Homeಕರ್ನಾಟಕಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತವೆ ಎನ್ನುವ ಮಾತುಗಳು ರಾಜ್ಯದಲ್ಲಿ ಸದ್ದು ಮಾಡಿತ್ತು. ಈ ಮಾತಿಗೆ ಪ್ರತಿಕ್ರಿಯೇ ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ಗಾಳಿಸುದ್ದಿ ಎಂದು ಹೇಳುವ ಮೂಲಕ ಮೈತ್ರಿಯನ್ನು ಅಲ್ಲಗಳೆದಿದ್ದಾರೆ.

ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ”ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಜೊತೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ, ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ” ಎಂದು ಹೇಳಿದರು.

ಮಾಧ್ಯಮದವರು, ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ”ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.

ಇದೇ ವೇಳೆ ಡಿಕೆ ಸುರೇಶ್ ವಿರುದ್ಧ ಹರಿಹಾಯ್ದ ಅವರು, ”ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ.. ಅವರನ್ನು ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ?”ಹೆಚ್‌ಡಿಕೆ ಟಾಂಗ್ ಕೊಟ್ಟರು.

ಗ್ಯಾರಂಟಿಗಳ ಬಗ್ಗೆ ಗೊಂದಲವಿದೆ:

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾಂಟಿಗಳ ಜಾರಿಗೆ ಮುಂದಾಗಿದ್ದು, ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಈ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ”ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವರೀತಿ ನಿಬಾಯಿಸುತ್ತಾರೆ ನೋಡಬೇಕು” ಎಂದರು.

ಈ ವೇಳೆ ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ್ದರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೀಗ ನಿಮ್ಮದೇ ಸರ್ಕಾರ ಇದೆ, 40% ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ”ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ” ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.

”ಈಗ ಕಾಂಗ್ರೆಸ್‌ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು?” ಎಂದು ಅವರು ಪ್ರಶ್ನಿಸಿದರು.

”ಕಳೆದ ಮೇ 8ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ” ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...