Homeಮುಖಪುಟಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

ಪ್ರಹ್ಲಾದ್ ಜೋಶಿ ಪೇಶ್ವೆ ಬ್ರಾಹ್ಮಣ ಎಂಬ HDK ಆರೋಪ: ಆಪ್, ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು ಎಂಬ  ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಪ್, ಕಾಂಗ್ರೆಸ್ ಮತ್ತು ನಟ ಚೇತನ್ ಪ್ರತಿಕ್ರಿಯಿಸಿದ್ದಾರೆ.

ಮಾನ್ಯ ಹೆಚ್.ಡಿ ದೇವೆಗೌಡರು ಎಲ್ಲಾ ಸಮುದಾಯದ ಬಗ್ಗೆ ಅಪಾರ ಗೌರವ ಕಾಳಜಿಯನ್ನು ಹೊಂದಿದ್ದಾರೆ. ಆದರೆ ಹೆಚ್.ಡಿ ಕುಮಾರಸ್ವಾಮಿರವರು ಬ್ರಾಹ್ಮಣ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಆಪ್ ಮುಖಂಡರಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಯಾವುದೇ ಜಾತಿಯ ಹೆಸರು ಹಿಡಿದು ಆರೋಪ ಮಾಡುವುದು ಶೋಭೆಯಲ್ಲ. ಎಲ್ಲ ಜಾತಿ ಸಮುದಾಯದಲ್ಲಿಯೂ ಅನೇಕ ಉಪಜಾತಿಗಳಿವೆ. ಜಾತಿ ವಿಷಯದಲ್ಲಿ ರಾಜಕಾರಣ ಸಲ್ಲದು. ಬ್ರಾಹ್ಮಣ ಸಮುದಾಯ ಬಗ್ಗೆ ಮಾತನಾಡಿರುವ ಶಾಪ ಅವರನ್ನು ತಟ್ಟದೆ ಬಿಡದು ಎಂದು ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ: ನಟ ಚೇತನ್ ಆರೋಪ

“ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಾರೆ, ಪ್ರಲ್ಹಾದ್ ಜೋಶಿಯು ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಂಪ್ರದಾಯದಿಂದ ಬಂದವರು; ಜೋಶಿ ‘ಹಳೆಯ ಕರ್ನಾಟಕದ ಸಂಪ್ರದಾಯದ’ ಬ್ರಾಹ್ಮಣರಲ್ಲ- ನಾವು ‘ಹಳೆಯ ಕರ್ನಾಟಕ ಸಂಪ್ರದಾಯದ’ ಬ್ರಾಹ್ಮಣರನ್ನು ಪೂಜಿಸುತ್ತೇವೆ ಮತ್ತು ಅವರ ಕಾಲಿಗೆ ಬೀಳುತ್ತೇವೆ ಎಂದು.
ಇದು ಎಂತಹ ಪಂಥೀಯ ಮತ್ತು ಮೂಢನಂಬಿಕೆಯ ಅಸಂಬದ್ಧತೆ! ನಮಗೆ ಬ್ರಾಹ್ಮಣರು ಸಮಸ್ಯೆಯಲ್ಲ, ಬ್ರಾಹ್ಮಣ್ಯವು ದೊಡ್ಡ ಸಮಸ್ಯೆ. ಜೆಡಿಎಸ್ ಒಂದು ಬ್ರಾಹ್ಮಣ್ಯದ ಪಕ್ಷ” ಎಂದು ನಟ ಚೇತನ್ ಆರೋಪಿಸಿದ್ದಾರೆ.

ಇನ್ನು ಪ್ರಹ್ಲಾದ್ ಜೋಶಿ ಮತ್ತು ಬ್ರಾಹ್ಮಣರ ಕುರಿತ ತಮ್ಮ ಹೇಳಿಕೆಯನ್ನು ಹೆಚ್.ಡಿ ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ. “ಇತಿಹಾಸ ತೆಗೆದುನೋಡಿ. ಶೃಂಗೇರಿಯ ವಿದ್ಯಾರಣ್ಯರು ಕಟ್ಟಿದಂತಹ ಚಂದ್ರಮೌಳೇಶ್ವರ ದೇವಾಲಯದ ಮೇಲೆ ದಾಳಿ ಮಾಡಿ ಒಡೆದು ಹಾಕಿದವರು ಯಾರು? ಅದನ್ನು ಇಲ್ಲಿಯವರೆಗೂ ಅದನ್ನು ಪುನರ್‌ ನಿರ್ಮಿಸದಿರಲು ಕಾರಣವೇನು?  ಶೃಂಗೇರಿಯ ಗುರುಗಳು ಕಟ್ಟಬಹುದಾಗಿತ್ತು. ಅದನ್ನು ಕಟ್ಟದಿರಲು ಕಾರಣವೆಂದರೆ ಇತಿಹಾಸದಲ್ಲಿ ಈ ರೀತಿಯ ದಾಳಿ ನಡೆಸಿರುವುದು ಸಾರ್ವಜನಿಕರಿಗೆ ಗೊತ್ತಾಗಲೆಂದು” ಎಂದು ಹೇಳಿದ್ದಾರೆ.

