Homeಮುಖಪುಟಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಕುಮಾರಸ್ವಾಮಿಗೆ ವಿಶ್ ಮಾಡಿದ ನರೇಂದ್ರ ಮೋದಿಯಿಂದ ಹಿಡಿದು ಬಹುತೇಕ ಬಿಜೆಪಿ ಮುಖಂಡರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರ ಜನ್ಮದಿನಕ್ಕೆ ವಿಶ್ ಮಾಡಿಲ್ಲ!

- Advertisement -
- Advertisement -

ಮೊನ್ನೆ ಡಿಸೆಂಬರ್ 16 ರಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ತಮ್ಮ 62 ನೇ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಂಡರು. ಸಾಮಾನ್ಯವಾಗಿ ಗಣ್ಯ ವ್ಯಕ್ತಿಗಳ ಹುಟ್ಟುಹಬ್ಬವಿದ್ದಾಗ ಪಕ್ಷಬೇಧ ಮರೆತು ಎಲ್ಲರೂ ಅಭಿನಂದನೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಯಾರು ಯಾರು ಅಭಿನಂದನೆ ಸಲ್ಲಿಸಿದರು ಮತ್ತು ಯಾರು ಯಾರು ಅಭಿನಂದನೆ ಹೇಳಲಿಲ್ಲ ಎನ್ನುವುದನ್ನು ಗಮನಿಸಿದರೆ ವಾಡಿಕೆ ಮೀರಿ ಮತ್ತೇನೂ ನಡೆಯುತ್ತಿದೆ ಅನಿಸದೇ ಇರಲಾರದು.

ಈ ಬಾರಿಯ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಕಾಂಗ್ರೆಸ್ ನಾಯಕರ್ಯಾರೂ ಅಭಿನಂದನೆ ಸಲ್ಲಿಸಿಲ್ಲ. ಜೆಡಿಎಸ್‌ನ ಕೆಲವರು ಮಾತ್ರ ಅಭಿನಂದಿಸಿದರೆ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಬಹುತೇಕ ಸಚಿವರು, ಶಾಸಕರು ಮತ್ತು ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ. ಅಷ್ಟು ಮಾತ್ರವಲ್ಲದೆ, ಹೊರರಾಜ್ಯದ ಬಿಜೆಪಿ ಸಂಸದರು, ಬಿಜೆಪಿ ನಾಯಕರು ಸಹ ಮೊದಲ ಬಾರಿಗೆ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರೆ ಏನರ್ಥ? ಸರಿ ಯಾರು ಯಾರು ಅಭಿನಂದಿಸಿದ್ದಾರೆ ಮೊದಲು ನೋಡಿ ಬಿಡೋಣ.

ಬಿಜೆಪಿ ಪಕ್ಷವು 2018ರ ಮೇ ತಿಂಗಳಿನಿಂದ 2020ರ ಅಕ್ಟೋಬರ್‌ವರೆಗೂ ಕುಮಾರಸ್ವಾಮಿಯವರನ್ನು ಟೀಕಿಸುತ್ತಲೆ ಇದೆ. ಹಲವು ವಿಚಾರಗಳಿಗೆ ಟ್ರೋಲ್ ಮಾಡುತ್ತಲೆ ಇದೆ. ಅದೇ ಬಿಜೆಪಿ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿಗಳಾದ ಡಾ.ಅಶ್ವಥ್ ನಾರಾಯಣ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಸಚಿವರಾದ ಡಾ.ಕೆ ಸುಧಾಕರ್, ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಸಿ.ಟಿ ರವಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಂತರ ಸಂಸದರಾದ ಪ್ರತಾಪ್ ಸಿಂಹ, ಶೋಭಾ ಕರಂದ್ಲಾಚೆ, ಪಿ.ಸಿ ಮೋಹನ್, ಬಿ.ವೈ ರಾಘವೇಂದ್ರ, ಶಶಿಕಲಾ ಜೊಲ್ಲೆ ಅಭಿನಂದನೆ ತಿಳಿಸಿದ್ದಾರೆ.

