Homeಕರ್ನಾಟಕಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 19 ರ ವರೆಗೆ 10 ದಿನಗಳ ನೀರಿಗಾಗಿ ನಡಿಗೆ ಅಭಿಯಾನದ ಪಾದಯಾತ್ರೆ ಹಮ್ಮಿಕೊಂಡಿದೆ. ಇದು ಪಕ್ಷಾತೀತವಾದ ಕಾರ್ಯಕ್ರಮ ಎಂದಿರುವ ಕಾಂಗ್ರೆಸ್‌, ಟೀಕೆ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿತ್ತು. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಜನರಿಗೆ ’ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದೆ ಎಂದಿದ್ದಾರೆ.

’ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ’ ಎಂದು ತಮ್ಮ ಸರಣಿ ಟ್ವಿಟ್‌ಗಳಲ್ಲಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ್ದಾರೆ.

’ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಎಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

’ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ; ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ. ಸತ್ಯ ಸತ್ಯವೇ. ದೇವೇಗೌಡರು ಅಂತಹ ‘ಸತ್ಯದ ಸಾಕ್ಷಿ’. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ. ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ’ ಎಂದು ಟೀಕಿಸಿದ್ದಾರೆ.

’ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು. ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು..?’ ಎಂದು ಪ್ರಶ್ನಿಸಿದ್ದಾರೆ.

’ಕಾಂಗ್ರೆಸ್’ನ 5 ವರ್ಷದ ಸರಕಾರವೇ ಇತ್ತು. ʼಸಿದ್ದಹಸ್ತರೇʼ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ?. ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ’ ಎಂದಿದ್ದಾರೆ.

’ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ. ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ’ ಎಂದು ಟೀಕಿಸಿದ್ದಾರೆ.

’ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ. ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ವಿದ್ಯಾರ್ಥಿಗಳ ಆತ್ಮಹತ್ಯೆ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...