Homeಕರ್ನಾಟಕನಮ್ಮ ಪೂಜೆಯ ಎದುರು ಇವರ 'ರಾಮ ಜಪ' ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ:...

ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ: HDK ಕಿಡಿ

ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ- HDK

- Advertisement -
- Advertisement -

“ನಾವು ಮಾಡಿರುವ ಪೂಜೆಗಳ ಕಾಲು ಭಾಗದಷ್ಟೂ ಇವರು ಮಾಡಿಲ್ಲ; ಇವರದು ಧಾರ್ಮಿಕ ಭ್ರಷ್ಟಾಚಾರ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದು, ತಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿರುವವರಿಗೆ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಇದರ ವಿರುದ್ಧ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದಂತೆ ಅನೇಕರು ಟೀಕೆ ಮಾಡಿದ್ದರು.

ಈಗ ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು, ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು. ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ. ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!” ಎಂದು ತಮ್ಮ ಕುಟುಂಬದ ದೈವಿಕ ಭಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ ‘ಅಧಿಕಾರ ರಾಮ ಜಪ’ ಕಾಲು ಭಾಗಕ್ಕೂ ಸಾಲದು. ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ. ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ. ಅದರ ಫಲವನ್ನೂ ಉಣ್ಣಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ! ಒಬ್ಬರು ಹೇಳಿದ್ದಾರೆ, ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ, ಅಧಿಕಾರ, ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ, ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು. ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ ಎಂದು ಪೇಜಾವರ ಶ್ರೀಗಳ ಹೆಸರು ಹೇಳದೇ ತಿರುಗೇಟು ನೀಡಿದ್ದಾರೆ.

ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶಿರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ ಎಂದು ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ. ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ, ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ, ರಾಮಮಂದಿರ ಹಿಂದೂಗಳ ಭಕ್ತಿ, ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...