Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ಎನ್‌ಐಎ ಹೊಸ ಮೂರು ಎನ್‌ಐಎ ಘಟಕಗಳನ್ನು ಆರಂಭಿಸಿದ್ದು, ಪಟ್ಟಿಯಲ್ಲಿ ಬೆಂಗಳೂರಿನ ಹೆಸರಿಲ್ಲ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಳಗಿನ ಕೆಲ ಅಪ್ರಭುದ್ಧರ ಹೇಳಿಕೆ ಪಕ್ಷದ ಹಿರಿಯ ನಾಯಕರಿಗೆ ಅವಮಾನ ಎಂದಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ ಬೆಂಗಳೂರನ್ನು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ ಎಂದು ಹೇಳಿಕೆ ನೀಡಿದವರಿಂದ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!’ ಎಂದು ವ್ಯಂಗ್ಯವಾಡಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಇನ್ನೂ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕ ಚಟುವಟಿಕೆಗೆ ಉದಾಹರಣೆ ನೀಡಿದ್ದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಗಳ ಕುರಿತು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ’ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅಪ್ರಭುದ್ಧರ ಹೇಳಿಕೆಯಿಂದ ಬೆಂಗಳೂರಿಗೆ ಅವಮಾನ. ಜೊತೆಗೆ ಪಕ್ಷದ ಹಿರಿಯರಿಗೂ ಅವಮಾನ ಎಂದಿದ್ದಾರೆ.

ಇತ್ತ ಗೃಹ ಸಚಿವ ಅಮಿತ್ ಶಾಗೆ ಮನವಿ ಸಲ್ಲಿಸಿದ್ದೇನೆ. ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ನಿನ್ನೆ ಎನ್‌ಐಎ  ಹೊಸ ಮೂರು ಎನ್‌ಐಎ ಘಟಕಗಳನ್ನು ಮಂಜೂರು ಮಾಡಿದ್ದು, ಸಂಸ್ಥೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಹೆಸರು ಇಲ್ಲ. ಅಂದರೆ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರದ ಆರಂಭಕ್ಕೆ ಯಾವುದೇ ಸೂಚನೆ ದೊರೆತಿಲ್ಲ.

ಇಂಫಾಲ್ (ಮಣಿಪುರ), ಚೆನ್ನೈ (ತಮಿಳುನಾಡು) ಮತ್ತು ರಾಂಚಿ (ಜಾರ್ಖಂಡ್)ಯಲ್ಲಿ ಹೊಸ ಮೂರು ಹೆಚ್ಚುವರಿ ಶಾಖೆಗಳನ್ನು ಮಂಜೂರು  ಮಾಡಲು ಗೃಹ ಸಚಿವಾಲಯ (ಎಂಎಚ್‌ಎ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಮಂಜೂರು ಮಾಡಿದೆ. ಈ ಮೂರು ಕಡೆ ಮಾತ್ರ ಸದ್ಯ ಎನ್‌ಐಎ ಘಟಕ ಆರಂಭಿಸಲಾಗುತ್ತದೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪ್ರಸ್ತುತ, ಎನ್ಐಎ ಭಾರತದಾದ್ಯಂತ ಒಂಬತ್ತು ಶಾಖೆಗಳನ್ನು ಹೊಂದಿದೆ. ಅವು ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತಾ, ಹೈದರಾಬಾದ್, ಕೊಚ್ಚಿ, ಲಕ್ನೋ, ರಾಯ್‌ಪುರ ಮತ್ತು ಚಂಡೀಗಡದಲ್ಲಿವೆ, ನವದೆಹಲಿಯಲ್ಲಿ  ವಿಶೇಷ ಘಟಕಗಳಿವೆ. ಬೆಂಗಳೂರಿನಲ್ಲಿ ಎನ್‌ಐಎ ಉಪಶಾಖೆ ಇದ್ದು, ಇದು ಹೈದರಾಬಾದ್ ಎನ್‌ಐಎ ಪ್ರಾದೇಶಿಕ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ತೇಜಸ್ವಿ ಸೂರ್ಯ ಹೇಳಿಕೆಗೆ ನೆಟ್ಟಿಗರು ಮತ್ತು ರಾಜಕೀಯ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್ ಮುಖಂಡ ಪ್ರಿಯಾಂಕ್‌ ಖರ್ಗೆ, ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿ, ತೇಜಸ್ವಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು.


ಇದನ್ನೂ ಓದಿ: ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....