Homeಕರ್ನಾಟಕದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು - ಎಚ್.ಡಿ.ಕುಮಾರಸ್ವಾಮಿ

ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..?’

- Advertisement -
- Advertisement -

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ವಾ ನಾಗ್ ನಡುವಿನ ಸಂಘರ್ಷ ಬೀದಿಗೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿನ ವಿದ್ಯಮಾನಗಳ ಬಗ್ಗೆ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ’ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ’ ಎಂದಿದ್ದಾರೆ.

’ಈ ಇಬ್ಬರು ಐಎಎಸ್ ಅಧಿಕಾರಿಗಳು ಇಷ್ಟೊಂದು ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತ ಸರಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರೂ, ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದಾರೆ..?’ ಎಂದು ಪ್ರಶ್ನಿಸಿದ್ದಾರೆ.

’ಮಹಿಳಾ ಅಧಿಕಾರಿಗಳ ಜಗಳದಲ್ಲಿ ಜನಪ್ರತಿನಿಧಿಗಳು ಪರ ವಿರೋಧದ ಹೇಳಿಕೆಗಳನ್ನು ನೀಡಿ ತಮ್ಮ ಬಾಯಿ ಚಪಲ ತೀರಿಸಿ ಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿದೆ. ಹೀಗೆ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಪರಸ್ಪರ ಕಿತ್ತಾಡಿಕೊಂಡರೆ ಬೇರೆ ಬೇರೆ ಇಲಾಖೆಯಲ್ಲಿರುವವರು ನಾಳೆ ಇದೇ “ಹಾದಿ” ತುಳಿದರೆ ರಾಜ್ಯದ ಪರಿಸ್ಥಿತಿ ಏನಾಗಬಾರದು..?’ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

’ಕೂಡಲೇ ಸರಕಾರ ಇಬ್ಬರೂ ಅಧಿಕಾರಿಗಳ ಬಾಯಿಗೆ ಬೀಗ ಹಾಕುವಂತಹ ಧೈರ್ಯವನ್ನಾದರೂ ತೋರಲಿ. ಇಲ್ಲದಿದ್ದರೆ, ನಾಳೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಮರ್ಯಾದೆ ಹರಾಜಾದರೆ ಅದಕ್ಕೆ ಈಗಿನ ಸರಕಾರವೇ ಕಾರಣವಾಗಲಿದೆ. ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿಯ ಜೀವ ಬಲಿ ಪಡೆಯಲಾಯಿತು. ಅಂತಹದೇ ಪರಿಸ್ಥಿತಿ ಮೈಸೂರಿನಲ್ಲೂ ನಿರ್ಮಾಣವಾಗಿದೆ. ಅಮಾಯಕರನ್ನು ಬಲಿ ಪಡೆಯುವ ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

’ಮೈಸೂರಿನಲ್ಲಿ ಅಧಿಕಾರಿಗಳಿಬ್ಬರ ನಡುವಣ ಸಂಘರ್ಷ ಐದಾರು ತಿಂಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿ ಅಥವಾ ಸರ್ಕಾರದ ದೌರ್ಬಲ್ಯದ ಕಾರಣದಿಂದಲೇ ಅಧಿಕಾರಿಗಳು ಸೂಪರ್‌ ಮ್ಯಾನ್‌ಗಳಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳ ಜಟಾಪಟಿಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದಂತಿದೆ. ಮೂಡ ಕಮಿಷನರ್  12 ಕೋಟಿ ರೂಪಾಯಿಗಿಂತ  ಸಿಎಸ್‌ಆರ್‌ಎಫ್ ಹೆಚ್ಚು ಹಣದ ಲೆಕ್ಕ ಕೊಟ್ಟಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಆರೋಪಿಸಿದರೆ, 42 ಕೋಟಿ ರೂಪಾಯಿ ಮಿಗಿಲಾದ ಹಣದ ದುರ್ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಸಂಸದ ಅಬ್ಬರಿಸುತ್ತಾರೆ’ ಎಂದು ಮೈಸೂರಿನಲ್ಲಿ ನಡೆಯುತ್ತಿರುವ ಆರೋಪ – ಪ್ರತ್ಯಾರೋಪದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ದ ಮಾತನಾಡಿದ್ದಕ್ಕೆ ದಾಖಲಿಸಿದ್ದ ದೇಶದ್ರೋಹ ಪ್ರಕರಣ ಸುಪ್ರೀಂನಿಂದ ರದ್ದು

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‎’ಇದು ಮುಖ್ಯಮಂತ್ರಿಯ ದೌರ್ಬಲ್ಯವೋ..? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ..? ಯಾರನ್ನು ಓಲೈಸಲು ಅಥವಾ ದೌರ್ಬಲ್ಯ ಮುಚ್ಚಿಕೊಳ್ಳಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ..? ಸರ್ಕಾರಕ್ಕೇನಾದರೂ ಕಿಂಚಿತ್ತು ಮಾನ ಮರ್ಯಾದೆ ಇದೆಯೇ..?’ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

‘ಪ್ರಜಾಪ್ರಭುತ್ವದ ಮೂರು ಮಂಗಗಳು’ ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ  ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ’ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...