Homeಕರ್ನಾಟಕಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ...

ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ- ಕುಮಾರಸ್ವಾಮಿ

"ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. 'ನಿಮ್ಮ ಕರ್ತ್ಯವ್ಯ ನೀವು ಮಾಡಿ.' ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ"

- Advertisement -
- Advertisement -

ಕೊರೊನಾ ಪರಿಸ್ಥಿತಿ ನಿರ್ವಹಣೆ ಮಾಡಲಾಗದೇ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಹೇಳಿದ್ದಾರೆ.

“ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ..? ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ…ಇವೆಲ್ಲಾ ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವ ಈಶ್ವರಪ್ಪ, ಬಿಜೆಪಿ ರಾಷ್ಟರೀಯ ಕಾರ್ಯದರ್ಶಿ ಸಿಟಿ ರವಿ, ಸಚಿವ ಡಿ.ವಿ.ಸದಾನಂದಗೌಡ ಕೊರೊನಾ ನಿರ್ವಹಣೆ ಕುರಿತು ವಿವಾದಿತ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದರು.

“‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,’ ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ..? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

“ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ” ಎಂದು ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ಕೊರೊನಾ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

“ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪ್ರಾದೇಶಿಕ ಪಕ್ಷಗಳ ಆಡಳಿತವಿರುವ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ” ಎಂದಿದ್ದಾರೆ.

“ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...