Homeಕರ್ನಾಟಕಹಿಜಾಬ್ ವಿಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರ ಅಡಗಿದೆ: ಎಚ್.ಡಿ.ಕುಮಾರಸ್ವಾಮಿ

ಹಿಜಾಬ್ ವಿಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರ ಅಡಗಿದೆ: ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

“ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಅಡಗಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಸಣ್ಣ ಪ್ರಮಾಣದಲ್ಲಿದ್ದ ಹಿಜಾಬ್ ವಿವಾದವನ್ನು ದೊಡ್ಡದು ಮಾಡಿದ್ದಾರೆ. ಇದರಲ್ಲಿ ಎಲ್ಲಾ ಸಮಾಜದ ಸಂಘಟನೆಗಳ ಪಾತ್ರವೂ ಇದೆ. ಇದು ವ್ಯವಸ್ಥಿತವಾಗಿ ಶುರುವಾಗಿದ್ದು, ಇದರ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಇದೆ. ಅದಕ್ಕೆ ಈ ವಿಷಯವನ್ನು ದೇಶವ್ಯಾಪಿ ಹರಡುವಂತೆ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಜನ ಇಂಥ ಭಾವನಾತ್ಮಕ ವಿಷಯಗಳಿಗೆ ಬಲಿಯಾಗಬಾರದು. ನಮಗೆಲ್ಲರಿಗೂ ಬೇಕಿರುವುದು ಬದುಕು ಮಾತ್ರ. ಬದುಕು ಕಟ್ಟುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಸಮಾಜವನ್ನು ಹಾಳು ಮಾಡುವ ಕೆಲಸ ಆಗಬಾರದು” ಎಂದಿದ್ದಾರೆ.

’ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು? ಇದರ ಹಿಂದಿನ ದುರುದ್ದೇಶವೇನು? ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ? ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಆದರೆ, ಅದನ್ನು ಅಲ್ಲಿಗೇ ಬಿಡುವುದು ಕೆಲವರಿಗೆ ಬೇಕಿರಲಿಲ್ಲ’ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

’ಈ ವಿವಾದ ದೊಡ್ಡ ಮಟ್ಟದಲ್ಲಿ ಹರಡಿದರೆ ಇದರ ಮೆಲೆ ಭಾವನಾತ್ಮಕ ವಿಚಾರ ಇಟ್ಟು ಮತಗಳನ್ನಾಗಿ ಪರಿವರ್ತನೆ ಮಾಡಬಹುದು ಎನ್ನುವ ದುರಾಲೋಚನೆ ಇದರ ಹಿಂದೆ ಅಡಗಿದೆ. ಅದಕ್ಕಾಗಿ ಎಲ್ಲಾ ದುಷ್ಟ ಪ್ರಯತ್ನಗಳು ನಡೆಯುತ್ತಿವೆ. ಆದರೆ ಯಾವ ಕ್ಷಣದಲ್ಲಿ ಇದು ಯಾರಿಗೆ ತಿರುಗುಬಾಣ ಆಗುತ್ತದೆ ಎನ್ನುವುದನ್ನು ನೋಡೋಣ’ ಎಂದಿದ್ದಾರೆ.

ಮುಂದುವರಿದು, ’ಪೋಷಕರು ತಮ್ಮ ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವ ಯಾವುದೇ ಸಂಘಟನೆಗಳು, ಜನರಿಂದ ಎಚ್ಚರಿಕೆ ವಹಿಸಬೇಕು. ಮಕ್ಕಳನ್ನು ದಾರಿ ತಪ್ಪಿಸುವವರು, ಭವಿಷ್ಯ ಹಾಳು ಮಾಡುತ್ತಿರುವವರ ಬಗ್ಗೆ ಮಕ್ಕಳಿಗೆ ಬುದ್ದಿ ಹೇಳಬೇಕು’ ಎಂದು ಸಲಹೆ ನೀಡಿದ್ದಾರೆ.

’ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಮೊಟಕುಗೊಳಿಸಬಹುದಿತ್ತು. ಯಾರೂ ಅಭಿವೃದ್ಧಿ ವಿಚಾರಗಳನ್ನು ಚರ್ಚೆ ಮಾಡದೇ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಸರ್ಕಾರಗಳು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ’ ಎಂದು ಟೀಕಿಸಿದ್ದಾರೆ.

ಕರ್ನಾಟಕ ಹೈಕೋಟ್‌‌ನ ಪೂರ್ಣ ಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಮುಂದುವರೆಯಸುತ್ತಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠದ ಮುಂದೆ ವಿದ್ಯಾರ್ಥಿಗಳನ್ನು ಪ್ರತಿನಿಧಿಸಿ ಹಿರಿಯ ವಕೀಲ ವಾದ ಮಂಡಿಸುತ್ತಿದ್ದಾರೆ.


ಇದನ್ನೂ ಓದಿ: ಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಇಲ್ಲ ಪ್ರವೇಶ: ಗೇಟ್‌ ಬಳಿಯೇ ಹಿಜಾಬ್, ಬುರ್ಕಾ ತೆಗೆದ ಶಿಕ್ಷಕಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...