Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ತೇಜಸ್ವಿ ಸೂರ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ: ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ

ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ಎನ್‌ಐಎ ಹೊಸ ಮೂರು ಎನ್‌ಐಎ ಘಟಕಗಳನ್ನು ಆರಂಭಿಸಿದ್ದು, ಪಟ್ಟಿಯಲ್ಲಿ ಬೆಂಗಳೂರಿನ ಹೆಸರಿಲ್ಲ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಳಗಿನ ಕೆಲ ಅಪ್ರಭುದ್ಧರ ಹೇಳಿಕೆ ಪಕ್ಷದ ಹಿರಿಯ ನಾಯಕರಿಗೆ ಅವಮಾನ ಎಂದಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ ಬೆಂಗಳೂರನ್ನು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ ಎಂದು ಹೇಳಿಕೆ ನೀಡಿದವರಿಂದ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!’ ಎಂದು ವ್ಯಂಗ್ಯವಾಡಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳಿಂದ ಎಲ್ಲವೂ ಅಸ್ತವ್ಯಸ್ತ: ಪಶ್ಚಿಮ ಬಂಗಾಳ ಸರ್ಕಾರದ ಆತಂಕ

ಇನ್ನೂ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕ ಚಟುವಟಿಕೆಗೆ ಉದಾಹರಣೆ ನೀಡಿದ್ದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಗಳ ಕುರಿತು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ’ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅಪ್ರಭುದ್ಧರ ಹೇಳಿಕೆಯಿಂದ ಬೆಂಗಳೂರಿಗೆ ಅವಮಾನ. ಜೊತೆಗೆ ಪಕ್ಷದ ಹಿರಿಯರಿಗೂ ಅವಮಾನ ಎಂದಿದ್ದಾರೆ.

ಇತ್ತ ಗೃಹ ಸಚಿವ ಅಮಿತ್ ಶಾಗೆ ಮನವಿ ಸಲ್ಲಿಸಿದ್ದೇನೆ. ಶೀಘ್ರದಲ್ಲಿ ಬೆಂಗಳೂರಲ್ಲಿ ಎನ್‌ಐಎ ಕೇಂದ್ರ ಆರಂಭವಾಗುತ್ತದೆ ಎಂದಿದ್ದ ತೇಜಸ್ವಿ ಸೂರ್ಯಗೆ ಮುಖಭಂಗವಾಗಿದೆ. ನಿನ್ನೆ ಎನ್‌ಐಎ  ಹೊಸ ಮೂರು ಎನ್‌ಐಎ ಘಟಕಗಳನ್ನು ಮಂಜೂರು ಮಾಡಿದ್ದು, ಸಂಸ್ಥೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಹೆಸರು ಇಲ್ಲ. ಅಂದರೆ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರದ ಆರಂಭಕ್ಕೆ ಯಾವುದೇ ಸೂಚನೆ ದೊರೆತಿಲ್ಲ.

ಇಂಫಾಲ್ (ಮಣಿಪುರ), ಚೆನ್ನೈ (ತಮಿಳುನಾಡು) ಮತ್ತು ರಾಂಚಿ (ಜಾರ್ಖಂಡ್)ಯಲ್ಲಿ ಹೊಸ ಮೂರು ಹೆಚ್ಚುವರಿ ಶಾಖೆಗಳನ್ನು ಮಂಜೂರು  ಮಾಡಲು ಗೃಹ ಸಚಿವಾಲಯ (ಎಂಎಚ್‌ಎ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಮಂಜೂರು ಮಾಡಿದೆ. ಈ ಮೂರು ಕಡೆ ಮಾತ್ರ ಸದ್ಯ ಎನ್‌ಐಎ ಘಟಕ ಆರಂಭಿಸಲಾಗುತ್ತದೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪ್ರಸ್ತುತ, ಎನ್ಐಎ ಭಾರತದಾದ್ಯಂತ ಒಂಬತ್ತು ಶಾಖೆಗಳನ್ನು ಹೊಂದಿದೆ. ಅವು ಗುವಾಹಟಿ, ಮುಂಬೈ, ಜಮ್ಮು, ಕೋಲ್ಕತಾ, ಹೈದರಾಬಾದ್, ಕೊಚ್ಚಿ, ಲಕ್ನೋ, ರಾಯ್‌ಪುರ ಮತ್ತು ಚಂಡೀಗಡದಲ್ಲಿವೆ, ನವದೆಹಲಿಯಲ್ಲಿ  ವಿಶೇಷ ಘಟಕಗಳಿವೆ. ಬೆಂಗಳೂರಿನಲ್ಲಿ ಎನ್‌ಐಎ ಉಪಶಾಖೆ ಇದ್ದು, ಇದು ಹೈದರಾಬಾದ್ ಎನ್‌ಐಎ ಪ್ರಾದೇಶಿಕ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ತೇಜಸ್ವಿ ಸೂರ್ಯ ಹೇಳಿಕೆಗೆ ನೆಟ್ಟಿಗರು ಮತ್ತು ರಾಜಕೀಯ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್ ಮುಖಂಡ ಪ್ರಿಯಾಂಕ್‌ ಖರ್ಗೆ, ಶಾಸಕಿ ಸೌಮ್ಯಾ ರೆಡ್ಡಿ ಸೇರಿದಂತೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿ, ತೇಜಸ್ವಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು.


ಇದನ್ನೂ ಓದಿ: ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...