Homeಕರ್ನಾಟಕಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಬಿಜೆಪಿಯ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

’ಈ ಅನಾಹುತಕ್ಕೆ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’- ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ, ದೆಹಲಿಯವರೆಗೂ ತಲುಪಿ ಈಗ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಆಗಮಿಸಿದ್ದಾರೆ. ಆದರೂ ರಾಜ್ಯ ಬಿಜೆಪಿಯಲ್ಲಿ ಪರ-ವಿರೋಧ ಹೇಳಿಕೆಗಳು ಬರುತ್ತಲೇ ಇವೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ಅಧಿಕಾರ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

“ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು” ಎಂದು ಟ್ವೀಟ್ ಮಾಡಿದ್ದಾರೆ.

’ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಿಜೆಪಿಯಲ್ಲಿ ಭಿನ್ನಮತವಿಲ್ಲ; ಅರುಣ್ ಸಿಂಗ್

’ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ..? ಎಂದು ಪ್ರಶ್ನಿಸಿದ್ದಾರೆ.

’ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

’ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು’ ಎಂದು ಕಿಡಿಕಾರಿದ್ದಾರೆ.

‘ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು..? ಇದೇ ಕಾಂಗ್ರೆಸ್ ಅಲ್ಲವೇ..? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು’ ಎಂದು ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ.

’ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ..? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು’ ಎಂದಿದ್ದಾರೆ.

ಇದರ ಜೊತೆಗೆ “ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ” ಎಂಬ ಬಸವಣ್ಣನವರ ವಚನವನ್ನು ಪೋಸ್ಟ್‌ ಮಾಡಿ, ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ’ ಎಂದು ಎಚ್.ಡಿ.ಕುಮಾರಸ್ವಾಮಿ ಸಂಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬೇರೊಬ್ಬರು ಸಿಎಂ ಆಗಲಿ: ಎಚ್.ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...