ವಿಶೇಷವೆಂದರೆ ರಾಜಸ್ಥಾನದ ರಾಜ್‌ಸಮಂದ್‌ನ ಬಿಜೆಪಿ ಸಂಸದರಾದ ದಿಯಾ ಕುಮಾರಿ, ಹರಿಯಾಣದ ಬಿಜೆಪಿ ಸಂಸದ ಸಂಜಯ್ ಭಾಟಿಯಾ ಮತ್ತು ಮಹಾರಾಷ್ಟ್ರದ ಬಿಜೆಪಿ ರಾಜ್ಯಸಭಾ ಸದಸ್ಯ ಸುರೇಶ್ ಪ್ರಭುರವರು ಸಹ ಕರ್ನಾಟಕ ಮಾಜಿ ಸಿಎಂಗೆ ಟ್ವೀಟ್‌ ಮೂಲಕ ಶುಭ ಹಾರೈಸಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಜೆಡಿಎಸ್ ವತಿಯಿಂದ ಎಚ್.ಡಿ ರೇವಣ್ಣ, ಸಿ.ಎಸ್ ಪುಟ್ಟರಾಜು, ಬಂಡೆಪ್ಪ ಕಾಶೆಂಪೂರ್, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಸಾ.ರ ಮಹೇಶ್, ವೈಎಸ್‌ವಿ ದತ್ತ, ಡಿ.ಸಿ ಗೌರಿಶಂಕರ್, ಆರ್ ಮಂಜುನಾಥ್ ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ. ಆದರೆ ಒಂದು ವರ್ಷ ಜೆಡಿಎಸ್‌ ಜೊತೆ ಮೈತ್ರಿ ಸರ್ಕಾರ ನಡೆಸಿದ್ದ ಕಾಂಗ್ರೆಸ್‌ನ ಯಾವೊಬ್ಬ ಮುಖಂಡರು ಟ್ವೀಟ್ ಮೂಲಕ ಶುಭಾಶಯ ತಿಳಿಸಿಲ್ಲ.

ಇನ್ನು ತಮಗೆ ಹುಟ್ಟು ಹಬ್ಬದ ಶುಭಾಶಯ ಕೋರಿದವರಿಗೆ ಧನ್ಯವಾದ ತಿಳಿಸುತ್ತಾ ಕುಮಾರಸ್ವಾಮಿಯವರು “ತತ್ವ-ಸಿದ್ಧಾಂತಗಳೆಂಬುದು ಕ್ಲಿಷೆಯ ಮಾತಾಗಿರುವ ಈ ದಿನಗಳಲ್ಲಿ ನಾಡಿನ ಜನರ ಒಳಿತಿಗಾಗಿ ದುಡಿವುದಷ್ಟೆ ಒಂದು ಸಿದ್ಧಾಂತವಾಗಬೇಕು” ಎಂಬ ಮಾತುಗಳನ್ನಾಡಿದ್ದಾರೆ. ತಮ್ಮ ಪಕ್ಷ ಜಾತ್ಯಾತೀತ ಜನತಾದಳವೆಂದೂ, ತಾವು ರೈತಪರವೆಂದು ಘೋಷಿಸಿಕೊಂಡಿದ್ದ ಕುಮಾರಸ್ವಾಮಿಯವರು ನಿಧಾನವಾಗಿ ತಮ್ಮ ಸಿದ್ದಾಂತದ ಅರ್ಥವನ್ನು ಬದಲಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

