೆ ತಪ್ಪಾಗುತ್ತದೆ. ಏಕೆಂದರೆ 2014ರಲ್ಲಿ ಬಿಜೆಪಿಯಿಂದ ಶೇ. 44 ರಷ್ಟು ಕುಟುಂಬ ರಾಜಕಾರಣದ ಸದಸ್ಯರು ಲೋಕಸಭೆಗೆ ಆಯ್ಕೆಯಾಗಿದ್ದರು ಎಂದು ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯದ ವಿದ್ವಾಂಶ ರೋಮೈನ್ ಕಾರ್ಲೆವಾನ್ ಎಂಬುವವರ ಅಧ್ಯಯನ ತೆರೆದಿಟ್ಟಿದೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿತ್ತು!. ಹಾಗಾಗಿ ಎಲ್ಲಾ ಪಕ್ಷದ ಮತ್ತು ಎಲ್ಲಾ ರೀತಿಯ ಕುಟುಂಬ ರಾಜಕಾರಣವೂ ಸಹ ಖಂಡಿಸಬೇಕು.

ಒಂದೆಡೆ ಮೋದಿಯವರು ಮತ್ತು ಬಿಜೆಪಿ ವಂಶಾಡಳಿತ ರಾಜಕಾರಣವನ್ನು ವಿರೋಧಿಸುತ್ತಾರೆ. ಅದು ಪ್ರಜಾಪ್ರಭುತ್ವಕ್ಕೆ ಮಾರಕ ಎನ್ನುತ್ತಾರೆ. ಆದರೆ ಅವರ ಪಕ್ಷದಲ್ಲಿಯೇ ವಂಶವಾಹಿನಿ ರಾಜಕಾರಣ ಡಾಳಾಗಿ ಎದ್ದು ಕಾಣುತ್ತದೆ. ಅದರ ಬಗ್ಗೆ ಮಾತ್ರ ಅವರು ಮೌನ ವಹಿಸುತ್ತಾರೆ. ಇದು ಅವರ ಇಬ್ಬಂದಿತನವನ್ನು ತೋರಿಸುತ್ತದೆ.

2019ರಲ್ಲಿ ಬಿಜೆಪಿಯು ಲೋಕಸಭೆಯಲ್ಲಿ 303 ಸಂಸದರು ಮತ್ತು ರಾಜ್ಯಸಭೆಯಲ್ಲಿ 85 ಸದಸ್ಯರನ್ನು ಹೊಂದಿತ್ತು. ಎರಡೂ ಸೇರಿ ಒಟ್ಟು 388 ಸಂಸದರಲ್ಲಿ 45 ಸಂಸದರು ವಂಶಾಡಳಿತ ರಾಜಕಾರಣದಿಂದಲೇ ಬಂದಿದ್ದರು. ಅಂದರೆ ಸುಮಾರು ಶೇ. 11 ರಷ್ಟು ಎಂದು ದಿ ಪ್ರಿಂಟ್ ವರದಿ ಮಾಡಿತ್ತು.

ಬಿಜೆಪಿಯ ವಂಶಾಡಳಿತ ರಾಜಕಾರಣದ ಪಟ್ಟಿ ಇಲ್ಲಿದೆ

ಜೆ.ಪಿ ನಡ್ಡಾ

ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಬಸವರಾಜ ಬೊಮ್ಮಾಯಿ

ಕರ್ನಾಟಕದ ಬಿಜೆಪಿ ಆಡಳಿತದಲ್ಲಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ. ಅವರ ತಂದೆ ಸಹ ಹಿಂದೆ ಕರ್ನಾಟಕದಲ್ಲಿ ಸಿಎಂ ಹುದ್ದೆ ಅಲಂಕರಿಸಿದ್ದರು.

ಪೆಮಾ ಖಂಡು

ಹಾಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿರುವ ಇವರ ರಾಜ್ಯದ ಮಾಜಿ ಸಿಎಂ ದೋರ್ಜಿ ಖಂಡುರವರ ಪುತ್ರರಾಗಿದ್ದಾರೆ.

ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ರವರ ತಂದೆ ಗಂಗಾಧರ ಪಂತ್ ಫಡ್ನವೀಸ್‌ರವರು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. ದೇವೇಂದ್ರ ಫಡ್ನವೀಸ್‌ರವರ ಚಿಕ್ಕಮ್ಮ ಶೋಭಾ ಫಡ್ನವಿಸ್ ರಾಜ್ಯ ಸಚಿವರಾಗಿದ್ದರು.

ಸುವೇಂಧು ಅಧಿಕಾರಿ

ಪಶ್ಚಿಮ ಬಂಗಾಳದ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿಯವರ ಆಪ್ತನಾಗಿದ್ದ ಸುವೇಂಧು ಅಧಿಕಾರಿಯನ್ನು ಬಿಜೆಪಿ ಸೆಳೆದುಕೊಂಡಿತು. ಅವರ ತಂದೆ ಶಿಶಿರ್ ಅಧಿಕಾರಿ ಕೇಂದ್ರ ಸಚಿವರಾಗಿದ್ದವರು. ಈಗ ಸುವೇಂಧು ಬಂಗಾಳದ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಮೋದಿ ಕ್ಯಾಬಿನೆಟ್‌ನಲ್ಲಿರುವ ವಂಶಾಡಳಿತದಿಂದ ಬಂದ ಮಂತ್ರಿಗಳು

ಜ್ಯೋತಿರಾಧಿತ್ಯ ಸಿಂಧಿಯಾ

ಈಗ ವಿಮಾನಯಾನ ಸಚಿವರಾಗಿದ್ದಾರೆ. ಅವರ ತಂದೆ ಮಾಧವರಾವ್‌ ಸಿಂಧಿಯಾ ಹಿಂದೆ ಕೇಂದ್ರ ಸಚಿವರಾಗಿದ್ದರು.

