Homeಮುಖಪುಟಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

ಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

- Advertisement -
- Advertisement -

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳು ರೇವತಿಯವರ ವಿವಾಹವನ್ನು ಸರಳ ರೀತಿಯಲ್ಲಿ ನಡೆಸಿದರು. ಈ ವಿವಾಹ ವಿಚಾರವನ್ನು ದೊಡ್ಡ ಸಮಸ್ಯೆಯನ್ನಾಗಿ ಚರ್ಚಿಸುವ ಅಗತ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಅವರ ಕುಟುಂಬ ದೊಡ್ಡದಾಗಿದ್ದರೂ ಅವರು ಮದುವೆಯನ್ನು ಮಿತಿಯಲ್ಲಿ ನಡೆಸಿದರು. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಮನಗರದ ಬಳಿಯ ಎಚ್‌ಡಿಕೆ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ನಿನ್ನೆ ವಿವಾಹ ಕಾರ್ಯಕ್ರಮ ಜರುಗಿತ್ತು. 60-70 ಜನ ಭಾಗವಹಿಸಿದ್ದರು. ಯಾವುದೇ ಸಾಮಾಜಿಕ ಅಂತರ ನಿಯಮಗಳನ್ನು ಕಾಪಾಡಿಲ್ಲ ಎಂಬ ಅಪಸ್ವರ ಕೇಳಿಬಂದಿತ್ತು.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಸ್ಥಳಾಂತರಿಸಿದ್ದೇವೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದರು.

ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ. ಆಗ ಒಟ್ಟಿಗೆ ಕುಳಿತು ಊಟ ಮಾಡೋಣ ಎಂದು ಮದುವೆಯ ನಂತರ ಎಚ್‌ಡಿಕೆ ಟ್ವೀಟ್‌ ಮಾಡಿದ್ದರು.

ಆದರೆ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ರವರು ಮಾತ್ರ ಮದುವೆ ಆಕ್ಷೇಪ ವ್ಯಕ್ತಪಡಿಸಿದ್ದರು. “ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಅಶ್ವಥ್‌ ನಾರಾಯಣ್‌ ತಿಳಿಸಿದ್ದರು.

ಈ ಕುರಿತು ಬಹಳಷ್ಟು ಜನ ಎಚ್‌.ಡಿ ಕುಮಾರಸ್ವಾಮಿಯವರು ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ಮೇಲೆ ಯಾವಾಗ ಕ್ರಮ ತೆಗೆದುಕೊಳ್ಳುತ್ತೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು. ಮಾಧ್ಯಮಗಳ ಈ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪನವರು ಈ ವಿಷಯವನ್ನು ದೊಡ್ಡದು ಮಾಡಬೇಡಿ, ಅವರ ಕುಟುಂಬ ದೊಡ್ಡದಾಗಿದ್ದರೂ ಸಹ ಮಿತಿಯಲ್ಲಿಯೇ ಮದುವೆ ಮಾಡಿದ್ದರೆ. ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಯಾಕೆ ದೊಡ್ಡದು ಮಾಡಬಾರದು? ಬಡವರಿಗೊಂದು, ಶ್ರೀಮಂತರಿಗೆ ಮತ್ತೊಂದು, ಹೀಗೆ ಎರಡು ರೀತಿಯ ಕಾನೂನು ಜಾರಿಯಲ್ಲಿದೆಯಾ?

  2. ಸ್ವಿಮಿಂಗ್ ಪೂಲ್ ನಲ್ಲಿ ಮಜಾ ಮಾಡ್ತಿದ್ದ ಮಂತ್ರಿನ ಬಿಟ್ಟು ,ಮನೆನಲ್ಲಿ ಮಾಡಿದ ಮದುವೆ ಬಗ್ಗೆ ಮಾತನಾಡ್ತರಲ್ಲ ಜನ , ಛೇ

  3. ಈ ಫೋಟೋದಲ್ಲಿಯೇ 18 ಜನ ಕಾಣಿಸ್ತಾ ಇದಾರೆ. ಖಚಿತ ಮಾಹಿತಿ ಪ್ರಕಾರ 100-150 ಜನ ಸೇರಿದ್ದೂ, ಯಾವದೇ ಮಾಸ್ಕ ಅಥವಾ ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ದೇಶದ ಕಾನೂನನ್ನು ಉಲ್ಲಂಘಿಸಲಾಗಿದೆ. ರಾಜ್ಯ ಸರಕಾರ ಕ್ರಮಕೈಕೊಳ್ಳದಿದ್ದರೆ, ಕೇಂದ್ರ ಸರಕಾರ ವರದಿ ತರಿಸ್ಕೊಂಡು ವಿಮರ್ಶೆ ಮಾಡಬೇಕು. ಮಂದಿರ ಮಸ್ಜಿದ್ ಗಳಿಗೆ ಕಟ್ಟು ನಿಟ್ಟಿನಲ್ಲಿ ಕ್ರಮ ಕೈಕೊಡಾಗ ಇವರಿಗೆ ರಾಜಕೀಯ ರಕ್ಷಣೆ ಕೊಡುವದು ಎಷ್ಟು ಸರಿ.
    ಅಕಸ್ಮಾತ್ ಈ ಅರೆಅದಲ್ಲೂ ಸೋಂಕು ಅವರಿದ್ರೆ ಇದಕ್ಕೆ ಸರಕಾರವೇ ಹೊಣೆ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...