Homeಕರ್ನಾಟಕದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು - ಎಚ್.ಡಿ.ಕುಮಾರಸ್ವಾಮಿ

ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..?’

- Advertisement -
- Advertisement -

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ವಾ ನಾಗ್ ನಡುವಿನ ಸಂಘರ್ಷ ಬೀದಿಗೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿನ ವಿದ್ಯಮಾನಗಳ ಬಗ್ಗೆ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ’ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ’ ಎಂದಿದ್ದಾರೆ.

’ಈ ಇಬ್ಬರು ಐಎಎಸ್ ಅಧಿಕಾರಿಗಳು ಇಷ್ಟೊಂದು ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತ ಸರಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರೂ, ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದಾರೆ..?’ ಎಂದು ಪ್ರಶ್ನಿಸಿದ್ದಾರೆ.

’ಮಹಿಳಾ ಅಧಿಕಾರಿಗಳ ಜಗಳದಲ್ಲಿ ಜನಪ್ರತಿನಿಧಿಗಳು ಪರ ವಿರೋಧದ ಹೇಳಿಕೆಗಳನ್ನು ನೀಡಿ ತಮ್ಮ ಬಾಯಿ ಚಪಲ ತೀರಿಸಿ ಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿದೆ. ಹೀಗೆ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಪರಸ್ಪರ ಕಿತ್ತಾಡಿಕೊಂಡರೆ ಬೇರೆ ಬೇರೆ ಇಲಾಖೆಯಲ್ಲಿರುವವರು ನಾಳೆ ಇದೇ “ಹಾದಿ” ತುಳಿದರೆ ರಾಜ್ಯದ ಪರಿಸ್ಥಿತಿ ಏನಾಗಬಾರದು..?’ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

’ಕೂಡಲೇ ಸರಕಾರ ಇಬ್ಬರೂ ಅಧಿಕಾರಿಗಳ ಬಾಯಿಗೆ ಬೀಗ ಹಾಕುವಂತಹ ಧೈರ್ಯವನ್ನಾದರೂ ತೋರಲಿ. ಇಲ್ಲದಿದ್ದರೆ, ನಾಳೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಮರ್ಯಾದೆ ಹರಾಜಾದರೆ ಅದಕ್ಕೆ ಈಗಿನ ಸರಕಾರವೇ ಕಾರಣವಾಗಲಿದೆ. ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿಯ ಜೀವ ಬಲಿ ಪಡೆಯಲಾಯಿತು. ಅಂತಹದೇ ಪರಿಸ್ಥಿತಿ ಮೈಸೂರಿನಲ್ಲೂ ನಿರ್ಮಾಣವಾಗಿದೆ. ಅಮಾಯಕರನ್ನು ಬಲಿ ಪಡೆಯುವ ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

’ಮೈಸೂರಿನಲ್ಲಿ ಅಧಿಕಾರಿಗಳಿಬ್ಬರ ನಡುವಣ ಸಂಘರ್ಷ ಐದಾರು ತಿಂಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿ ಅಥವಾ ಸರ್ಕಾರದ ದೌರ್ಬಲ್ಯದ ಕಾರಣದಿಂದಲೇ ಅಧಿಕಾರಿಗಳು ಸೂಪರ್‌ ಮ್ಯಾನ್‌ಗಳಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳ ಜಟಾಪಟಿಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದಂತಿದೆ. ಮೂಡ ಕಮಿಷನರ್  12 ಕೋಟಿ ರೂಪಾಯಿಗಿಂತ  ಸಿಎಸ್‌ಆರ್‌ಎಫ್ ಹೆಚ್ಚು ಹಣದ ಲೆಕ್ಕ ಕೊಟ್ಟಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಆರೋಪಿಸಿದರೆ, 42 ಕೋಟಿ ರೂಪಾಯಿ ಮಿಗಿಲಾದ ಹಣದ ದುರ್ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಸಂಸದ ಅಬ್ಬರಿಸುತ್ತಾರೆ’ ಎಂದು ಮೈಸೂರಿನಲ್ಲಿ ನಡೆಯುತ್ತಿರುವ ಆರೋಪ – ಪ್ರತ್ಯಾರೋಪದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ದ ಮಾತನಾಡಿದ್ದಕ್ಕೆ ದಾಖಲಿಸಿದ್ದ ದೇಶದ್ರೋಹ ಪ್ರಕರಣ ಸುಪ್ರೀಂನಿಂದ ರದ್ದು

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‎’ಇದು ಮುಖ್ಯಮಂತ್ರಿಯ ದೌರ್ಬಲ್ಯವೋ..? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ..? ಯಾರನ್ನು ಓಲೈಸಲು ಅಥವಾ ದೌರ್ಬಲ್ಯ ಮುಚ್ಚಿಕೊಳ್ಳಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ..? ಸರ್ಕಾರಕ್ಕೇನಾದರೂ ಕಿಂಚಿತ್ತು ಮಾನ ಮರ್ಯಾದೆ ಇದೆಯೇ..?’ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

‘ಪ್ರಜಾಪ್ರಭುತ್ವದ ಮೂರು ಮಂಗಗಳು’ ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ  ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ’ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...