Homeಕರ್ನಾಟಕಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

- Advertisement -
- Advertisement -

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂಬುದು ಜನರಿಗೆ ಅರ್ಥವಾಗಬೇಕಿದೆ ಎಂದಿದ್ದಾರೆ.

‘ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

’ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು’ ಎಂದು ಹೇಳಿದ್ದಾರೆ.

’ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ’ ಎಂದು ಆಗ್ರಹಿಸಿದ್ದಾರೆ.

ಒಕ್ಕೂಟ ಸರ್ಕಾರದ ಕ್ರಮಕ್ಕೆ ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರೀಯ ಭಾಷೆಯಾದ ಕನ್ನಡಕ್ಕೆ ಸ್ಥಾನ ನೀಡದಿರುವುದು ನೋವಿನ ಸಂಗತಿ ಎಂದು ಕನ್ನಡಪರ ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದಾ ಹೀನ ಹತ್ಯೆ: ಮಗಳನ್ನೆ ಕೊಂದ ತಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...