Homeಕರ್ನಾಟಕಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

- Advertisement -
- Advertisement -

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂಬುದು ಜನರಿಗೆ ಅರ್ಥವಾಗಬೇಕಿದೆ ಎಂದಿದ್ದಾರೆ.

‘ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

’ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು’ ಎಂದು ಹೇಳಿದ್ದಾರೆ.

’ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ’ ಎಂದು ಆಗ್ರಹಿಸಿದ್ದಾರೆ.

ಒಕ್ಕೂಟ ಸರ್ಕಾರದ ಕ್ರಮಕ್ಕೆ ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರೀಯ ಭಾಷೆಯಾದ ಕನ್ನಡಕ್ಕೆ ಸ್ಥಾನ ನೀಡದಿರುವುದು ನೋವಿನ ಸಂಗತಿ ಎಂದು ಕನ್ನಡಪರ ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದಾ ಹೀನ ಹತ್ಯೆ: ಮಗಳನ್ನೆ ಕೊಂದ ತಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....