Homeಕರ್ನಾಟಕದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು - ಎಚ್.ಡಿ.ಕುಮಾರಸ್ವಾಮಿ

ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..?’

- Advertisement -
- Advertisement -

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ವಾ ನಾಗ್ ನಡುವಿನ ಸಂಘರ್ಷ ಬೀದಿಗೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿನ ವಿದ್ಯಮಾನಗಳ ಬಗ್ಗೆ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ’ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ’ ಎಂದಿದ್ದಾರೆ.

’ಈ ಇಬ್ಬರು ಐಎಎಸ್ ಅಧಿಕಾರಿಗಳು ಇಷ್ಟೊಂದು ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತ ಸರಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರೂ, ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದಾರೆ..?’ ಎಂದು ಪ್ರಶ್ನಿಸಿದ್ದಾರೆ.

’ಮಹಿಳಾ ಅಧಿಕಾರಿಗಳ ಜಗಳದಲ್ಲಿ ಜನಪ್ರತಿನಿಧಿಗಳು ಪರ ವಿರೋಧದ ಹೇಳಿಕೆಗಳನ್ನು ನೀಡಿ ತಮ್ಮ ಬಾಯಿ ಚಪಲ ತೀರಿಸಿ ಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿದೆ. ಹೀಗೆ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಪರಸ್ಪರ ಕಿತ್ತಾಡಿಕೊಂಡರೆ ಬೇರೆ ಬೇರೆ ಇಲಾಖೆಯಲ್ಲಿರುವವರು ನಾಳೆ ಇದೇ “ಹಾದಿ” ತುಳಿದರೆ ರಾಜ್ಯದ ಪರಿಸ್ಥಿತಿ ಏನಾಗಬಾರದು..?’ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

’ಕೂಡಲೇ ಸರಕಾರ ಇಬ್ಬರೂ ಅಧಿಕಾರಿಗಳ ಬಾಯಿಗೆ ಬೀಗ ಹಾಕುವಂತಹ ಧೈರ್ಯವನ್ನಾದರೂ ತೋರಲಿ. ಇಲ್ಲದಿದ್ದರೆ, ನಾಳೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಮರ್ಯಾದೆ ಹರಾಜಾದರೆ ಅದಕ್ಕೆ ಈಗಿನ ಸರಕಾರವೇ ಕಾರಣವಾಗಲಿದೆ. ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿಯ ಜೀವ ಬಲಿ ಪಡೆಯಲಾಯಿತು. ಅಂತಹದೇ ಪರಿಸ್ಥಿತಿ ಮೈಸೂರಿನಲ್ಲೂ ನಿರ್ಮಾಣವಾಗಿದೆ. ಅಮಾಯಕರನ್ನು ಬಲಿ ಪಡೆಯುವ ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

’ಮೈಸೂರಿನಲ್ಲಿ ಅಧಿಕಾರಿಗಳಿಬ್ಬರ ನಡುವಣ ಸಂಘರ್ಷ ಐದಾರು ತಿಂಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿ ಅಥವಾ ಸರ್ಕಾರದ ದೌರ್ಬಲ್ಯದ ಕಾರಣದಿಂದಲೇ ಅಧಿಕಾರಿಗಳು ಸೂಪರ್‌ ಮ್ಯಾನ್‌ಗಳಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳ ಜಟಾಪಟಿಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದಂತಿದೆ. ಮೂಡ ಕಮಿಷನರ್  12 ಕೋಟಿ ರೂಪಾಯಿಗಿಂತ  ಸಿಎಸ್‌ಆರ್‌ಎಫ್ ಹೆಚ್ಚು ಹಣದ ಲೆಕ್ಕ ಕೊಟ್ಟಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಆರೋಪಿಸಿದರೆ, 42 ಕೋಟಿ ರೂಪಾಯಿ ಮಿಗಿಲಾದ ಹಣದ ದುರ್ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಸಂಸದ ಅಬ್ಬರಿಸುತ್ತಾರೆ’ ಎಂದು ಮೈಸೂರಿನಲ್ಲಿ ನಡೆಯುತ್ತಿರುವ ಆರೋಪ – ಪ್ರತ್ಯಾರೋಪದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ದ ಮಾತನಾಡಿದ್ದಕ್ಕೆ ದಾಖಲಿಸಿದ್ದ ದೇಶದ್ರೋಹ ಪ್ರಕರಣ ಸುಪ್ರೀಂನಿಂದ ರದ್ದು

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‎’ಇದು ಮುಖ್ಯಮಂತ್ರಿಯ ದೌರ್ಬಲ್ಯವೋ..? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ..? ಯಾರನ್ನು ಓಲೈಸಲು ಅಥವಾ ದೌರ್ಬಲ್ಯ ಮುಚ್ಚಿಕೊಳ್ಳಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ..? ಸರ್ಕಾರಕ್ಕೇನಾದರೂ ಕಿಂಚಿತ್ತು ಮಾನ ಮರ್ಯಾದೆ ಇದೆಯೇ..?’ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

‘ಪ್ರಜಾಪ್ರಭುತ್ವದ ಮೂರು ಮಂಗಗಳು’ ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ  ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ’ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...