Homeಕರ್ನಾಟಕಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಲೋಕಸಭಾ ಸಚಿವಾಲಯದಿಂದ ಕನ್ನಡ ಕಡೆಗಣನೆ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

- Advertisement -
- Advertisement -

ಲೋಕಸಭಾ ಸಚಿವಾಲಯದ ಅಡಿಯಲ್ಲಿ ಬರುವ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಸಂಸ್ಥೆಯು ಕನ್ನಡವನ್ನು ಕಡೆಗಣಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂಬುದು ಜನರಿಗೆ ಅರ್ಥವಾಗಬೇಕಿದೆ ಎಂದಿದ್ದಾರೆ.

‘ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

’ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು’ ಎಂದು ಹೇಳಿದ್ದಾರೆ.

’ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ’ ಎಂದು ಆಗ್ರಹಿಸಿದ್ದಾರೆ.

ಒಕ್ಕೂಟ ಸರ್ಕಾರದ ಕ್ರಮಕ್ಕೆ ಕನ್ನಡ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರೀಯ ಭಾಷೆಯಾದ ಕನ್ನಡಕ್ಕೆ ಸ್ಥಾನ ನೀಡದಿರುವುದು ನೋವಿನ ಸಂಗತಿ ಎಂದು ಕನ್ನಡಪರ ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದಾ ಹೀನ ಹತ್ಯೆ: ಮಗಳನ್ನೆ ಕೊಂದ ತಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...