Homeಕರ್ನಾಟಕಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ...

ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ- ಕುಮಾರಸ್ವಾಮಿ

"ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. 'ನಿಮ್ಮ ಕರ್ತ್ಯವ್ಯ ನೀವು ಮಾಡಿ.' ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ"

- Advertisement -
- Advertisement -

ಕೊರೊನಾ ಪರಿಸ್ಥಿತಿ ನಿರ್ವಹಣೆ ಮಾಡಲಾಗದೇ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ: ಜನರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಹೇಳಿದ್ದಾರೆ.

“ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ..? ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ…ಇವೆಲ್ಲಾ ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವ ಈಶ್ವರಪ್ಪ, ಬಿಜೆಪಿ ರಾಷ್ಟರೀಯ ಕಾರ್ಯದರ್ಶಿ ಸಿಟಿ ರವಿ, ಸಚಿವ ಡಿ.ವಿ.ಸದಾನಂದಗೌಡ ಕೊರೊನಾ ನಿರ್ವಹಣೆ ಕುರಿತು ವಿವಾದಿತ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದರು.

“‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,’ ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ..? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

“ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ” ಎಂದು ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ಕೊರೊನಾ ನಿರ್ವಹಣೆಯ ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

“ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪ್ರಾದೇಶಿಕ ಪಕ್ಷಗಳ ಆಡಳಿತವಿರುವ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ” ಎಂದಿದ್ದಾರೆ.

“ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಾಲದ ವಿಚಾರದಲ್ಲಿ ಸುಳ್ಳು ಹೇಳುವುದು ಬಿಟ್ಟು, ಬಡವರಿಗೆ ಆಹಾರ, ಪ್ಯಾಕೇಜ್ ಘೋಷಿಸಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...