Homeಕರ್ನಾಟಕಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

- Advertisement -
- Advertisement -

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂಬುದು ಜನರಿಗೆ ಅರ್ಥವಾಗಬೇಕಿದೆ ಎಂದಿದ್ದಾರೆ.

‘ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

’ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು’ ಎಂದು ಹೇಳಿದ್ದಾರೆ.

’ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ’ ಎಂದು ಆಗ್ರಹಿಸಿದ್ದಾರೆ.

ಒಕ್ಕೂಟ ಸರ್ಕಾರದ ಕ್ರಮಕ್ಕೆ ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರೀಯ ಭಾಷೆಯಾದ ಕನ್ನಡಕ್ಕೆ ಸ್ಥಾನ ನೀಡದಿರುವುದು ನೋವಿನ ಸಂಗತಿ ಎಂದು ಕನ್ನಡಪರ ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದಾ ಹೀನ ಹತ್ಯೆ: ಮಗಳನ್ನೆ ಕೊಂದ ತಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...