Homeಕರ್ನಾಟಕಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

’ಈ ಅನಾಹುತಕ್ಕೆ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ, ದೆಹಲಿಯವರೆಗೂ ತಲುಪಿ ಈಗ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಆಗಮಿಸಿದ್ದಾರೆ. ಆದರೂ ರಾಜ್ಯ ಬಿಜೆಪಿಯಲ್ಲಿ ಪರ-ವಿರೋಧ ಹೇಳಿಕೆಗಳು ಬರುತ್ತಲೇ ಇವೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ಅಧಿಕಾರ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

“ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು” ಎಂದು ಟ್ವೀಟ್ ಮಾಡಿದ್ದಾರೆ.

’ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

’ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ..? ಎಂದು ಪ್ರಶ್ನಿಸಿದ್ದಾರೆ.

’ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

’ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು’ ಎಂದು ಕಿಡಿಕಾರಿದ್ದಾರೆ.

‘ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು..? ಇದೇ ಕಾಂಗ್ರೆಸ್ ಅಲ್ಲವೇ..? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು’ ಎಂದು ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ.

’ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ..? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’ ಎಂದಿದ್ದಾರೆ.

ಇದರ ಜೊತೆಗೆ “ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ” ಎಂಬ ಬಸವಣ್ಣನವರ ವಚನವನ್ನು ಪೋಸ್ಟ್‌ ಮಾಡಿ, ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ’ ಎಂದು ಎಚ್.ಡಿ.ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...