Homeಕರ್ನಾಟಕಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ...

ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ- ಕುಮಾರಸ್ವಾಮಿ

"ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. 'ನಿಮ್ಮ ಕರ್ತ್ಯವ್ಯ ನೀವು ಮಾಡಿ.' ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ"

- Advertisement -
- Advertisement -

ಕೊರೊನಾ ಪರಿಸ್ಥಿತಿ ನಿರ್ವಹಣೆ ಮಾಡಲಾಗದೇ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಹೇಳಿದ್ದಾರೆ.

“ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ..? ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ…ಇವೆಲ್ಲಾ ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವ ಈಶ್ವರಪ್ಪ, ಬಿಜೆಪಿ ರಾಷ್ಟರೀಯ ಕಾರ್ಯದರ್ಶಿ ಸಿಟಿ ರವಿ, ಸಚಿವ ಡಿ.ವಿ.ಸದಾನಂದಗೌಡ ಕೊರೊನಾ ನಿರ್ವಹಣೆ ಕುರಿತು ವಿವಾದಿತ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದರು.

“‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,’ ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ..? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

“ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ” ಎಂದು ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ಕೊರೊನಾ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

“ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪ್ರಾದೇಶಿಕ ಪಕ್ಷಗಳ ಆಡಳಿತವಿರುವ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ” ಎಂದಿದ್ದಾರೆ.

“ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...