Homeಕರ್ನಾಟಕಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

- Advertisement -
- Advertisement -

ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

“ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಇಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ  ತಲಾ 3 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು  ಮಂದಿಗೆ ಮಾತ್ರ ಕೊಟ್ಟು ಉಳಿದವರಿಗೆ ವಂಚಿಸಿದೆ” ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

’ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್‌ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

 

’ಕೊರೊನಾ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ  ಎಂಬುದು ಭ್ರಮೆ ಅಲ್ಲದೆ ಮತ್ತೇನು..?” ಎಂದು ಪ್ರಶ್ನಿಸಿದ್ದಾರೆ.

’ಕೊರೊನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆಗೆ ಮಾತ್ರ 50 ಲಕ್ಷ ರೂಪಾಯಿ ಪರಿಹಾರ ನೀಡಿದೆ.  ಉಳಿದ 15 ಮಂದಿಗೆ ಪರಿಹಾರ ಕೊಟ್ಟಿಲ್ಲ. ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೋವಿಡ್ 19  ನಿಯಂತ್ರಣ ಕೈ ಮೀರುತ್ತದೆ. ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ” ಎಂದು ರಾಜ್ಯ ಸರ್ಕಾರವನ್ನು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮ ಬೇಡಿಕೆಗಳನ್ನು ಈಡೇರಿಸಿ: ರೈತ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...