Homeಕರ್ನಾಟಕಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ'

- Advertisement -
- Advertisement -

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಎಂಬ ಪದ ಬಳಸದೆ ಇಂದಿನಿಂದ ಕಠಿಣ ಲಾಕ್‌ಡೌನ್ ಘೋಷಿಸಿದೆ. ಜನ ಸಾಮನ್ಯರಿಗೆ ಪರಿಹಾರ ನೀಡುವ ಬದಲು ರಸ್ತೆಗೆ ಇಳಿಯುವ ಜನರ ಮೇಲೆ ದರ್ಪ ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಲಾಕ್‌ಡೌನ್ ಅಲ್ಲದ ಕಠಿಣ ಲಾಕ್‌ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್‌ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್‌ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್‌ಡೌನ್ ಆಗಿತ್ತು’ ಎಂದಿದ್ದಾರೆ.

’ಲಾಕ್‌ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್‌ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್‌ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಲಾಕ್‌ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ತಮಿಳು ನಾಡಿನಲ್ಲಿ ಕೋಮು ರಾಜಕೀಯಕ್ಕೆ ಸ್ಥಾನವಿಲ್ಲ!: ಸಸಿಕಾಂತ್ ಸೆಂಥಿಲ್

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು,  ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...