ಇದು ಪಂಚರತ್ನ ಯಾತ್ರೆಯಲ್ಲ, ಅದಕ್ಕೆ ನವಗ್ರಹ ಹಿಡಿದಿದೆ ಎಂದು ಟೀಕಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹೆಚ್‌ಡಿಕೆ ತರಾಟೆಗೆ ತೆಗೆದುಕೊಂಡಿದ್ದರು. ಭಾನುವಾರ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಭಾಗದ ಬ್ರಾಹ್ಮಣ ಸಮಾಜ ಸರ್ವಜನೋ ಸುಖಿನೋ ಭವಂತು ಎನ್ನುವವರು. ಇವರು ನಮ್ಮ ಭಾಗದ ಬ್ರಾಹ್ಮಣರಲ್ಲ. ಮಹಾರಾಷ್ಟ್ರದ ಮರಾಠ ಪೇಶ್ವೆ ವಂಶಕ್ಕೆ ಸೇರಿದವರು. ಅವರಿಗೆ ಸಂಸ್ಕತಿ ಬೇಕಿಲ್ಲ, ದೇಶ ಒಡೆಯುವ ಕುತಂತ್ರ ರಾಜಕಾರಣ ಮಾಡುತ್ತಾರೆ. ದೇಶಭಕ್ತಿಯ ಹೆಸರಿನಲ್ಲಿ ದೇಶಕ್ಕೆ ಕೊಡುಗೆ ಕೊಟ್ಟವರನ್ನು ಕೊಂದ ಪ್ರವರ್ಗದಿಂದ ಬಂದಂತವರು” ಎಂದಿದ್ದಾರೆ.

ವೀರಶೈವ ಸಮಾಜ, ಒಕ್ಕಲಿಗ ಸಮಾಜ, ಹಿಂದುಳಿದ ಮತ್ತು ದಲಿತ ಜನರು ಈ ಬಿಜೆಪಿಯ, ಆರ್‌ಎಸ್‌ಎಸ್‌ನ ಹುನ್ನಾರ, ಕುತಂತ್ರಕ್ಕೆ ಬಲಿಯಾಗಬಾರದು ಎಂದು ಹೇಳುತ್ತೇನೆ. ಇವರು ಈ ರಾಜ್ಯ ಒಡೆಯುತ್ತಾರೆ. ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಿ 8 ಜನರನ್ನು ಉಪ ಮುಖ್ಯಮಂತ್ರಿಗಳಾಗಿ ಮಾಡಲು ದೆಹಲಿಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಸಭೆ ನಡೆಸಿರುವುದರ ಕುರಿತು ನನಗೆ ಮಾಹಿತಿ ಬಂದಿದೆ ಎಂದಿದ್ದಾರೆ.

ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲಿ ಸಂಸ್ಕೃತಿಯಿದೆ. ನಾವು ಅವರ ಕಾಲಿಗೆ ಬೀಳುತ್ತೇವೆ, ಅವರನ್ನು ಪೂಜಿಸುತ್ತೇವೆ ಮತ್ತು ಗುರುಗಳ ರೀತಿ ಕಾಣುತ್ತೇವೆ. ಆದರೆ ಮೇಲಿನ ವರ್ಗದ ಬ್ರಾಹ್ಮಣರು ಸಮಾಜ ಒಡೆಯುವವರು. ಶೃಂಗೇರಿ ಮಠವನ್ನು ಒಡೆದು, ಶಂಕರಾಚಾರ್ಯರ ವಂಶಸ್ಥರನ್ನು ಓಡಿಸಿದಂತವರು. ಆ ವರ್ಗದ ಬ್ರಾಹ್ಮಣರು ಕುರಿತು ಕರ್ನಾಟಕದ ಕನ್ನಡಿಗರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...