Homeಕರ್ನಾಟಕಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಮೇಕೆದಾಟು: ಕಾಂಗ್ರೆಸ್ ವಿರುದ್ಧ ’ಮಕ್ಮಲ್ ಟೋಪಿ’ ಆರೋಪ ಮಾಡಿದ ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಮೇಕೆದಾಟು ಯೋಜನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 19 ರ ವರೆಗೆ 10 ದಿನಗಳ ನೀರಿಗಾಗಿ ನಡಿಗೆ ಅಭಿಯಾನದ ಪಾದಯಾತ್ರೆ ಹಮ್ಮಿಕೊಂಡಿದೆ. ಇದು ಪಕ್ಷಾತೀತವಾದ ಕಾರ್ಯಕ್ರಮ ಎಂದಿರುವ ಕಾಂಗ್ರೆಸ್‌, ಟೀಕೆ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿತ್ತು. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಜನರಿಗೆ ’ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದೆ ಎಂದಿದ್ದಾರೆ.

’ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ’ ಎಂದು ತಮ್ಮ ಸರಣಿ ಟ್ವಿಟ್‌ಗಳಲ್ಲಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ್ದಾರೆ.

’ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಎಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ 10 ದಿನ ಕಾಂಗ್ರೆಸ್‌ನಿಂದ ಪಾದಯಾತ್ರೆ

’ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ; ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ. ಸತ್ಯ ಸತ್ಯವೇ. ದೇವೇಗೌಡರು ಅಂತಹ ‘ಸತ್ಯದ ಸಾಕ್ಷಿ’. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ. ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ’ ಎಂದು ಟೀಕಿಸಿದ್ದಾರೆ.

’ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು. ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು..?’ ಎಂದು ಪ್ರಶ್ನಿಸಿದ್ದಾರೆ.

’ಕಾಂಗ್ರೆಸ್’ನ 5 ವರ್ಷದ ಸರಕಾರವೇ ಇತ್ತು. ʼಸಿದ್ದಹಸ್ತರೇʼ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ?. ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ’ ಎಂದಿದ್ದಾರೆ.

’ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ. ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ’ ಎಂದು ಟೀಕಿಸಿದ್ದಾರೆ.

’ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ. ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ವಿದ್ಯಾರ್ಥಿಗಳ ಆತ್ಮಹತ್ಯೆ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿ: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...