Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ಎನ್‌ಐಎ ಹೊಸ ಮೂರು ಎನ್‌ಐಎ ಘಟಕಗಳನ್ನು ಆರಂಭಿಸಿದ್ದು, ಪಟ್ಟಿಯಲ್ಲಿ ಬೆಂಗಳೂರಿನ ಹೆಸರಿಲ್ಲ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಳಗಿನ ಕೆಲ ಅಪ್ರಭುದ್ಧರ ಹೇಳಿಕೆ ಪಕ್ಷದ ಹಿರಿಯ ನಾಯಕರಿಗೆ ಅವಮಾನ ಎಂದಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ ಬೆಂಗಳೂರನ್ನು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ ಎಂದು ಹೇಳಿಕೆ ನೀಡಿದವರಿಂದ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!’ ಎಂದು ವ್ಯಂಗ್ಯವಾಡಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಇನ್ನೂ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕ ಚಟುವಟಿಕೆಗೆ ಉದಾಹರಣೆ ನೀಡಿದ್ದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಗಳ ಕುರಿತು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ’ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅಪ್ರಭುದ್ಧರ ಹೇಳಿಕೆಯಿಂದ ಬೆಂಗಳೂರಿಗೆ ಅವಮಾನ. ಜೊತೆಗೆ ಪಕ್ಷದ ಹಿರಿಯರಿಗೂ ಅವಮಾನ ಎಂದಿದ್ದಾರೆ.

ಇತ್ತ ಗೃಹ ಸಚಿವ ಅಮಿತ್ ಶಾಗೆ ಮನವಿ ಸಲ್ಲಿಸಿದ್ದೇನೆ. ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ನಿನ್ನೆ ಎನ್‌ಐಎ  ಹೊಸ ಮೂರು ಎನ್‌ಐಎ ಘಟಕಗಳನ್ನು ಮಂಜೂರು ಮಾಡಿದ್ದು, ಸಂಸ್ಥೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಹೆಸರು ಇಲ್ಲ. ಅಂದರೆ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರದ ಆರಂಭಕ್ಕೆ ಯಾವುದೇ ಸೂಚನೆ ದೊರೆತಿಲ್ಲ.

ಇಂಫಾಲ್ (ಮಣಿಪುರ), ಚೆನ್ನೈ (ತಮಿಳುನಾಡು) ಮತ್ತು ರಾಂಚಿ (ಜಾರ್ಖಂಡ್)ಯಲ್ಲಿ ಹೊಸ ಮೂರು ಹೆಚ್ಚುವರಿ ಶಾಖೆಗಳನ್ನು ಮಂಜೂರು  ಮಾಡಲು ಗೃಹ ಸಚಿವಾಲಯ (ಎಂಎಚ್‌ಎ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಮಂಜೂರು ಮಾಡಿದೆ. ಈ ಮೂರು ಕಡೆ ಮಾತ್ರ ಸದ್ಯ ಎನ್‌ಐಎ ಘಟಕ ಆರಂಭಿಸಲಾಗುತ್ತದೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪ್ರಸ್ತುತ, ಎನ್ಐಎ ಭಾರತದಾದ್ಯಂತ ಒಂಬತ್ತು ಶಾಖೆಗಳನ್ನು ಹೊಂದಿದೆ. ಅವು ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತಾ, ಹೈದರಾಬಾದ್, ಕೊಚ್ಚಿ, ಲಕ್ನೋ, ರಾಯ್‌ಪುರ ಮತ್ತು ಚಂಡೀಗಡದಲ್ಲಿವೆ, ನವದೆಹಲಿಯಲ್ಲಿ  ವಿಶೇಷ ಘಟಕಗಳಿವೆ. ಬೆಂಗಳೂರಿನಲ್ಲಿ ಎನ್‌ಐಎ ಉಪಶಾಖೆ ಇದ್ದು, ಇದು ಹೈದರಾಬಾದ್ ಎನ್‌ಐಎ ಪ್ರಾದೇಶಿಕ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ತೇಜಸ್ವಿ ಸೂರ್ಯ ಹೇಳಿಕೆಗೆ ನೆಟ್ಟಿಗರು ಮತ್ತು ರಾಜಕೀಯ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್ ಮುಖಂಡ ಪ್ರಿಯಾಂಕ್‌ ಖರ್ಗೆ, ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿ, ತೇಜಸ್ವಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು.


ಇದನ್ನೂ ಓದಿ: ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...