Homeಕರ್ನಾಟಕಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ'

- Advertisement -
- Advertisement -

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಎಂಬ ಪದ ಬಳಸದೆ ಇಂದಿನಿಂದ ಕಠಿಣ ಲಾಕ್‌ಡೌನ್ ಘೋಷಿಸಿದೆ. ಜನ ಸಾಮನ್ಯರಿಗೆ ಪರಿಹಾರ ನೀಡುವ ಬದಲು ರಸ್ತೆಗೆ ಇಳಿಯುವ ಜನರ ಮೇಲೆ ದರ್ಪ ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಲಾಕ್‌ಡೌನ್ ಅಲ್ಲದ ಕಠಿಣ ಲಾಕ್‌ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್‌ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್‌ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್‌ಡೌನ್ ಆಗಿತ್ತು’ ಎಂದಿದ್ದಾರೆ.

’ಲಾಕ್‌ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್‌ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್‌ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಲಾಕ್‌ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ತಮಿಳು ನಾಡಿನಲ್ಲಿ ಕೋಮು ರಾಜಕೀಯಕ್ಕೆ ಸ್ಥಾನವಿಲ್ಲ!: ಸಸಿಕಾಂತ್ ಸೆಂಥಿಲ್

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು,  ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...