Homeಕರ್ನಾಟಕಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ'

- Advertisement -
- Advertisement -

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಎಂಬ ಪದ ಬಳಸದೆ ಇಂದಿನಿಂದ ಕಠಿಣ ಲಾಕ್‌ಡೌನ್ ಘೋಷಿಸಿದೆ. ಜನ ಸಾಮನ್ಯರಿಗೆ ಪರಿಹಾರ ನೀಡುವ ಬದಲು ರಸ್ತೆಗೆ ಇಳಿಯುವ ಜನರ ಮೇಲೆ ದರ್ಪ ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಲಾಕ್‌ಡೌನ್ ಅಲ್ಲದ ಕಠಿಣ ಲಾಕ್‌ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್‌ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್‌ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್‌ಡೌನ್ ಆಗಿತ್ತು’ ಎಂದಿದ್ದಾರೆ.

’ಲಾಕ್‌ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್‌ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್‌ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಲಾಕ್‌ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ತಮಿಳು ನಾಡಿನಲ್ಲಿ ಕೋಮು ರಾಜಕೀಯಕ್ಕೆ ಸ್ಥಾನವಿಲ್ಲ!: ಸಸಿಕಾಂತ್ ಸೆಂಥಿಲ್

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು,  ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...