Homeಕರ್ನಾಟಕಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

- Advertisement -
- Advertisement -

ರಾಜ್ಯದ ಹಳೇ ಮೈಸೂರು ಭಾಗದ ವಿವಿದೆಡೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ಆರೋಪಿಸಿದೆ.

’ಕೆಆರ್‌ಎಸ್‌ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‌ಎಸ್‌ ನೀರುಣಿಸುತ್ತಿದೆ. ಕೆಆರ್‌ಎಸ್‌ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು’ ಎಂದು ಎಎಪಿ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಕ್ರೋಶ ಹೊರ ಹಾಕಿದ್ದಾರೆ.

‘ಕೆಆರ್‌ಎಸ್‌ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್‌ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತವಾಗಿವೆ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಎಂದರೆ ಬಿಜೆಪಿಗೆ ಹಬ್ಬ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

’ಅಕ್ರಮ ಕಲ್ಲು ಗಣಿಗಾರಿಕೆ ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ’ ಎಂದು ಜಗದೀಶ್ ವಿ.ಸದಂ ಆರೋಪಿಸಿದ್ದಾರೆ.

’ಬೆಂಗಳೂರು ಗ್ರಾಮಾಂತರ, ರಾಮನಗರ, ಚೆನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ’ ಎಂದು ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ಹೇಳಿದ್ದಾರೆ.

’ಈ ಹಿಂದೆ ಎಎಪಿಯ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್‌ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...