Homeಕರ್ನಾಟಕಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸ್ಪಷ್ಟಣೆ ನೀಡಿದ ಹೆಚ್‌ಡಿಕೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತವೆ ಎನ್ನುವ ಮಾತುಗಳು ರಾಜ್ಯದಲ್ಲಿ ಸದ್ದು ಮಾಡಿತ್ತು. ಈ ಮಾತಿಗೆ ಪ್ರತಿಕ್ರಿಯೇ ನೀಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ಗಾಳಿಸುದ್ದಿ ಎಂದು ಹೇಳುವ ಮೂಲಕ ಮೈತ್ರಿಯನ್ನು ಅಲ್ಲಗಳೆದಿದ್ದಾರೆ.

ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ”ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಜೊತೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ, ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ” ಎಂದು ಹೇಳಿದರು.

ಮಾಧ್ಯಮದವರು, ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ”ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ.

ಇದೇ ವೇಳೆ ಡಿಕೆ ಸುರೇಶ್ ವಿರುದ್ಧ ಹರಿಹಾಯ್ದ ಅವರು, ”ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ.. ಅವರನ್ನು ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ?”ಹೆಚ್‌ಡಿಕೆ ಟಾಂಗ್ ಕೊಟ್ಟರು.

ಗ್ಯಾರಂಟಿಗಳ ಬಗ್ಗೆ ಗೊಂದಲವಿದೆ:

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾಂಟಿಗಳ ಜಾರಿಗೆ ಮುಂದಾಗಿದ್ದು, ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಈ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ”ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವರೀತಿ ನಿಬಾಯಿಸುತ್ತಾರೆ ನೋಡಬೇಕು” ಎಂದರು.

ಈ ವೇಳೆ ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿದ್ದರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೀಗ ನಿಮ್ಮದೇ ಸರ್ಕಾರ ಇದೆ, 40% ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ”ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ” ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.

”ಈಗ ಕಾಂಗ್ರೆಸ್‌ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು?” ಎಂದು ಅವರು ಪ್ರಶ್ನಿಸಿದರು.

”ಕಳೆದ ಮೇ 8ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ” ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...