Homeಕರ್ನಾಟಕನಮ್ಮ ಪೂಜೆಯ ಎದುರು ಇವರ 'ರಾಮ ಜಪ' ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ:...

ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ ಭ್ರಷ್ಟಾಚಾರ: HDK ಕಿಡಿ

ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ- HDK

- Advertisement -
- Advertisement -

“ನಾವು ಮಾಡಿರುವ ಪೂಜೆಗಳ ಕಾಲು ಭಾಗದಷ್ಟೂ ಇವರು ಮಾಡಿಲ್ಲ; ಇವರದು ಧಾರ್ಮಿಕ ಭ್ರಷ್ಟಾಚಾರ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದು, ತಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿರುವವರಿಗೆ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಯನ್ನು ಗುರುತು ಮಾಡಿಕೊಳ್ಳಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಇದರ ವಿರುದ್ಧ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದಂತೆ ಅನೇಕರು ಟೀಕೆ ಮಾಡಿದ್ದರು.

ಈಗ ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, “ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು, ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು. ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ. ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!” ಎಂದು ತಮ್ಮ ಕುಟುಂಬದ ದೈವಿಕ ಭಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ದಿಶಾ ರವಿ ಬಂಧನ ಖಂಡಿಸಿದ ‘ಭಾರತದ ಗ್ರೇಟಾ ಥನ್‌ಬರ್ಗ್’ ರಿಧಿಮಾ ಪಾಂಡೆ

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ ‘ಅಧಿಕಾರ ರಾಮ ಜಪ’ ಕಾಲು ಭಾಗಕ್ಕೂ ಸಾಲದು. ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ. ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ. ಅದರ ಫಲವನ್ನೂ ಉಣ್ಣಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ! ಒಬ್ಬರು ಹೇಳಿದ್ದಾರೆ, ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ದೇಣಿಗೆ ನೀಡಲಿ ಎಂದು. ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ. ನಮ್ಮೆಲ್ಲರ ಭಕ್ತಿ, ಭಾವನೆಗಳನ್ನು ಹಣವಾಗಿ, ಅಧಿಕಾರವಾಗಿ ಪರಿವರ್ತಿಸುವ ನಿಮ್ಮ ನಡವಳಿಕೆ ತಿದ್ದಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

ನನ್ನ ಹೇಳಿಕೆಯಲ್ಲಿ ಬೇಜವಾಬ್ದಾರಿ ಗುರುತಿಸಿರುವ ಧಾರ್ಮಿಕ ಮುಖಂಡರೊಬ್ಬರು ಮೊದಲು ತಮ್ಮ ಜವಾಬ್ದಾರಿ ಅರಿಯಬೇಕು. ರಾಮನ ಭಕ್ತಿಯು ಹಣ, ಅಧಿಕಾರ, ರಾಜಕಾರಣವಾಗಿ ಪರಿವರ್ತನೆಯಾಗುವುದನ್ನು ಅವರು ತಡೆದಿದ್ದರೆ, ಅದು ಅವರ ಜವಾಬ್ದಾರಿಯ ಸಮರ್ಥ ನಿರ್ವಹಣೆ ಆಗಿರುತ್ತಿತ್ತು. ಅದು ಬಿಟ್ಟು ರಾಜಕೀಯದ ಹೇಳಿಕೆ ನೀಡುವುದು ಧಾರ್ಮಿಕ ನಾಯಕರಿಗೆ ಶೋಭೆಯಲ್ಲ ಎಂದು ಪೇಜಾವರ ಶ್ರೀಗಳ ಹೆಸರು ಹೇಳದೇ ತಿರುಗೇಟು ನೀಡಿದ್ದಾರೆ.

ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶಿರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ ಎಂದು ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ. ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ, ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ, ರಾಮಮಂದಿರ ಹಿಂದೂಗಳ ಭಕ್ತಿ, ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...