Homeಕರ್ನಾಟಕಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ಕನ್ನಡ ಭಾಷೆಯನ್ನು ಕೊಳಕು ಭಾಷೆ ಎಂದು ಅವಹೇಳನಾಕಾರಿ ವಿಷಯ ತೋರಿಸಿದ್ದ ವೆಬ್‌ಸೈಟ್ ಅನ್ನು ಗೂಗಲ್ ಈಗ ತೆಗೆದುಹಾಕಿ ವಿವಾದಕ್ಕೆ ತೆರೆ ಎಲೆಯಲು ಯತ್ನಿಸಿದೆ. ಆದರೆ ಕನ್ನಡದ ರಾಜಕಾರಣಿಗಳು, ಕನ್ನಡಪರ ಹೋರಾಟಗಾರರು, ಕನ್ನಡಿಗರು ಮಾತ್ರ ಮತ್ತೆ ಮತ್ತೆ ಗೂಗಲ್‌ ಅನ್ನು ಪ್ರಶ್ನಿಸುತ್ತಿದ್ದಾರೆ.

ಕನ್ನಡವೊಂದೇ ಅಲ್ಲ ಯಾವ ಭಾಷೆಯೂ ಕುರೂಪವಲ್ಲ, ಭಾಷೆ ವಿಚಾರದಲ್ಲಿ ಅಸೂಕ್ಷ್ಮತೆ ಸರಿಯಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಭಾಷೆ ವಿಚಾರದಲ್ಲಿ Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ..? ಎಂದು ಪ್ರಶ್ನಿಸಿದ್ದಾರೆ.

’ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್‌ಗೆ ಅಸಾಧ್ಯವೇ..? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

’ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರವೇನು..?’ ಎಂದು ಗೂಗಲ್‌ಗೆ ಟ್ಯಾಗ್ ಮಾಡಿದ್ದಾರೆ.

’ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ’ ಎಂದಿದ್ದಾರೆ.

ಜೊತೆಗೆ ಕುವೆಂಪು ಅವರ ’ಇದು ನಿನ್ನ ಭಾಷೆ, ಇದು ದೇಶಭಾಷೆ, ಇದು ಸಾವಿರಾರು ವರ್ಷಗಳ ಸುಪುಷ್ಟ ಸಾಹಿತ್ಯಭಾಷೆ, ಇದು ಮಹಾಕವಿಗಳನ್ನೂ ಶಿಲ್ಪಿಗಳನ್ನೂ ರಾಜಾಧಿರಾಜರನ್ನೂ ವೀರಾಧಿವೀರರನ್ನೂ ರಸಋಷಿದಾರ್ಶನಿಕರನ್ನೂ ಹಡೆದಿರುವ ಭಾಷೆ’ ಎಂಬ ಸಾಲುಗಳನ್ನು ಬರೆದು ಕನ್ನಡದ ಶ್ರೇಷ್ಠತೆ ತಿಳಿಸಿದ್ದಾರೆ.


ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...