Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ಎನ್‌ಐಎ ಹೊಸ ಮೂರು ಎನ್‌ಐಎ ಘಟಕಗಳನ್ನು ಆರಂಭಿಸಿದ್ದು, ಪಟ್ಟಿಯಲ್ಲಿ ಬೆಂಗಳೂರಿನ ಹೆಸರಿಲ್ಲ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಳಗಿನ ಕೆಲ ಅಪ್ರಭುದ್ಧರ ಹೇಳಿಕೆ ಪಕ್ಷದ ಹಿರಿಯ ನಾಯಕರಿಗೆ ಅವಮಾನ ಎಂದಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ ಬೆಂಗಳೂರನ್ನು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ ಎಂದು ಹೇಳಿಕೆ ನೀಡಿದವರಿಂದ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!’ ಎಂದು ವ್ಯಂಗ್ಯವಾಡಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಇನ್ನೂ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕ ಚಟುವಟಿಕೆಗೆ ಉದಾಹರಣೆ ನೀಡಿದ್ದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಗಳ ಕುರಿತು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ’ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅಪ್ರಭುದ್ಧರ ಹೇಳಿಕೆಯಿಂದ ಬೆಂಗಳೂರಿಗೆ ಅವಮಾನ. ಜೊತೆಗೆ ಪಕ್ಷದ ಹಿರಿಯರಿಗೂ ಅವಮಾನ ಎಂದಿದ್ದಾರೆ.

ಇತ್ತ ಗೃಹ ಸಚಿವ ಅಮಿತ್ ಶಾಗೆ ಮನವಿ ಸಲ್ಲಿಸಿದ್ದೇನೆ. ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ನಿನ್ನೆ ಎನ್‌ಐಎ  ಹೊಸ ಮೂರು ಎನ್‌ಐಎ ಘಟಕಗಳನ್ನು ಮಂಜೂರು ಮಾಡಿದ್ದು, ಸಂಸ್ಥೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಹೆಸರು ಇಲ್ಲ. ಅಂದರೆ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರದ ಆರಂಭಕ್ಕೆ ಯಾವುದೇ ಸೂಚನೆ ದೊರೆತಿಲ್ಲ.

ಇಂಫಾಲ್ (ಮಣಿಪುರ), ಚೆನ್ನೈ (ತಮಿಳುನಾಡು) ಮತ್ತು ರಾಂಚಿ (ಜಾರ್ಖಂಡ್)ಯಲ್ಲಿ ಹೊಸ ಮೂರು ಹೆಚ್ಚುವರಿ ಶಾಖೆಗಳನ್ನು ಮಂಜೂರು  ಮಾಡಲು ಗೃಹ ಸಚಿವಾಲಯ (ಎಂಎಚ್‌ಎ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಮಂಜೂರು ಮಾಡಿದೆ. ಈ ಮೂರು ಕಡೆ ಮಾತ್ರ ಸದ್ಯ ಎನ್‌ಐಎ ಘಟಕ ಆರಂಭಿಸಲಾಗುತ್ತದೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪ್ರಸ್ತುತ, ಎನ್ಐಎ ಭಾರತದಾದ್ಯಂತ ಒಂಬತ್ತು ಶಾಖೆಗಳನ್ನು ಹೊಂದಿದೆ. ಅವು ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತಾ, ಹೈದರಾಬಾದ್, ಕೊಚ್ಚಿ, ಲಕ್ನೋ, ರಾಯ್‌ಪುರ ಮತ್ತು ಚಂಡೀಗಡದಲ್ಲಿವೆ, ನವದೆಹಲಿಯಲ್ಲಿ  ವಿಶೇಷ ಘಟಕಗಳಿವೆ. ಬೆಂಗಳೂರಿನಲ್ಲಿ ಎನ್‌ಐಎ ಉಪಶಾಖೆ ಇದ್ದು, ಇದು ಹೈದರಾಬಾದ್ ಎನ್‌ಐಎ ಪ್ರಾದೇಶಿಕ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ತೇಜಸ್ವಿ ಸೂರ್ಯ ಹೇಳಿಕೆಗೆ ನೆಟ್ಟಿಗರು ಮತ್ತು ರಾಜಕೀಯ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್ ಮುಖಂಡ ಪ್ರಿಯಾಂಕ್‌ ಖರ್ಗೆ, ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿ, ತೇಜಸ್ವಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು.


ಇದನ್ನೂ ಓದಿ: ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...