ತನ್ನನ್ನು ಸಿಎಂ ಕುರ್ಚಿಯಿಂದ ಇಳಿಸಿದ ಬಿಜೆಪಿ ಬಗ್ಗೆ ಕುಮಾರಸ್ವಾಮಿಯವರಿಗೆ ಸಿಟ್ಟಿಲ್ಲ. ಕಳೆದ ಆರು ತಿಂಗಳುಗಳಿಂದ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸಖ್ಯವನ್ನು, ಅದೇ ಸಮಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆಯನ್ನು ಮುಂದುವರೆಸಿದ್ದಾರೆ. ನೇರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಪ್ರತಿದಿನ ಟೀಕಿಸುತ್ತಿದ್ದಾರೆ. ತಾನು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ದರಾಮಯ್ಯ ಕಾರಣ ಎಂದು ಇಂದೂ ಸಹ ಆರೋಪಿಸಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ತಮ್ಮ ಹುಟ್ಟು ಹಬ್ಬಕ್ಕೂ ಒಂದು ವಾರ ಮುಂಚಿತವಾಗಿ ಡಿಸೆಂಬರ್ 08 ರಂದು ರಾಜ್ಯ ವಿಧಾನ ಮಂಡಲದ ವಿಧಾನ ಪರಿಷತ್‌ನಲ್ಲಿ ಬಿಜೆಪಿಯು ಕರ್ನಾಟಕ ಭೂಸುಧಾರಣೆ ತಿದ್ದುಪಡಿ ವಿಧೇಯಕ 2020 ಅನ್ನು ಮಂಡಿಸಿತು. ರೈತರ ಪಕ್ಷ ಎಂದು ಹೇಳಿಕೊಳ್ಳುವ ಜೆಡಿಎಸ್ ಮೂರು ತಿಂಗಳ ಹಿಂದೆ ತಾನೇ ಅದನ್ನು ವೀರಾವೇಷದಿಂದ ವಿರೋಧಿಸಿತ್ತು. ಆದರೆ ಡಿಸೆಂಬರ್ 08 ರಂದು ಮಾತ್ರ ಸದ್ದಿಲ್ಲದೆ ಭೂಸುಧಾರಣೆ ವಿಧೇಯಕದ ಪರವಾಗಿ ಮತಹಾಕಿ ಪರಿಷತ್‌ನಲ್ಲಿ ಅದು ಅಂಗೀಕಾರವಾಗಲು ಕಾರಣವಾಯಿತು! ಆ ಮೂಲಕ ಬಿಜೆಪಿಯೊಂದಿಗೆ ಬಹಿರಂಗ ದೋಸ್ತಿ ಘೋಷಿಸಿತು.

ಅದಾದ ಒಂದು ವಾರದ ನಂತರ ಒಂದು ದಿನದ ವಿಧಾನಪರಿಷತ್ ಅಧಿವೇಶನ ಕರೆಯಲಾಯಿತು. ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ಮತ್ತು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಆಡಳಿತರೂಢ ಬಿಜೆಪಿ ಪಕ್ಷ ಎಣಿಸಿತ್ತು. ಆಗ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರನ್ನು ಪದಚ್ಯುತಿಗೊಳಿಸಲು ಕುಮಾರಸ್ವಾಮಿಯವರು ಬಿಜೆಪಿಗೆ ಬೇಷರತ್ ಬೆಂಬಲ ನೀಡಿದರು. ಸಭಾಪತಿಗಳಾದ ಪ್ರತಾಪ್ ಚಂದ್ರಶೆಟ್ಟಿಯವರು ಆಸೀನರಾಗುವ ಮೊದಲೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಸೇರಿ ಉಪಸಭಾಪತಿ ಧರ್ಮೇಗೌಡ ಅವರನ್ನು ಕುಳ್ಳಿರಿಸಿ ಭಾರೀ ಗದ್ದಲ ನಡೆಯಲು ಕಾರಣರಾದರು!

ಇನ್ನು ಕರ್ನಾಟಕದಲ್ಲಿ ದಿನೇ ದಿನೇ ಜೆಡಿಎಸ್ ಬಲ ಕುಗ್ಗುತ್ತಿರುವುದರಿಂದ ಕುಮಾರಸ್ವಾಮಿಯವರು ಬಿಜೆಪಿಯಲ್ಲಿ ತಮ್ಮ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಅದಕ್ಕೆ ಅನುಗುಣವಾಗಿಯೇ ಕುಮಾರಸ್ವಾಮಿಯವರು ಬಿಜೆಪಿಯವರೊಡನೆ ಸೌಮ್ಯವಾಗಿಯೂ, ಕಾಂಗ್ರೆಸ್‌ನವರೊಡನೆ ಉಗ್ರವಾಗಿಯೂ ನಡೆದುಕೊಳ್ಳುತ್ತಿದ್ದಾರೆ. ಅದಕ್ಕೆ ಪುಷ್ಠಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿಯ ರಾಜ್ಯದ ಎಲ್ಲಾ ಮುಖಂಡರು, ಹೊರರಾಜ್ಯದ ಸಂಸದರು, ಮುಖಂಡರು ಸಹ ಕುಮಾರಸ್ವಾಮಿಯವರ ಜನ್ಮದಿನಕ್ಕೆ ಶುಭಾಶಯ ಕೋರಿ ಪಕ್ಷಕ್ಕೆ ಬರಮಾಡಿಕೊಳ್ಳಲು ಸಿದ್ದರಾಗಿದ್ದಾರೆ.

