Homeಕರ್ನಾಟಕಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 19 ರ ವರೆಗೆ 10 ದಿನಗಳ ನೀರಿಗಾಗಿ ನಡಿಗೆ ಅಭಿಯಾನದ ಪಾದಯಾತ್ರೆ ಹಮ್ಮಿಕೊಂಡಿದೆ. ಇದು ಪಕ್ಷಾತೀತವಾದ ಕಾರ್ಯಕ್ರಮ ಎಂದಿರುವ ಕಾಂಗ್ರೆಸ್‌, ಟೀಕೆ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿತ್ತು. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಜನರಿಗೆ ’ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದೆ ಎಂದಿದ್ದಾರೆ.

’ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ’ ಎಂದು ತಮ್ಮ ಸರಣಿ ಟ್ವಿಟ್‌ಗಳಲ್ಲಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ್ದಾರೆ.

’ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಎಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

’ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ; ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ. ಸತ್ಯ ಸತ್ಯವೇ. ದೇವೇಗೌಡರು ಅಂತಹ ‘ಸತ್ಯದ ಸಾಕ್ಷಿ’. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ. ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ’ ಎಂದು ಟೀಕಿಸಿದ್ದಾರೆ.

’ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು. ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು..?’ ಎಂದು ಪ್ರಶ್ನಿಸಿದ್ದಾರೆ.

’ಕಾಂಗ್ರೆಸ್’ನ 5 ವರ್ಷದ ಸರಕಾರವೇ ಇತ್ತು. ʼಸಿದ್ದಹಸ್ತರೇʼ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ?. ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ’ ಎಂದಿದ್ದಾರೆ.

’ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ. ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ’ ಎಂದು ಟೀಕಿಸಿದ್ದಾರೆ.

’ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ. ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ವಿದ್ಯಾರ್ಥಿಗಳ ಆತ್ಮಹತ್ಯೆ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...