Homeಕರ್ನಾಟಕದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು - ಎಚ್.ಡಿ.ಕುಮಾರಸ್ವಾಮಿ

ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..?’

- Advertisement -
- Advertisement -

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ವಾ ನಾಗ್ ನಡುವಿನ ಸಂಘರ್ಷ ಬೀದಿಗೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿನ ವಿದ್ಯಮಾನಗಳ ಬಗ್ಗೆ ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ’ಸಾಂಸ್ಕೃತಿಕ ನಗರಿ ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಅಲ್ಲಿನ ಪಾಲಿಕೆ ಆಯುಕ್ತರ ನಡುವೆ ನಡೆಸುತ್ತಿರುವ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ’ ಎಂದಿದ್ದಾರೆ.

’ಈ ಇಬ್ಬರು ಐಎಎಸ್ ಅಧಿಕಾರಿಗಳು ಇಷ್ಟೊಂದು ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತ ಸರಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರೂ, ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಏನು ಮಾಡುತ್ತಿದ್ದಾರೆ..?’ ಎಂದು ಪ್ರಶ್ನಿಸಿದ್ದಾರೆ.

’ಮಹಿಳಾ ಅಧಿಕಾರಿಗಳ ಜಗಳದಲ್ಲಿ ಜನಪ್ರತಿನಿಧಿಗಳು ಪರ ವಿರೋಧದ ಹೇಳಿಕೆಗಳನ್ನು ನೀಡಿ ತಮ್ಮ ಬಾಯಿ ಚಪಲ ತೀರಿಸಿ ಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿದೆ. ಹೀಗೆ ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಪರಸ್ಪರ ಕಿತ್ತಾಡಿಕೊಂಡರೆ ಬೇರೆ ಬೇರೆ ಇಲಾಖೆಯಲ್ಲಿರುವವರು ನಾಳೆ ಇದೇ “ಹಾದಿ” ತುಳಿದರೆ ರಾಜ್ಯದ ಪರಿಸ್ಥಿತಿ ಏನಾಗಬಾರದು..?’ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ- ಎಚ್.ಡಿ.ಕುಮಾರಸ್ವಾಮಿ

’ಕೂಡಲೇ ಸರಕಾರ ಇಬ್ಬರೂ ಅಧಿಕಾರಿಗಳ ಬಾಯಿಗೆ ಬೀಗ ಹಾಕುವಂತಹ ಧೈರ್ಯವನ್ನಾದರೂ ತೋರಲಿ. ಇಲ್ಲದಿದ್ದರೆ, ನಾಳೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಮರ್ಯಾದೆ ಹರಾಜಾದರೆ ಅದಕ್ಕೆ ಈಗಿನ ಸರಕಾರವೇ ಕಾರಣವಾಗಲಿದೆ. ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿಯ ಜೀವ ಬಲಿ ಪಡೆಯಲಾಯಿತು. ಅಂತಹದೇ ಪರಿಸ್ಥಿತಿ ಮೈಸೂರಿನಲ್ಲೂ ನಿರ್ಮಾಣವಾಗಿದೆ. ಅಮಾಯಕರನ್ನು ಬಲಿ ಪಡೆಯುವ ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

’ಮೈಸೂರಿನಲ್ಲಿ ಅಧಿಕಾರಿಗಳಿಬ್ಬರ ನಡುವಣ ಸಂಘರ್ಷ ಐದಾರು ತಿಂಗಳಿಂದ ನಡೆಯುತ್ತಿದೆ. ಮುಖ್ಯಮಂತ್ರಿ ಅಥವಾ ಸರ್ಕಾರದ ದೌರ್ಬಲ್ಯದ ಕಾರಣದಿಂದಲೇ ಅಧಿಕಾರಿಗಳು ಸೂಪರ್‌ ಮ್ಯಾನ್‌ಗಳಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳ ಜಟಾಪಟಿಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದಂತಿದೆ. ಮೂಡ ಕಮಿಷನರ್  12 ಕೋಟಿ ರೂಪಾಯಿಗಿಂತ  ಸಿಎಸ್‌ಆರ್‌ಎಫ್ ಹೆಚ್ಚು ಹಣದ ಲೆಕ್ಕ ಕೊಟ್ಟಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಆರೋಪಿಸಿದರೆ, 42 ಕೋಟಿ ರೂಪಾಯಿ ಮಿಗಿಲಾದ ಹಣದ ದುರ್ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಸಂಸದ ಅಬ್ಬರಿಸುತ್ತಾರೆ’ ಎಂದು ಮೈಸೂರಿನಲ್ಲಿ ನಡೆಯುತ್ತಿರುವ ಆರೋಪ – ಪ್ರತ್ಯಾರೋಪದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ದ ಮಾತನಾಡಿದ್ದಕ್ಕೆ ದಾಖಲಿಸಿದ್ದ ದೇಶದ್ರೋಹ ಪ್ರಕರಣ ಸುಪ್ರೀಂನಿಂದ ರದ್ದು

’ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು..? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‎’ಇದು ಮುಖ್ಯಮಂತ್ರಿಯ ದೌರ್ಬಲ್ಯವೋ..? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ..? ಯಾರನ್ನು ಓಲೈಸಲು ಅಥವಾ ದೌರ್ಬಲ್ಯ ಮುಚ್ಚಿಕೊಳ್ಳಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ..? ಸರ್ಕಾರಕ್ಕೇನಾದರೂ ಕಿಂಚಿತ್ತು ಮಾನ ಮರ್ಯಾದೆ ಇದೆಯೇ..?’ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

‘ಪ್ರಜಾಪ್ರಭುತ್ವದ ಮೂರು ಮಂಗಗಳು’ ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ  ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ’ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...