Homeಕರ್ನಾಟಕರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

ಎಲ್ಲಿಯೂ ನೇರವಾಗಿ ಮಾತನಾಡದ ಕುಮಾರಸ್ವಾಮಿಯವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.

- Advertisement -
- Advertisement -

ಎಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಜೆಡಿಎಸ್‌ಗಿಂತ ಬಿಜೆಪಿ ಮುಖಂಡರೇ ಹೆಚ್ಚಿನ ಸಂಖ್ಯೆಯಲ್ಲಿ ಟ್ವೀಟ್ ಮಾಡಿ ಶುಭ ಹಾರೈಸಿದ್ದರು. ಖುದ್ದು ನರೇಂದ್ರ ಮೋದಿಯೇ ಟ್ವೀಟ್ ಮಾಡಿದ್ದರು. ನಂತರ ಜೆಡಿಎಸ್‌ ಪಕ್ಷ ಬಿಜೆಪಿಯಲ್ಲಿ ವಿಲೀನಗೊಳ್ಳುತ್ತದೆ ಎಂಬ ವದಂತಿಗಳು ಹರಡಿದ್ದವು. ಆದರೆ ಅದೆಲ್ಲವನ್ನು ನಯವಾಗಿ ನಿರಾಕರಿಸಿದ್ದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಬಹಿರಂಗವಾಗಿ ನರೇಂದ್ರ ಮೋದಿ ಪರ ಬ್ಯಾಟ್ ಬೀಸಲು ಅಖಾಡಕ್ಕಿಳಿದಿದ್ದಾರೆ.

ಇಂದು ಟ್ವೀಟ್‌ ಮಾಡಿರುವ ಕುಮಾರಸ್ವಾಮಿಯವರು, “ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ” ಎಂದು ಹೇಳುವ ಮೂಲಕ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದ ಎಚ್‌.ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷ ನಂತರ ನಿಧಾನವಾಗಿ ಅದರಿಂದ ಹಿಂದೆ ಸರಿದಿತ್ತು. ಅಲ್ಲದೆ ಭೂಸುಧಾರಣಾ ತಿದ್ದುಪಡಿಗೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪರವಾಗಿ ಮತ ಹಾಕಿ ಟೀಕೆಗೆ ಒಳಗಾಗಿತ್ತು. ಈಗ ಸರಣಿ ಟ್ವೀಟ್‌ಗಳಲ್ಲಿ ಕುಮಾರಸ್ವಾಮಿಯವರು ನಯವಾಗಿ ಮೋದಿ ಪರ ನಿಲುವು ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ, ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಮುಂದುವರೆದು ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಎಚ್‌.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಎಲ್ಲಿಯೂ ನೇರವಾಗಿ ಮಾತನಾಡದ ಅವರು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಟ್ವೀಟ್‌ ಮಾಡಿದ್ದರೂ ಸಹ ಅವರು ಸ್ಪಷ್ಟವಾಗಿ ಮೋದಿ ಪರ ಇದ್ದಾರೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕುಮಾರಸ್ವಾಮಿಯವರ ಈ ನಡೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಈ ಅಭಿಪ್ರಾಯ ಅತ್ಯಂತ ದುರದೃಷ್ಟಕರ. ಈ ಕಾಯಿದೆ ಪರವಾದ ವಕಾಲತ್ತು ರೈತರ ಹಿತಕ್ಕಿಂತ ನಿಮ್ಮ ರಾಜಕೀಯ ಹಿತಾಸಕ್ತಿಯೇ ಮುಖ್ಯ ಎನ್ನುವದನ್ನು ಸಾಬೀತುಪಡಿಸಿದಿರಿ! ನಿಮ್ಮ ಪಕ್ಷದ ಚಿಹ್ನೆಯನ್ನು ಹೊರೆಹೊತ್ತ ರೈತ ಮಹಿಳೆಯಿಂದ ಕಮಲ ಹೊತ್ತ ಅದಾನಿ ಮಾಡಿ! ರಾಜಕೀಯವಾಗಿ ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಯಶವಂತ್ ಪಿ.ಎನ್‌ರವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...