Homeಕರ್ನಾಟಕಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

’ಈ ಅನಾಹುತಕ್ಕೆ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ, ದೆಹಲಿಯವರೆಗೂ ತಲುಪಿ ಈಗ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಆಗಮಿಸಿದ್ದಾರೆ. ಆದರೂ ರಾಜ್ಯ ಬಿಜೆಪಿಯಲ್ಲಿ ಪರ-ವಿರೋಧ ಹೇಳಿಕೆಗಳು ಬರುತ್ತಲೇ ಇವೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ಅಧಿಕಾರ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

“ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು” ಎಂದು ಟ್ವೀಟ್ ಮಾಡಿದ್ದಾರೆ.

’ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

’ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ..? ಎಂದು ಪ್ರಶ್ನಿಸಿದ್ದಾರೆ.

’ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

’ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು’ ಎಂದು ಕಿಡಿಕಾರಿದ್ದಾರೆ.

‘ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು..? ಇದೇ ಕಾಂಗ್ರೆಸ್ ಅಲ್ಲವೇ..? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು’ ಎಂದು ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ.

’ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ..? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’ ಎಂದಿದ್ದಾರೆ.

ಇದರ ಜೊತೆಗೆ “ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ” ಎಂಬ ಬಸವಣ್ಣನವರ ವಚನವನ್ನು ಪೋಸ್ಟ್‌ ಮಾಡಿ, ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ’ ಎಂದು ಎಚ್.ಡಿ.ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...