Homeಮುಖಪುಟಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

ಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

- Advertisement -
- Advertisement -

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳು ರೇವತಿಯವರ ವಿವಾಹವನ್ನು ಸರಳ ರೀತಿಯಲ್ಲಿ ನಡೆಸಿದರು. ಈ ವಿವಾಹ ವಿಚಾರವನ್ನು ದೊಡ್ಡ ಸಮಸ್ಯೆಯನ್ನಾಗಿ ಚರ್ಚಿಸುವ ಅಗತ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಅವರ ಕುಟುಂಬ ದೊಡ್ಡದಾಗಿದ್ದರೂ ಅವರು ಮದುವೆಯನ್ನು ಮಿತಿಯಲ್ಲಿ ನಡೆಸಿದರು. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಮನಗರದ ಬಳಿಯ ಎಚ್‌ಡಿಕೆ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ನಿನ್ನೆ ವಿವಾಹ ಕಾರ್ಯಕ್ರಮ ಜರುಗಿತ್ತು. 60-70 ಜನ ಭಾಗವಹಿಸಿದ್ದರು. ಯಾವುದೇ ಸಾಮಾಜಿಕ ಅಂತರ ನಿಯಮಗಳನ್ನು ಕಾಪಾಡಿಲ್ಲ ಎಂಬ ಅಪಸ್ವರ ಕೇಳಿಬಂದಿತ್ತು.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಸ್ಥಳಾಂತರಿಸಿದ್ದೇವೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದರು.

ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ. ಆಗ ಒಟ್ಟಿಗೆ ಕುಳಿತು ಊಟ ಮಾಡೋಣ ಎಂದು ಮದುವೆಯ ನಂತರ ಎಚ್‌ಡಿಕೆ ಟ್ವೀಟ್‌ ಮಾಡಿದ್ದರು.

ಆದರೆ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ರವರು ಮಾತ್ರ ಮದುವೆ ಆಕ್ಷೇಪ ವ್ಯಕ್ತಪಡಿಸಿದ್ದರು. “ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಅಶ್ವಥ್‌ ನಾರಾಯಣ್‌ ತಿಳಿಸಿದ್ದರು.

ಈ ಕುರಿತು ಬಹಳಷ್ಟು ಜನ ಎಚ್‌.ಡಿ ಕುಮಾರಸ್ವಾಮಿಯವರು ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ಮೇಲೆ ಯಾವಾಗ ಕ್ರಮ ತೆಗೆದುಕೊಳ್ಳುತ್ತೀರಿ ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು. ಮಾಧ್ಯಮಗಳ ಈ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪನವರು ಈ ವಿಷಯವನ್ನು ದೊಡ್ಡದು ಮಾಡಬೇಡಿ, ಅವರ ಕುಟುಂಬ ದೊಡ್ಡದಾಗಿದ್ದರೂ ಸಹ ಮಿತಿಯಲ್ಲಿಯೇ ಮದುವೆ ಮಾಡಿದ್ದರೆ. ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಯಾಕೆ ದೊಡ್ಡದು ಮಾಡಬಾರದು? ಬಡವರಿಗೊಂದು, ಶ್ರೀಮಂತರಿಗೆ ಮತ್ತೊಂದು, ಹೀಗೆ ಎರಡು ರೀತಿಯ ಕಾನೂನು ಜಾರಿಯಲ್ಲಿದೆಯಾ?

  2. ಸ್ವಿಮಿಂಗ್ ಪೂಲ್ ನಲ್ಲಿ ಮಜಾ ಮಾಡ್ತಿದ್ದ ಮಂತ್ರಿನ ಬಿಟ್ಟು ,ಮನೆನಲ್ಲಿ ಮಾಡಿದ ಮದುವೆ ಬಗ್ಗೆ ಮಾತನಾಡ್ತರಲ್ಲ ಜನ , ಛೇ

  3. ಈ ಫೋಟೋದಲ್ಲಿಯೇ 18 ಜನ ಕಾಣಿಸ್ತಾ ಇದಾರೆ. ಖಚಿತ ಮಾಹಿತಿ ಪ್ರಕಾರ 100-150 ಜನ ಸೇರಿದ್ದೂ, ಯಾವದೇ ಮಾಸ್ಕ ಅಥವಾ ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ದೇಶದ ಕಾನೂನನ್ನು ಉಲ್ಲಂಘಿಸಲಾಗಿದೆ. ರಾಜ್ಯ ಸರಕಾರ ಕ್ರಮಕೈಕೊಳ್ಳದಿದ್ದರೆ, ಕೇಂದ್ರ ಸರಕಾರ ವರದಿ ತರಿಸ್ಕೊಂಡು ವಿಮರ್ಶೆ ಮಾಡಬೇಕು. ಮಂದಿರ ಮಸ್ಜಿದ್ ಗಳಿಗೆ ಕಟ್ಟು ನಿಟ್ಟಿನಲ್ಲಿ ಕ್ರಮ ಕೈಕೊಡಾಗ ಇವರಿಗೆ ರಾಜಕೀಯ ರಕ್ಷಣೆ ಕೊಡುವದು ಎಷ್ಟು ಸರಿ.
    ಅಕಸ್ಮಾತ್ ಈ ಅರೆಅದಲ್ಲೂ ಸೋಂಕು ಅವರಿದ್ರೆ ಇದಕ್ಕೆ ಸರಕಾರವೇ ಹೊಣೆ.

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...