ಅಚ್ಚರಿಯ ಮತ್ತು ನೀವು ನಂಬಲೇಬೇಕಾದ ಮತ್ತೊಂದು ಅಂಶವೆಂದರೆ ಕುಮಾರಸ್ವಾಮಿಯವರ ಜನ್ಮದಿನದ ಎರಡು ದಿನದ ನಂತರ ಅಂದರೆ ಡಿಸೆಂಬರ್ 17ರಂದು ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಸಹ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿದ್ದ ಬಿಜೆಪಿಯ ನರೇಂದ್ರ ಮೋದಿ ಆದಿಯಾಗಿ ಸುರೇಶ್ ಪ್ರಭು, ದಿಯಾ ಕುಮಾರಿ, ಸಂಜಯ್ ಭಾಟಿಯಾ ಸೇರಿ ಬಹುತೇಕರು ತಮ್ಮದೇ ಪಕ್ಷದ ಮುಖಂಡರಾದ ಜಗದೀಶ್ ಶೆಟ್ಟರ್‌ರವರಿಗೆ ಜನ್ಮದಿನದ ಶುಭಾಶಯ ತಿಳಿಸಲಿಲ್ಲ ಏಕೆ? ಈ ಪ್ರಶ್ನೆಗೆ ಉತ್ತರ ಸ್ಪಷ್ಟ. ಬಿಜೆಪಿಯು ಕುಮಾರಸ್ವಾಮಿಯವರನ್ನು ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಅವರ ಪಕ್ಷದ ನಿರ್ಣಯದಂತೆ ಕುಮಾರಸ್ವಾಮಿಯವರಿಗೆ ವಿಶ್ ಮಾಡಿ ಸಂಬಂಧ ವೃದ್ದಿಸಿಕೊಳ್ಳಲು ನೋಡುತ್ತಿದೆ. ಕುಮಾರಸ್ವಾಮಿಯವರಿಗೂ ಅದೇ ಬೇಕಿತ್ತು ಎನ್ನುವಂತೆ ವರ್ತಿಸುತ್ತಿದ್ದಾರೆ ಅಷ್ಟೇ.

ಇನ್ನು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರು ಬಸ್‌ ಸೇವೆ ನಿಲ್ಲಿಸಿ ಹೋರಾಟ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಯ ಪರವಾಗಿ ವಿಧಾನ ಪರಿಷತ್ತಿನಲ್ಲಿ ಮತ ಹಾಕಿದ ಜೆಡಿಎಸ್‌ ವಿರುದ್ಧ ಕೆಂಡಾಮಂಡಲವಾಗಿದ್ದರು. “ಕುಮಾರಸ್ವಾಮಿ ಇರೋದೇ ಪುಟಗೋಸಿ ರಾಜಕಾರಣ ಮಾಡಲು” ಎಂದು ಕೋಡಿಹಳ್ಳಿ ಆಕ್ರೋಶ ಹೊರಹಾಕಿದ್ದರು. ಆಗ ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಪ್ರಕಟಣೆಯಲ್ಲಿ “ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್‌ರವರು ಲಘುವಾಗಿ ಮಾತನಾಡಿರುವುದು ಖಂಡನೀಯ” ಎಂದು ಬರೆದು ಎಚ್‌ಡಿಕೆ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದರು.

ಒಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಗೆ ಕಾಲ ಕೂಡಿಬರುತ್ತಿದೆಯೇ? ಅಥವಾ ಕುಮಾರಸ್ವಾಮಿಯವರೆ ಬಿಜೆಪಿಯತ್ತ ನಡೆಯುತ್ತಿದ್ದಾರೆಯೇ? ಈ ಪ್ರಶ್ನೆಗಳಿಗೆ ಕಾಲವೇ ಉತ್ತರಿಸಲಿದೆ.


ಇದನ್ನೂ ಓದಿ: ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...