Homeಮುಖಪುಟಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

ಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

- Advertisement -
- Advertisement -

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳು ರೇವತಿಯವರ ವಿವಾಹವನ್ನು ಸರಳ ರೀತಿಯಲ್ಲಿ ನಡೆಸಿದರು. ಈ ವಿವಾಹ ವಿಚಾರವನ್ನು ದೊಡ್ಡ ಸಮಸ್ಯೆಯನ್ನಾಗಿ ಚರ್ಚಿಸುವ ಅಗತ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಅವರ ಕುಟುಂಬ ದೊಡ್ಡದಾಗಿದ್ದರೂ ಅವರು ಮದುವೆಯನ್ನು ಮಿತಿಯಲ್ಲಿ ನಡೆಸಿದರು. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಮನಗರದ ಬಳಿಯ ಎಚ್‌ಡಿಕೆ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ನಿನ್ನೆ ವಿವಾಹ ಕಾರ್ಯಕ್ರಮ ಜರುಗಿತ್ತು. 60-70 ಜನ ಭಾಗವಹಿಸಿದ್ದರು. ಯಾವುದೇ ಸಾಮಾಜಿಕ ಅಂತರ ನಿಯಮಗಳನ್ನು ಕಾಪಾಡಿಲ್ಲ ಎಂಬ ಅಪಸ್ವರ ಕೇಳಿಬಂದಿತ್ತು.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಸ್ಥಳಾಂತರಿಸಿದ್ದೇವೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದರು.

ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ. ಆಗ ಒಟ್ಟಿಗೆ ಕುಳಿತು ಊಟ ಮಾಡೋಣ ಎಂದು ಮದುವೆಯ ನಂತರ ಎಚ್‌ಡಿಕೆ ಟ್ವೀಟ್‌ ಮಾಡಿದ್ದರು.

ಆದರೆ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ರವರು ಮಾತ್ರ ಮದುವೆ ಆಕ್ಷೇಪ ವ್ಯಕ್ತಪಡಿಸಿದ್ದರು. “ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಅಶ್ವಥ್‌ ನಾರಾಯಣ್‌ ತಿಳಿಸಿದ್ದರು.

ಈ ಕುರಿತು ಬಹಳಷ್ಟು ಜನ ಎಚ್‌.ಡಿ ಕುಮಾರಸ್ವಾಮಿಯವರು ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ಮೇಲೆ ಯಾವಾಗ ಕ್ರಮ ತೆಗೆದುಕೊಳ್ಳುತ್ತೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು. ಮಾಧ್ಯಮಗಳ ಈ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪನವರು ಈ ವಿಷಯವನ್ನು ದೊಡ್ಡದು ಮಾಡಬೇಡಿ, ಅವರ ಕುಟುಂಬ ದೊಡ್ಡದಾಗಿದ್ದರೂ ಸಹ ಮಿತಿಯಲ್ಲಿಯೇ ಮದುವೆ ಮಾಡಿದ್ದರೆ. ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಯಾಕೆ ದೊಡ್ಡದು ಮಾಡಬಾರದು? ಬಡವರಿಗೊಂದು, ಶ್ರೀಮಂತರಿಗೆ ಮತ್ತೊಂದು, ಹೀಗೆ ಎರಡು ರೀತಿಯ ಕಾನೂನು ಜಾರಿಯಲ್ಲಿದೆಯಾ?

  2. ಸ್ವಿಮಿಂಗ್ ಪೂಲ್ ನಲ್ಲಿ ಮಜಾ ಮಾಡ್ತಿದ್ದ ಮಂತ್ರಿನ ಬಿಟ್ಟು ,ಮನೆನಲ್ಲಿ ಮಾಡಿದ ಮದುವೆ ಬಗ್ಗೆ ಮಾತನಾಡ್ತರಲ್ಲ ಜನ , ಛೇ

  3. ಈ ಫೋಟೋದಲ್ಲಿಯೇ 18 ಜನ ಕಾಣಿಸ್ತಾ ಇದಾರೆ. ಖಚಿತ ಮಾಹಿತಿ ಪ್ರಕಾರ 100-150 ಜನ ಸೇರಿದ್ದೂ, ಯಾವದೇ ಮಾಸ್ಕ ಅಥವಾ ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ದೇಶದ ಕಾನೂನನ್ನು ಉಲ್ಲಂಘಿಸಲಾಗಿದೆ. ರಾಜ್ಯ ಸರಕಾರ ಕ್ರಮಕೈಕೊಳ್ಳದಿದ್ದರೆ, ಕೇಂದ್ರ ಸರಕಾರ ವರದಿ ತರಿಸ್ಕೊಂಡು ವಿಮರ್ಶೆ ಮಾಡಬೇಕು. ಮಂದಿರ ಮಸ್ಜಿದ್ ಗಳಿಗೆ ಕಟ್ಟು ನಿಟ್ಟಿನಲ್ಲಿ ಕ್ರಮ ಕೈಕೊಡಾಗ ಇವರಿಗೆ ರಾಜಕೀಯ ರಕ್ಷಣೆ ಕೊಡುವದು ಎಷ್ಟು ಸರಿ.
    ಅಕಸ್ಮಾತ್ ಈ ಅರೆಅದಲ್ಲೂ ಸೋಂಕು ಅವರಿದ್ರೆ ಇದಕ್ಕೆ ಸರಕಾರವೇ ಹೊಣೆ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...