ಅನುರಾಗ್ ಠಾಕೂರ್

ಈಗ ಕ್ರೀಡೆ ಮತ್ತು ಯುವಜನರ ಸಬಲೀಕರಣ ಸಚಿವರಾಗಿದ್ದಾರೆ. ಅವರ ತಂದೆ ಪ್ರೇಮ್ ಕುಮಾರ್ ಧುಮಾಲ್ ಹಿಂದೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಪಿಯೂಷ್ ಗೋಯಲ್

ಈಗ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವರು. ಅವರು ಮಾಜಿ ಬಿಜೆಪಿ ರಾಷ್ಟ್ರೀಯ ಖಜಾಂಚಿ ಮತ್ತು ಕೇಂದ್ರ ಸಚಿವ ದಿವಂಗತ ವೇದ್ ಪ್ರಕಾಶ್ ಗೋಯಲ್ ಅವರ ಪುತ್ರ.

ಧರ್ಮೇಂದ್ರ ಪ್ರಧಾನ್

ಸದ್ಯ ಕೇಂದ್ರ ಶಿಕ್ಷಣ ಸಚಿವ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾಗಿರುವ ಪ್ರಧಾನ್ ಅವರು ಬಿಜೆಪಿ ನಾಯಕ ದೇಬೇಂದ್ರ ಪ್ರಧಾನ್ ಅವರ ಪುತ್ರರಾಗಿದ್ದಾರೆ. ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದರು.

ಕಿರಣ್ ರಿಜಿಜು

ಇತ್ತೀಚೆಗೆ ಕಾನೂನು ಮತ್ತು ನ್ಯಾಯ ಸಚಿವರಾಗಿರುವ ಇವರು ಅರುಣಾಚಲ ಪ್ರದೇಶದ ಮೊದಲ ಹಂಗಾಮಿ ಸ್ಪೀಕರ್ ಆಗಿದ್ದ ರಿಂಚಿನ್ ಖರು ಅವರ ಪುತ್ರರಾಗಿದ್ದಾರೆ.

ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಮಂತ್ರಿಯಾಗಿರುವ ಇವರ ತಂದೆ ಆಂಧ್ರಪ್ರದೇಶದಲ್ಲಿ ಸಚಿವರಾಗಿದ್ದರು. ಇವರ ಅತ್ತೆ ಶಾಸಕಿಯಾಗಿದ್ದರು. ಪತಿ ಪರಕಾಲ ಪ್ರಭಾಕರ್ ಅವರು ಕಾಂಗ್ರೆಸ್‌ನಲ್ಲಿದ್ದರು ಮತ್ತು ಆಂಧ್ರಪ್ರದೇಶದ ನರಸಾಪುರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಫಲರಾದರು.

ಸುಷ್ಮಾ ಸ್ವರಾಜ್

ದೆಹಲಿಯ ಮಾಜಿ ಸಿಎಂ ಆಗಿರುವ ಸುಷ್ಮಾ ಸ್ವರಾಜ್‌ರವರ ಪತಿ ಮಿಜೋರಾಂನ ರಾಜ್ಯಪಾಲರಾಗಿದ್ದರು.

ಬಿಜೆಪಿಯ ವಂಶಾಡಳಿತ ಮುಂದುವರೆಸಿರುವ ಸಂಸತ್ ಸದಸ್ಯರು 

ರವಿಶಂಕರ್ ಪ್ರಸಾದ್ ಮಾಜಿ ಸಚಿವರಾಗಿರುವ ಇವರು, ಕಾಂಗ್ರೆಸ್ ಸಂಸದರಾಗಿದ್ದ ರಾಜೀವ್ ಶುಕ್ಲಾರವರ ಭಾಮೈದ.

ದುಷ್ಯಂತ್ ಸಿಂಗ್ ಸಂಸದರಾಗಿರುವ ಇವರು ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇರವರ ಪುತ್ರ.

ಬಿ.ವೈ. ರಾಘವೇಂದ್ರ: ಸಂಸದರಾಗಿರುವ ಇವರು ಕರ್ನಾಟಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮಗ.

ಮಂಗಳಾ ಅಂಗಡಿ: ಇವರ ಪತಿ ಸುರೇಶ್ ಅಂಗಡಿ ಬೆಳಗಾವಿ ಸಂಸದರಾಗಿದ್ದರು. ಅವರು ಮೃತಪಟ್ಟ ನಂತರ ಸಂಸದರಾಗಿದ್ದಾರೆ.

ರಾಜ್‌ಬೀರ್ ಸಿಂಗ್: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್‌ರವರ ಪುತ್ರ.

ಪ್ರವೇಶ್ ವರ್ಮಾ: ದೆಹಲಿಯ ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ.

ಪೂನಂ ಮಹಾಜನ್: ಮಾಜಿ ಕೇಂದ್ರ ಸಚಿವ ಪ್ರಮೋದ್ ಮಹಾಜನ್ ಅವರ ಪುತ್ರಿ.

ಜಯ್ ಶಾ

ಗೃಹ ಸಚಿವ ಅಮಿತ್ ಶಾರವರ ಮಗ ಜಯ್‌ ಶಾ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ.


ಇದನ್ನೂ ಓದಿ: ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...